ಬ್ರೇಕಿಂಗ್ ನ್ಯೂಸ್
27-12-23 09:26 pm Mangalore Correspondent ಕರಾವಳಿ
ಪುತ್ತೂರು, ಡಿ.27: ಒಕ್ಕಲಿಗ ಸಮಾಜದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದೇ ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಮುಳುವಾಯಿತು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.
ಕಡಬದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಮಾಧ್ಯಮದವರೊಂದಿಗೆ ಪಕ್ಷದ ನಾಯಕರ ವಿರುದ್ಧ ತನ್ನ ಅಸಮಾಧಾನ ಹೊರಹಾಕಿದರು. ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಒಕ್ಕಲಿಗ ಮುಖಂಡರು ಹಾಗೂ ನಾನು ಸೇರಿಕೊಂಡು ಭೈರವೈಕ್ಯ ಆದಿಚುಂಚನಗಿರಿ ಶ್ರೀ ಬಾಲಗಂಗಾಧರ ನಾಥ ಸ್ವಾಮೀಜಿಯವರ ಕಾರ್ಯಕ್ರಮವನ್ನು ಆಯೋಜಿಸಿದ್ದೆವು. ಅಲ್ಲಿ ನಾನು ಒಕ್ಕಲಿಗ ಸಮಾಜದಲ್ಲಿ ಹುಟ್ಟಿ ಆದಿಚುಂಚನಗಿರಿ ಸ್ವಾಮೀಜಿಯವರ ಆಶೀರ್ವಾದ ಪಡೆದು ರಾಜ್ಯದ ಮುಖ್ಯ ಮಂತ್ರಿಯಾಗಿದ್ದೇನೆ ಎಂದು ಹೇಳಿದ್ದು ನನ್ನ ಸ್ಥಾನಕ್ಕೆ ಮುಳುವಾಯಿತು ಎಂದರು.
ಅಷ್ಟಕ್ಕೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ನನಗೆ ಸೂಚನೆ ನೀಡಲಾಗಿತ್ತು ಎಂದು ಹೇಳಿದ ಸದಾನಂದ ಗೌಡ, ನಾನು ಚುನಾವಣೆ ರಾಜಕೀಯದಿಂದ ನಿವೃತ್ತನಾಗಿದ್ದು, ಇನ್ನು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಆದ್ದರಿಂದ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯನಾಗಿರುತ್ತೇನೆ ಎಂದರು.
ಇಂದು ಪ್ರಾಮಾಣಿಕ ರಾಜಕಾರಣಕ್ಕೆ ಬೆಲೆ ಇಲ್ಲ. ಹರಕು ನಾಲಗೆ, ಚೀಲ ತುಂಬಾ ದುಡ್ಡು ಮತ್ತು ಗುಂಪುಗಾರಿಕೆಯಿಂದಲೇ ರಾಜಕೀಯ ನಡೆಯುತ್ತಿದೆ. ಆದರೆ ಪ್ರಜಾಪ್ರಭುತ್ವದಲ್ಲಿ ರಾಜಕಾರಣ ಬೇಕೇ ಬೇಕು. ಉಳಿದ ಪಕ್ಷಗಳಿಗಿಂತ ನನ್ನ ಪಕ್ಷ ಒಳ್ಳೆಯದು ಎನ್ನುವ ನೆಲೆಯಲ್ಲಿ ಪಕ್ಷದ ಕೆಲಸ ಮಾಡುತ್ತೇನೆ ಎಂದರು.
I Was Made To Resign From The Cm Post Soon After My Talk At Vokkaliga Community Function Reveals Dv Sadananda Gowda
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
23-06-25 08:54 pm
HK News Desk
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm