ಬ್ರೇಕಿಂಗ್ ನ್ಯೂಸ್
27-12-23 01:50 pm Mangalore Correspondent ಕರಾವಳಿ
ಮಂಗಳೂರು, ಡಿ.27: ಎನ್ಎಂಪಿಟಿ ಬಂದರಿನಿಂದ 9.5 ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ಲಂಗರು ಹಾಕಿದ್ದ ಲೈಬೀರಿಯಾ ಮೂಲದ ತೈಲ ಟ್ಯಾಂಕರ್ ಹಡಗಿನಲ್ಲಿ ಸಿಬ್ಬಂದಿಯೊಬ್ಬರು ತೀವ್ರ ಅನಾರೋಗ್ಯಕ್ಕಿಡಾಗಿದ ಘಟನೆ ನಡೆದಿದ್ದು ಅವರನ್ನು ಕೋಸ್ಟ್ ಗಾರ್ಡ್ ಸಿಬಂದಿ ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಎಂಟಿ ಐವರಿ ರೇ ಎನ್ನುವ ಹೆಸರಿನ ಹಡಗಿನಲ್ಲಿದ್ದ ಸಿಬ್ಬಂದಿಯೊಬ್ಬರು ನಿನ್ನೆ ರಾತ್ರಿ ವಾಶ್ ರೂಮಿನಲ್ಲಿದ್ದಾಗ ಕುಸಿದು ಬಿದ್ದಿದ್ದಾರೆ. ಕೂಡಲೇ ಕರ್ನಾಟಕದ ಕೋಸ್ಟ್ ಗಾರ್ಡ್ ಸಿಬಂದಿಗೆ ರಕ್ಷಣೆ ಕೋರಿ ಕರೆ ಬಂದಿತ್ತು. ಮಧ್ಯರಾತ್ರಿ 12.30ಕ್ಕೆ ಕರೆ ಬಂದಿದ್ದು ತುರ್ತಾಗಿ ಸ್ಪಂದಿಸಿದ ಕೋಸ್ಟ್ ಗಾರ್ಡ್ ಸಿಬಂದಿ ಸಿ-448 ಇಂಟರ್ ಸೆಪ್ಟರ್ ಬೋಟಿನಲ್ಲಿ ವೈದ್ಯರ ಸಹಿತ ಹಡಗಿನ ಬಳಿಗೆ ತೆರಳಿದ್ದಾರೆ. ತಡರಾತ್ರಿ 2.10ರ ವೇಳೆಗೆ ಬೋಟ್ ಅಲ್ಲಿಗೆ ತಲುಪಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಿಬಂದಿಗೆ ತುರ್ತು ಚಿಕಿತ್ಸೆ ನೀಡಿ, ಕೂಡಲೇ ಅವರನ್ನು ಮಂಗಳೂರಿನ ಬಂದರಿಗೆ ಕರೆತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ತಡರಾತ್ರಿಯಾದರೂ ಕೋಸ್ಟ್ ಗಾರ್ಡ್ ಸಿಬಂದಿ ತುರ್ತಾಗಿ ಸ್ಪಂದಿಸಿ, ರಕ್ಷಣಾ ಕಾರ್ಯ ನಡೆಸಿದ್ದಾರೆ. ಐವರಿ ರೇ ಹಡಗು ತೈಲ ಮತ್ತು ಕೆಮಿಕಲ್ ಸರಕನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದ್ದು 13 ದಿನಗಳ ಹಿಂದೆ ಲೈಬೀರಿಯಾದಿಂದ ಕೆಂಪು ಸಮುದ್ರ ಮೂಲಕ ಮಂಗಳೂರಿನ ಬಂದರಿಗೆ ಆಗಮಿಸಿತ್ತು. ಮಂಗಳೂರು ಬಂದರಿನಲ್ಲಿ ಒಳಬರಲು ಸಿಗ್ನಲ್ ಸಿಗದೇ ಇದ್ದುದರಿಂದ ಸಮುದ್ರ ಮಧ್ಯೆ ಲಂಗರು ಹಾಕಿತ್ತು. ಈ ವೇಳೆ, ಸಿಬಂದಿ ತೀವ್ರ ಅಸ್ವಸ್ಥಗೊಂಡ ಘಟನೆ ನಡೆದಿತ್ತು.
A crew member of a Liberian oil tanker ship, which was anchored in the sea 9.5 nautical miles from NMPT port, fell seriously ill and was rescued by the Coast Guard personnel and admitted to a hospital in Mangaluru.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm