ಬ್ರೇಕಿಂಗ್ ನ್ಯೂಸ್
28-12-23 06:42 pm Mangalore Correspondent ಕರಾವಳಿ
ಮಂಗಳೂರು, ಡಿ.28 : ಪ್ರವಾಸಿ ತಾಣ ಪಣಂಬೂರು ಕಡಲತೀರದಲ್ಲಿ ಹೊಸತಾಗಿ ನಿರ್ಮಿಸಲಾದ ತೇಲುವ ಸೇತುವೆಯನ್ನು ಲೋಕಾರ್ಪಣೆ ಮಾಡಲಾಗಿದ್ದು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಧಿಕೃತವಾಗಿ ಉದ್ಘಾಟಿಸಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಪಣಂಬೂರು ಕಡಲತೀರಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇದೀಗ ತೇಲುವ ಸೇತುವೆ ಹೊಸ ಆಕರ್ಷಣೆಯಾಗಿದ್ದು ಜನಾಕರ್ಷಣೆ ಗಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದು ಮೊದಲ ತೇಲುವ ಸೇತುವೆಯಾಗಿದ್ದು, ಇದಕ್ಕೂ ಹಿಂದೆ ಉಡುಪಿಯ ಮಲ್ಪೆ ಮತ್ತು ಕಾರವಾರ ಕಡಲತೀರದಲ್ಲಿ ತೇಲುವ ಸೇತುವೆ ನಿರ್ಮಿಸಲಾಗಿದೆ.



ಕದಳೀ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ವತಿಯಿಂದ 125 ಮೀಟರ್ ಉದ್ದದ ಸೇತುವೆಯನ್ನು ನಿರ್ಮಿಸಲಾಗಿದೆ. ಸಮುದ್ರದ ಅಲೆಗಳ ಮೇಲೆ ಹರಡಿರುವ ತೇಲುವ ಸೇತುವೆಯಲ್ಲಿ ಲೈಫ್ ಜಾಕೆಟ್ ಹಾಕ್ಕೊಂಡು ಪ್ರವಾಸಿಗರು ವಿಶೇಷ ಅನುಭವ ಪಡೆಯುತ್ತಿದ್ದಾರೆ.



ಪ್ರವಾಸಿಗರ ಸುರಕ್ಷತೆಗಾಗಿ 12 ಮಂದಿ ಜೀವ ರಕ್ಷಕರು ಮತ್ತು ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ತೇಲುವ ಸೇತುವೆಯಲ್ಲಿ ನಿಂತು ಗರಿಷ್ಠ 50 ಜನರು ಸೂರ್ಯಾಸ್ತವನ್ನು ವೀಕ್ಷಿಸಬಹುದಾಗಿದೆ. ಉದ್ಘಾಟನೆ ಬಳಿಕ ಮಾತನಾಡಿದ ಖಾದರ್, ಬೀಚ್ ಟೂರಿಸಂ ಅಭಿವೃದ್ಧಿಗೆ ಆದ್ಯತೆ ನೀಡಲು ಪ್ರವಾಸೋದ್ಯಮ ಸಚಿವ ಎಚ್ಕೆ ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಿದರು.


ಇದಲ್ಲದೆ, ಜೆಟ್ ಸ್ಕೀ, ಬೋಟಿಂಗ್ ಇನ್ನಿತರ ಸಾಹಸ ಕ್ರೀಡೆಗಳನ್ನು ಕೂಡ ಬೀಚ್ ನಲ್ಲಿ ಏರ್ಪಡಿಸಲಾಗಿದೆ. ಸದ್ಯದಲ್ಲೇ ಸ್ಕೂಬಾ ಡೈವಿಂಗ್ ಮಾಡುವುದಕ್ಕೂ ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ಸೂಕ್ತ ಜಾಗಕ್ಕಾಗಿ ಅಧ್ಯಯನ ಮಾಡುತ್ತಿದ್ದು ಕೆಲವು ಪ್ರದೇಶಗಳನ್ನು ಗುರುತಿಸಲಾಗಿದೆ ಎಂದು ಬೀಚ್ ಅಭಿವೃದ್ಧಿ ಸಮಿತಿಯ ಡಾ.ರಾಜೇಶ್ ಹುಕ್ಕೇರಿ ಹೇಳಿದರು. ಇನ್ನೊಬ್ಬ ಪಾಲುದಾರ ಲಕ್ಷ್ಮೀಶ ಭಂಡಾರಿ ಉಪಸ್ಥಿತರಿದ್ದರು.
The newly constructed floating bridge at Panambur beach was inaugurated by State Assembly Speaker U.T. Khader has officially inaugurated it.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm