ಬ್ರೇಕಿಂಗ್ ನ್ಯೂಸ್
24-12-23 08:59 pm Mangaluru Correspondent ಕರಾವಳಿ
ಬಂಟ್ವಾಳ, ಡಿ.24: ಹಣ ಡಬ್ಬಲ್ ಆಗುತ್ತೆ ಎಂದು ದಲ್ಲಾಳಿಗಳ ಮಾತು ನಂಬಿ ಆ್ಯಪ್ ಒಂದಕ್ಕೆ ಹೂಡಿಕೆ ಮಾಡಿ ಸುಮಾರು 21 ಲಕ್ಷ ರೂಪಾಯಿ ಕಳಕೊಂಡಿದ್ದ ಮಹಿಳೆಯೊಬ್ಬರು ಸಂಗಬೆಟ್ಟು ಸಮೀಪದ ಪುಚ್ಚಮೊಗರು ಎಂಬಲ್ಲಿ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಕ್ಕಿಪಾಡಿ ಗ್ರಾಮದ ಏರೋಡಿಯ ಜಾನ್ ಸಂತೋಷ್ ಡಿಸೋಜ ಎಂಬವರ ಪತ್ನಿ ವೀಟಾ ಮರಿನಾ ಡಿಸೋಜ (32) ಮೃತರು. ವೀಟಾ ಮರೀನಾ ಅವರು ಈ ಹಿಂದೆ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು ಬಳಿಕ ಹುದ್ದೆ ತೊರೆದು ವಿಮಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದರು. ಈ ನಡುವೆ ಯಾವುದೋ ಮೊಬೈಲ್ ಆ್ಯಪ್ ನಲ್ಲಿ ಹಣ ಹೂಡಿದರೆ ಡಬಲ್ ಆಗುತ್ತದೆ ಎಂದು ನಂಬಿ, ಸುಮಾರು 21 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡಿದ್ದರು. ಈ ಬಗ್ಗೆ ಅವರು ಬಂಟ್ವಾಳ ಪೊಲೀಸರಿಗೂ ದೂರು ನೀಡಿದ್ದರು.
ಡಿ.23ರ ಶನಿವಾರ ರಾತ್ರಿ 9 ಗಂಟೆಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ ವೀಟಾ ಬಳಿಕ ನಾಪತ್ತೆಯಾಗಿದ್ದರು. ವಿಷಯ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದ್ದು ಫಲ್ಗುಣಿ ಸೇತುವೆಯಲ್ಲಿ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಅಗ್ನಿಶಾಮಕದಳದ ಸಿಬ್ಬಂದಿ ಭಾನುವಾರ ಬೆಳಗ್ಗೆ ನದಿಯಲ್ಲಿ ಹುಡುಕಾಡಿದ್ದು ಶವ ಪತ್ತೆಯಾಗಿದೆ.
ಬಹುಗ್ರಾಮ ಕುಡಿಯುವ ನೀರು ಪೂರೈಕೆಗಾಗಿ ನಿರ್ಮಿಸಿರುವ ಅಣೆಕಟ್ಟೆ ಬಳಿ ಭಾನುವಾರ ಮೃತದೇಹ ಪತ್ತೆಯಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆ ಮಹಿಳಾ ಎಸ್ ಐ ಭಾರತಿ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೇ ಭೇಟಿ ನೀಡಿ, ಮಹಜರು ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದೆ
Money doubling, woman commits suicide after losing 21 lakhs in Bantwal Mangalore
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm