ಬ್ರೇಕಿಂಗ್ ನ್ಯೂಸ್
27-12-23 01:50 pm Mangalore Correspondent ಕರಾವಳಿ
ಮಂಗಳೂರು, ಡಿ.27: ಎನ್ಎಂಪಿಟಿ ಬಂದರಿನಿಂದ 9.5 ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ಲಂಗರು ಹಾಕಿದ್ದ ಲೈಬೀರಿಯಾ ಮೂಲದ ತೈಲ ಟ್ಯಾಂಕರ್ ಹಡಗಿನಲ್ಲಿ ಸಿಬ್ಬಂದಿಯೊಬ್ಬರು ತೀವ್ರ ಅನಾರೋಗ್ಯಕ್ಕಿಡಾಗಿದ ಘಟನೆ ನಡೆದಿದ್ದು ಅವರನ್ನು ಕೋಸ್ಟ್ ಗಾರ್ಡ್ ಸಿಬಂದಿ ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಎಂಟಿ ಐವರಿ ರೇ ಎನ್ನುವ ಹೆಸರಿನ ಹಡಗಿನಲ್ಲಿದ್ದ ಸಿಬ್ಬಂದಿಯೊಬ್ಬರು ನಿನ್ನೆ ರಾತ್ರಿ ವಾಶ್ ರೂಮಿನಲ್ಲಿದ್ದಾಗ ಕುಸಿದು ಬಿದ್ದಿದ್ದಾರೆ. ಕೂಡಲೇ ಕರ್ನಾಟಕದ ಕೋಸ್ಟ್ ಗಾರ್ಡ್ ಸಿಬಂದಿಗೆ ರಕ್ಷಣೆ ಕೋರಿ ಕರೆ ಬಂದಿತ್ತು. ಮಧ್ಯರಾತ್ರಿ 12.30ಕ್ಕೆ ಕರೆ ಬಂದಿದ್ದು ತುರ್ತಾಗಿ ಸ್ಪಂದಿಸಿದ ಕೋಸ್ಟ್ ಗಾರ್ಡ್ ಸಿಬಂದಿ ಸಿ-448 ಇಂಟರ್ ಸೆಪ್ಟರ್ ಬೋಟಿನಲ್ಲಿ ವೈದ್ಯರ ಸಹಿತ ಹಡಗಿನ ಬಳಿಗೆ ತೆರಳಿದ್ದಾರೆ. ತಡರಾತ್ರಿ 2.10ರ ವೇಳೆಗೆ ಬೋಟ್ ಅಲ್ಲಿಗೆ ತಲುಪಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಿಬಂದಿಗೆ ತುರ್ತು ಚಿಕಿತ್ಸೆ ನೀಡಿ, ಕೂಡಲೇ ಅವರನ್ನು ಮಂಗಳೂರಿನ ಬಂದರಿಗೆ ಕರೆತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ.


ತಡರಾತ್ರಿಯಾದರೂ ಕೋಸ್ಟ್ ಗಾರ್ಡ್ ಸಿಬಂದಿ ತುರ್ತಾಗಿ ಸ್ಪಂದಿಸಿ, ರಕ್ಷಣಾ ಕಾರ್ಯ ನಡೆಸಿದ್ದಾರೆ. ಐವರಿ ರೇ ಹಡಗು ತೈಲ ಮತ್ತು ಕೆಮಿಕಲ್ ಸರಕನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದ್ದು 13 ದಿನಗಳ ಹಿಂದೆ ಲೈಬೀರಿಯಾದಿಂದ ಕೆಂಪು ಸಮುದ್ರ ಮೂಲಕ ಮಂಗಳೂರಿನ ಬಂದರಿಗೆ ಆಗಮಿಸಿತ್ತು. ಮಂಗಳೂರು ಬಂದರಿನಲ್ಲಿ ಒಳಬರಲು ಸಿಗ್ನಲ್ ಸಿಗದೇ ಇದ್ದುದರಿಂದ ಸಮುದ್ರ ಮಧ್ಯೆ ಲಂಗರು ಹಾಕಿತ್ತು. ಈ ವೇಳೆ, ಸಿಬಂದಿ ತೀವ್ರ ಅಸ್ವಸ್ಥಗೊಂಡ ಘಟನೆ ನಡೆದಿತ್ತು.
A crew member of a Liberian oil tanker ship, which was anchored in the sea 9.5 nautical miles from NMPT port, fell seriously ill and was rescued by the Coast Guard personnel and admitted to a hospital in Mangaluru.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm