ಬ್ರೇಕಿಂಗ್ ನ್ಯೂಸ್
18-11-20 11:23 pm Mangaluru Correspondent ಕರಾವಳಿ
ಮಂಗಳೂರು, ನ.18: ಮಂಗಳೂರು ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯರ ಹೆಸರಿಡಬೇಕೆಂದು ಒತ್ತಾಯಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಮೂಡುಬಿದ್ರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ ನಡೆಯಿತು.
ಮಂಗಳೂರಿನ ಕದ್ರಿಯ ಸರ್ಕಿಟ್ ಹೌಸ್ ನಲ್ಲಿ ಉದ್ಘಾಟನೆ ಕಾರ್ಯಕ್ರಮ ಮೂಲಕ ಆರಂಭಿಸಿ, ಬಳಿಕ ನೂರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ನಡೆದುಕೊಂಡೇ ಕೆಂಜಾರಿನತ್ತ ತೆರಳಿದರು. ರಾತ್ರಿ 9.30ರ ಸುಮಾರಿಗೆ ವಿಮಾನ ನಿಲ್ದಾಣ ಇರುವ ಕೆಂಜಾರಿಗೆ ತೆರಳಿ, ಪ್ರತಿಭಟನಾ ಧರಣಿ ನಡೆಸಿದರು. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಬಿಜೆಪಿ ಸರಕಾರ ಮತ್ತು ಮಂಗಳೂರಿನ ಸಂಸದರ ವಿರುದ್ಧ ಘೋಷಣೆ ಕೂಗಿಕೊಂಡು ಕಾರ್ಯಕರ್ತರು ಸಾಗಿದರು.





ಇದಕ್ಕೂ ಮುನ್ನ ಉದ್ಘಾಟನೆ ವೇಳೆ ಮಾತನಾಡಿದ ಮಿಥುನ್ ರೈ, ಮಂಗಳೂರು ಸಂಸದ ನಳಿನ್ ಕುಮಾರ್ ಇಚ್ಛಾಶಕ್ತಿ ತೋರಿದ್ದರೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಗ್ರೂಪ್ಗೆ ಹಸ್ತಾಂತರ ಮಾಡದಂತೆ ತಡೆ ಹಿಡಿಯಬಹುದಾಗಿತ್ತು. ಜಿಲ್ಲೆಯ ಜನತೆಯ ಸ್ವಾಭಿಮಾನವನ್ನು ಎತ್ತಿ ಹಿಡಿಯಬೇಕಿದ್ದ ಸಂಸದರು ಮೌನ ತಾಳಿದ್ದಾರೆ. ಈಗ ಅದಾನಿ ಗುತ್ತಿಗೆ ಪಡೆದು ತನ್ನದೇ ಹೆಸರನ್ನು ನಿಲ್ದಾಣಕ್ಕೆ ಇಟ್ಟಿದ್ದಾರೆ. ವಿಮಾನ ನಿಲ್ದಾಣಕ್ಕೆ ತುಳುನಾಡಿನ ಇತಿಹಾಸ ಪುರುಷರಾದ ಕೋಟಿ ಚೆನ್ನಯರ ಹೆಸರು ನಾಮಕರಣ ಮಾಡಬೇಕೆಂದು ನಿರಂತರ ಹೋರಾಟ ಮಾಡಲಾಗುವುದು ಎಂದು ಹೇಳಿದರು.
ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ ಜನಸಾಮಾನ್ಯರನ್ನು ಕಡೆಗಣಿಸಿ ಬಂಡವಾಳಶಾಹಿಗಳ ಪರ ಕೆಲಸ ಮಾಡುತ್ತಿದೆ. ವಿಮಾನ ನಿಲ್ದಾಣದ ಹೆಸರನ್ನು ಕಿತ್ತು ಹಾಕುವವರೆಗೆ ಹೋರಾಟ ನಿಲ್ಲದು ಎಂದುರು.
ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಸೇವಾದಳದ ಜಿಲ್ಲಾಧ್ಯಕ್ಷ ಸುರೇಶ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ ಸೇರಿದಂತೆ ನೂರಾರು ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
Video:
District Youth Congress and Mulky-Moodbidiri Block Congress held a torchlight protest rally from Circuit House to Bajpe airport on Wednesday, November 18 demanding to rename the Mangaluru International Airport along with condemning privatization of the airport.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am