ಬ್ರೇಕಿಂಗ್ ನ್ಯೂಸ್
28-12-23 06:42 pm Mangalore Correspondent ಕರಾವಳಿ
ಮಂಗಳೂರು, ಡಿ.28 : ಪ್ರವಾಸಿ ತಾಣ ಪಣಂಬೂರು ಕಡಲತೀರದಲ್ಲಿ ಹೊಸತಾಗಿ ನಿರ್ಮಿಸಲಾದ ತೇಲುವ ಸೇತುವೆಯನ್ನು ಲೋಕಾರ್ಪಣೆ ಮಾಡಲಾಗಿದ್ದು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಧಿಕೃತವಾಗಿ ಉದ್ಘಾಟಿಸಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಪಣಂಬೂರು ಕಡಲತೀರಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇದೀಗ ತೇಲುವ ಸೇತುವೆ ಹೊಸ ಆಕರ್ಷಣೆಯಾಗಿದ್ದು ಜನಾಕರ್ಷಣೆ ಗಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದು ಮೊದಲ ತೇಲುವ ಸೇತುವೆಯಾಗಿದ್ದು, ಇದಕ್ಕೂ ಹಿಂದೆ ಉಡುಪಿಯ ಮಲ್ಪೆ ಮತ್ತು ಕಾರವಾರ ಕಡಲತೀರದಲ್ಲಿ ತೇಲುವ ಸೇತುವೆ ನಿರ್ಮಿಸಲಾಗಿದೆ.



ಕದಳೀ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ವತಿಯಿಂದ 125 ಮೀಟರ್ ಉದ್ದದ ಸೇತುವೆಯನ್ನು ನಿರ್ಮಿಸಲಾಗಿದೆ. ಸಮುದ್ರದ ಅಲೆಗಳ ಮೇಲೆ ಹರಡಿರುವ ತೇಲುವ ಸೇತುವೆಯಲ್ಲಿ ಲೈಫ್ ಜಾಕೆಟ್ ಹಾಕ್ಕೊಂಡು ಪ್ರವಾಸಿಗರು ವಿಶೇಷ ಅನುಭವ ಪಡೆಯುತ್ತಿದ್ದಾರೆ.



ಪ್ರವಾಸಿಗರ ಸುರಕ್ಷತೆಗಾಗಿ 12 ಮಂದಿ ಜೀವ ರಕ್ಷಕರು ಮತ್ತು ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ತೇಲುವ ಸೇತುವೆಯಲ್ಲಿ ನಿಂತು ಗರಿಷ್ಠ 50 ಜನರು ಸೂರ್ಯಾಸ್ತವನ್ನು ವೀಕ್ಷಿಸಬಹುದಾಗಿದೆ. ಉದ್ಘಾಟನೆ ಬಳಿಕ ಮಾತನಾಡಿದ ಖಾದರ್, ಬೀಚ್ ಟೂರಿಸಂ ಅಭಿವೃದ್ಧಿಗೆ ಆದ್ಯತೆ ನೀಡಲು ಪ್ರವಾಸೋದ್ಯಮ ಸಚಿವ ಎಚ್ಕೆ ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಿದರು.


ಇದಲ್ಲದೆ, ಜೆಟ್ ಸ್ಕೀ, ಬೋಟಿಂಗ್ ಇನ್ನಿತರ ಸಾಹಸ ಕ್ರೀಡೆಗಳನ್ನು ಕೂಡ ಬೀಚ್ ನಲ್ಲಿ ಏರ್ಪಡಿಸಲಾಗಿದೆ. ಸದ್ಯದಲ್ಲೇ ಸ್ಕೂಬಾ ಡೈವಿಂಗ್ ಮಾಡುವುದಕ್ಕೂ ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ಸೂಕ್ತ ಜಾಗಕ್ಕಾಗಿ ಅಧ್ಯಯನ ಮಾಡುತ್ತಿದ್ದು ಕೆಲವು ಪ್ರದೇಶಗಳನ್ನು ಗುರುತಿಸಲಾಗಿದೆ ಎಂದು ಬೀಚ್ ಅಭಿವೃದ್ಧಿ ಸಮಿತಿಯ ಡಾ.ರಾಜೇಶ್ ಹುಕ್ಕೇರಿ ಹೇಳಿದರು. ಇನ್ನೊಬ್ಬ ಪಾಲುದಾರ ಲಕ್ಷ್ಮೀಶ ಭಂಡಾರಿ ಉಪಸ್ಥಿತರಿದ್ದರು.
The newly constructed floating bridge at Panambur beach was inaugurated by State Assembly Speaker U.T. Khader has officially inaugurated it.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm