ಬ್ರೇಕಿಂಗ್ ನ್ಯೂಸ್
27-12-23 09:26 pm Mangalore Correspondent ಕರಾವಳಿ
ಪುತ್ತೂರು, ಡಿ.27: ಒಕ್ಕಲಿಗ ಸಮಾಜದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದೇ ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಮುಳುವಾಯಿತು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.
ಕಡಬದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಮಾಧ್ಯಮದವರೊಂದಿಗೆ ಪಕ್ಷದ ನಾಯಕರ ವಿರುದ್ಧ ತನ್ನ ಅಸಮಾಧಾನ ಹೊರಹಾಕಿದರು. ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಒಕ್ಕಲಿಗ ಮುಖಂಡರು ಹಾಗೂ ನಾನು ಸೇರಿಕೊಂಡು ಭೈರವೈಕ್ಯ ಆದಿಚುಂಚನಗಿರಿ ಶ್ರೀ ಬಾಲಗಂಗಾಧರ ನಾಥ ಸ್ವಾಮೀಜಿಯವರ ಕಾರ್ಯಕ್ರಮವನ್ನು ಆಯೋಜಿಸಿದ್ದೆವು. ಅಲ್ಲಿ ನಾನು ಒಕ್ಕಲಿಗ ಸಮಾಜದಲ್ಲಿ ಹುಟ್ಟಿ ಆದಿಚುಂಚನಗಿರಿ ಸ್ವಾಮೀಜಿಯವರ ಆಶೀರ್ವಾದ ಪಡೆದು ರಾಜ್ಯದ ಮುಖ್ಯ ಮಂತ್ರಿಯಾಗಿದ್ದೇನೆ ಎಂದು ಹೇಳಿದ್ದು ನನ್ನ ಸ್ಥಾನಕ್ಕೆ ಮುಳುವಾಯಿತು ಎಂದರು.
ಅಷ್ಟಕ್ಕೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ನನಗೆ ಸೂಚನೆ ನೀಡಲಾಗಿತ್ತು ಎಂದು ಹೇಳಿದ ಸದಾನಂದ ಗೌಡ, ನಾನು ಚುನಾವಣೆ ರಾಜಕೀಯದಿಂದ ನಿವೃತ್ತನಾಗಿದ್ದು, ಇನ್ನು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಆದ್ದರಿಂದ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯನಾಗಿರುತ್ತೇನೆ ಎಂದರು.
ಇಂದು ಪ್ರಾಮಾಣಿಕ ರಾಜಕಾರಣಕ್ಕೆ ಬೆಲೆ ಇಲ್ಲ. ಹರಕು ನಾಲಗೆ, ಚೀಲ ತುಂಬಾ ದುಡ್ಡು ಮತ್ತು ಗುಂಪುಗಾರಿಕೆಯಿಂದಲೇ ರಾಜಕೀಯ ನಡೆಯುತ್ತಿದೆ. ಆದರೆ ಪ್ರಜಾಪ್ರಭುತ್ವದಲ್ಲಿ ರಾಜಕಾರಣ ಬೇಕೇ ಬೇಕು. ಉಳಿದ ಪಕ್ಷಗಳಿಗಿಂತ ನನ್ನ ಪಕ್ಷ ಒಳ್ಳೆಯದು ಎನ್ನುವ ನೆಲೆಯಲ್ಲಿ ಪಕ್ಷದ ಕೆಲಸ ಮಾಡುತ್ತೇನೆ ಎಂದರು.
I Was Made To Resign From The Cm Post Soon After My Talk At Vokkaliga Community Function Reveals Dv Sadananda Gowda
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm