ಬ್ರೇಕಿಂಗ್ ನ್ಯೂಸ್
26-12-23 01:09 pm Mangalore Correspondent ಕರಾವಳಿ
ಮಂಗಳೂರು, ಡಿ.26: ಸೆಮಿ ಹೈ ಸ್ಪೀಡ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು - ಮಡಗಾಂವ್ ಮಧ್ಯೆ ಪ್ರಾಯೋಗಿಕ ಓಡಾಟ ನಡೆಸಿದೆ. ಇಂದು ಬೆಳಗ್ಗೆ 8.30ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಮಡಗಾಂವ್ ಹೊರಟಿದೆ.
ಇಂದಿನಿಂದ ಮೂರು ದಿನ ಪ್ರಾಯೋಗಿಕ ಓಡಾಟ ನಡೆಸಲಿದೆ ಎಂದು ರೈಲ್ವೇ ಮೂಲಗಳಿಂದ ತಿಳಿದುಬಂದಿದೆ. ಮಂಗಳವಾರ ಬೆಳಗ್ಗೆ 8:30ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹೊರಟ ರೈಲು ಮಧ್ಯಾಹ್ನ 1:15ಕ್ಕೆ ಮಡಗಾಂವ್ (ಗೋವಾ) ತಲುಪಲಿದೆ. ವಾಪಾಸು ಮಧ್ಯಾಹ್ನ 1:45ಕ್ಕೆ ಮಡಗಾಂವ್ ನಿಂದ ಹೊರಟು ಸಂಜೆ 6:30ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ. ಇಂದು ಬೆಳಗ್ಗೆ ಪ್ರಾಯೋಗಿಕ ಓಡಾಟ ಸಂದರ್ಭದಲ್ಲಿ ಮಂಗಳೂರು ಸಂಸದ ನಳಿನ್ ಕುಮಾರ್, ಶಾಸಕ ವೇದವ್ಯಾಸ ಕಾಮತ್ ರೈಲಿನ ವೀಕ್ಷಣೆ ಮಾಡಿದ್ದಾರೆ.
ನೂತನ ವಂದೇ ಭಾರತ್ ರೈಲು ಚೆನ್ನೈಯಿಂದ ಹೊರಟು ಕೇರಳದ ಕೋಝಿಕೋಡ್ ಮಾರ್ಗವಾಗಿ ಸೋಮವಾರ ಸಂಜೆ ಮಂಗಳೂರು ತಲುಪಿತ್ತು. ಮಂಗಳೂರು ಸೆಂಟ್ರಲ್ ಮತ್ತು ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ಡಿಸೆಂಬರ್ 30ರಿಂದ ಅಧಿಕೃತ ಓಡಾಟಕ್ಕೆ ದಕ್ಷಿಣ ರೈಲ್ವೇ ಸಜ್ಜಾಗಿದೆ. ಆದರೆ ಈ ಬಗ್ಗೆ ರೈಲ್ವೆ ಮಂಡಳಿಯಿಂದ ಅಧಿಕೃತ ಪ್ರಕಟನೆ ಹೊರಡಿಸಿಲ್ಲ.
ಮಂಗಳೂರು - ಮಡಗಾಂವ್ ಸಹಿತ ದೇಶದಲ್ಲಿ ಹೊಸತಾಗಿ ಆರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಹಾಗೂ ಮಂಗಳೂರು ಸೆಂಟ್ರಲ್ ನಿಲ್ದಾಣದಲ್ಲಿ ನಿರ್ಮಿಸಿದ ಹೆಚ್ಚುವರಿ ಪ್ಲಾಟ್ ಫಾರಂ ಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಡಿ.30ರಂದು ಉದ್ಘಾಟಿಸುವ ನಿರೀಕ್ಷೆ ಇದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಈ ಬಗ್ಗೆಯೂ ಅಧಿಕೃತ ಮಾಹಿತಿಗಳು ಲಭ್ಯವಾಗಿಲ್ಲ.
ಸಂಸದ ನಳಿನ್ ಕುಮಾರ್ ಕಳೆದ ಒಂದು ವರ್ಷದಿಂದ ಮಂಗಳೂರು - ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲಿನ ಬಗ್ಗೆ ಹೇಳುತ್ತಲೇ ಬಂದಿದ್ದರು. ಮಂಗಳೂರು - ಗೋವಾ ಮಧ್ಯೆ ಕಳೆದ ಅಕ್ಟೋಬರ್ ತಿಂಗಳಲ್ಲಿಯೇ ರೈಲು ಸಂಚಾರ ಆಗುತ್ತೆ ಎಂದಿದ್ದರು. ಸತತ ಟೀಕೆ ಕೇಳಿಬಂದ ಬಳಿಕ ಮಂಗಳೂರಿಗೆ ವಂದೇ ಭಾರತ್ ರೈಲು ಬಂದಿದ್ದು ಇಂದು ಪ್ರಾಯೋಗಿಕ ಓಡಾಟ ನಡೆಸಿದೆ.
The Southern Railway will do the trial run of Mangaluru Central-Madgaon Vande Bharat Express on Tuesday, December 26. The train on trial run will depart from Mangaluru Central at 8.30 a.m. On the return journey, it will depart from Madgaon to Mangaluru at 1.45 p.m.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm