ಬ್ರೇಕಿಂಗ್ ನ್ಯೂಸ್
28-12-23 10:30 pm Mangalore Correspondent ಕರಾವಳಿ
ಮಂಗಳೂರು, ಡಿ.28: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಆಪ್ತ ಕಾರ್ಯದರ್ಶಿ ಕೆ.ಎ. ಹಿದಾಯತುಲ್ಲಾ ಗುರುವಾರ ಮಂಗಳೂರಿಗೆ ಪ್ರವಾಸ ಬಂದಿದ್ದರು. ಅಧಿಕಾರಿಯ ಅಧಿಕೃತ ಪ್ರವಾಸ ಕಾರ್ಯಕ್ರಮದ ಬಗ್ಗೆ ಸಂಬಂಧಿತ ಇಲಾಖೆಗಳಿಗೆ ಮಾಹಿತಿ ರವಾನೆಯಾಗಿತ್ತು. ಆದರೆ ಪ್ರವಾಸ ಕಾರ್ಯಕ್ರಮ ನೋಡಿದರೆ, ಅಹವಾಲು ಸ್ವೀಕಾರ ನೆಪದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಸರಕಾರಿ ವೆಚ್ಚದಲ್ಲಿ ವಿಮಾನ ಪ್ರಯಾಣ, ಹೊಸ ವರ್ಷಾಚರಣೆಗೆ ಚಿಕ್ಕಮಗಳೂರಿನಲ್ಲಿ ರೆಸಾರ್ಟ್ ಬುಕ್ಕಿಂಗ್ ಮಾಡಿರುವಂತೆ ಕಂಡುಬಂದಿದೆ.
ಬುಧವಾರ ರಾತ್ರಿ ಹತ್ತು ಗಂಟೆ ವೇಳೆಗೆ ಬೆಂಗಳೂರಿನಿಂದ ಮಂಗಳೂರಿಗೆ ಇಂಡಿಗೋ ವಿಮಾನದಲ್ಲಿ ಬಂದಿದ್ದು ಕದ್ರಿಯ ಅತಿಥಿ ಬಂಗಲೆಯಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದಾರೆ. ಗುರುವಾರ ಬೆಳಗ್ಗೆ 10.30ರಿಂದ ಸಂಜೆ 5 ಗಂಟೆ ವರೆಗೆ ಮಂಗಳೂರಿನ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡುವುದೆಂದು ನಿಗದಿಯಾಗಿತ್ತು. ಸಚಿವರ ಅನುಪಸ್ಥಿತಿಯಲ್ಲಿ ಕೆಎಎಸ್ ಅಧಿಕಾರಿ ಆಗಿರುವ ಆಪ್ತ ಕಾರ್ಯದರ್ಶಿ ಸಚಿವರ ಹೆಸರಲ್ಲಿ ಸಾರ್ವಜನಿಕರ ದೂರುಗಳನ್ನು ಸ್ವೀಕರಿಸಬಹುದು. ಆದರೆ, ದೂರು ಅರ್ಜಿಗಳ ಬಗ್ಗೆ ಸಚಿವರ ಗಮನಕ್ಕೆ ತರದೆ ತಾನಾಗಿಯೇ ಆದೇಶ ಮಾಡುವಂತಿಲ್ಲ.
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಂಗಳಿಗೊಮ್ಮೆ ಮಂಗಳೂರಿಗೆ ಭೇಟಿ ನೀಡುವುದರಿಂದ ಸಾರ್ವಜನಿಕರ ದೂರು ಆಲಿಸಲು ಲಭ್ಯರಿರುವುದಿಲ್ಲ. ಹೀಗಾಗಿ ಸಚಿವರ ಅನುಮತಿಯಲ್ಲಿ ಆಪ್ತ ಕಾರ್ಯದರ್ಶಿ ಬಂದು ಜನಸಾಮಾನ್ಯರ ಅಹವಾಲು ಆಲಿಸಬಹುದು. ಆದರೆ, ಆಪ್ತ ಕಾರ್ಯದರ್ಶಿ ಅಹವಾಲು ಸ್ವೀಕರಿಸುವ ಬಗ್ಗೆ ಯಾವುದೇ ಪೂರ್ವ ಪ್ರಕಟಣೆ ಇರಲಿಲ್ಲ. ಜಿಲ್ಲಾ ವಾರ್ತಾ ಇಲಾಖೆಗೂ ಮಾಹಿತಿ ಬಂದಿರಲಿಲ್ಲ. ಸಾರ್ವಜನಿಕರಿಗೆ ಮಾಹಿತಿಯನ್ನೇ ನೀಡದೆ ಆಪ್ತ ಕಾರ್ಯದರ್ಶಿ ಅಹವಾಲು ಸ್ವೀಕಾರ ಕಾರ್ಯಕ್ರಮ ಏರ್ಪಡಿಸುವುದಂದ್ರೆ ನಾಮ್ಕೇವಾಸ್ತೆ ಎನ್ನಬೇಕು. ಗುರುವಾರವೂ ನಾಮ್ಕೇವಾಸ್ತೆ ಎನ್ನುವ ರೀತಿ ಅಧಿಕಾರಿ ಕಚೇರಿಗೆ ಮಧ್ಯಾಹ್ನ ಹೊತ್ತಿಗೆ ಬಂದಿದ್ದು, ಸ್ವಲ್ಪ ಹೊತ್ತು ಇದ್ದು ತೆರಳಿದ್ದಾರೆ.
ಗುರುವಾರ ಸಂಜೆ ಬೆಳ್ತಂಗಡಿಗೆ ತೆರಳಿ ಅಲ್ಲಿನ ಐಬಿ ಬಂಗಲೆಯಲ್ಲಿ ವಾಸ್ತವ್ಯ. ಶುಕ್ರವಾರ ಬೆಳಗ್ಗೆ 10ರಿಂದ ಸಂಜೆಯ ವರೆಗೆ ಬೆಳ್ತಂಗಡಿಯ ಐಬಿ ಬಂಗಲೆಯಲ್ಲಿ ಅಹವಾಲು ಸ್ವೀಕಾರ ಎಂದು ಪ್ರವಾಸ ಕಾರ್ಯಕ್ರಮ ನಿಗದಿಯಾಗಿದೆ. ಆದರೆ, ಈ ಬಗ್ಗೆ ಮಂಗಳೂರಿನ ಕಾಂಗ್ರೆಸ್ ಕಚೇರಿಯ ಪ್ರಮುಖ ಕಾರ್ಯಕರ್ತರಿಗೇ ಮಾಹಿತಿ ಇಲ್ಲ. ಹೀಗಾಗಿ, ಆಪ್ತ ಕಾರ್ಯದರ್ಶಿ ಅಹವಾಲು ಸ್ವೀಕಾರಕ್ಕೆ ಬರೋದಾ, ಅದರ ಹೆಸರಲ್ಲಿ ಕರಾವಳಿಗೆ ತಿರುಗಾಟಕ್ಕೆ ಬರೋದಾ ಅನ್ನುವ ಪ್ರಶ್ನೆ ಎದುರಾಗುತ್ತದೆ. ಇದಕ್ಕೆ ಪೂರಕ ಎನ್ನುವಂತೆ ಇದೇ ಪ್ರವಾಸ ಕಾರ್ಯಕ್ರಮದಲ್ಲಿ ಡಿ.30 ಮತ್ತು 31ರ ವರ್ಷಾಂತ್ಯದ ರಜಾ ದಿನಗಳನ್ನು ಕಳೆಯಲು ಚಿಕ್ಕಮಗಳೂರಿನ ರೆಸಾರ್ಟ್ ಬುಕ್ ಮಾಡಿದ್ದನ್ನು ನಮೂದಿಸಲಾಗಿದೆ. ರೆಸಾರ್ಟಿನಲ್ಲಿ ಯಾವುದೇ ಸರಕಾರಿ ಕಾರ್ಯಕ್ರಮ ಇರಲಾರದು. ಆದರೆ, ಸಚಿವರ ಆಪ್ತ ಕಾರ್ಯದರ್ಶಿ ಹಿದಾಯತುಲ್ಲಾ ಮಾತ್ರ ತನ್ನ ಅಧಿಕೃತ ಸರ್ಕಾರಿ ಕಾರ್ಯಕ್ರಮದಲ್ಲಿ ರೆಸಾರ್ಟ್ ವಾಸ್ತವ್ಯವನ್ನೂ ಸೇರಿಸಿಕೊಂಡಿದ್ದಾರೆ.
ಎರಡು ರಜಾ ದಿನಗಳ ಕಾರ್ಯಕ್ರಮವನ್ನು ಕಾಯ್ದಿರಿಸಲಾಗಿದೆ ಎಂದು ಪ್ರವಾಸ ಕಾರ್ಯಕ್ರಮದಲ್ಲಿ ತೋರಿಸಿದ್ದು, ಜನವರಿ 1ರ ಸೋಮವಾರ ಬೆಳಗ್ಗೆ ರಸ್ತೆ ಮೂಲಕ ಬೆಂಗಳೂರು ತೆರಳಲಿದ್ದಾರೆ. ಅಲ್ಲಿಗೆ ನಾಲ್ಕು ದಿನಗಳ ಪ್ರವಾಸ ಕಾರ್ಯಕ್ರಮ ಪೂರ್ತಿಯಾಗುತ್ತದೆ. ಒಂದೆಡೆ ಗ್ಯಾರಂಟಿ ಯೋಜನೆಯಿಂದಾಗಿ ಬರ ಪೀಡಿತ ಜಿಲ್ಲೆಗಳ ರೈತರಿಗೆ ಕೊಡುವುದಕ್ಕೂ ಸರಕಾರದಲ್ಲಿ ಹಣ ಇಲ್ಲದ ಸ್ಥಿತಿಯಿದೆ. ಇಂಥದ್ರಲ್ಲಿ ಸಚಿವರಿಗೆ ಹೊಸ ಕಾರುಗಳನ್ನು ಖರೀದಿಸುತ್ತಾರೆ. ಮತ್ತೊಂದೆಡೆ, ಅಧಿಕಾರಿಗಳು ಸರಕಾರದ ಖರ್ಚಿನಲ್ಲೇ ಹೊಸ ವರ್ಷದ ಪಾರ್ಟಿ ಮಾಡುತ್ತಾರೋ ಅನ್ನುವ ಶಂಕೆ ಮೂಡಿಸುವಂತಿದೆ ಇವರ ಪ್ರವಾಸ ಕಾರ್ಯಕ್ರಮ. ಮಂಗಳೂರಿನಲ್ಲಿ ಅಹವಾಲು ಸ್ವೀಕಾರ ಎನ್ನುವ ನೆಪದಲ್ಲಿ ಕೆಎಎಸ್ ಅಧಿಕಾರಿಯ ಆಟಾಟೋಪ ಸರ್ಕಾರಿ ದುಡ್ಡಿನಲ್ಲೇ ಬಂದು ಹೋದ, ಉಂಡೂ ಹೋದ ಎನ್ನುವಂತಾಗಿದೆಯೇ ಎನ್ನುವ ಪ್ರಶ್ನೆ ಕೇಳಿಬರುತ್ತಿದೆ.
Health Minister Dinesh Gundurao PS Hidayatullah found misusing government money in Mangalore. Headline Karnataka exposes details of resort bookings and flight tickets.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm