ಬ್ರೇಕಿಂಗ್ ನ್ಯೂಸ್
29-12-23 11:18 am Mangalore Correspondent ಕರಾವಳಿ
ಬಂಟ್ವಾಳ, ಡಿ.29: ರಸ್ತೆ ಬದಿ ನಡೆದು ಹೋಗುತ್ತಿದ್ದ ಯುವತಿಯೊಬ್ಬಳು ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬಿ.ಸಿ.ರೋಡ್ ಕೈಕಂಬದಲ್ಲಿ ನಿನ್ನೆ ರಾತ್ರಿ ನಡೆದಿದೆ. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ತಡರಾತ್ರಿ ಸಾವನ್ನಪ್ಪಿದ್ದಾಳೆ.
ಬಿಸಿರೋಡಿನ ಕೈಕಂಬ ಸಮೀಪದ ಪಚ್ಚಿನಡ್ಕ ಎಂಬಲ್ಲಿ ನಿನ್ನೆ ರಾತ್ರಿ ಅಪಘಾತ ನಡೆದಿದ್ದು ಸ್ಥಳೀಯ ನಿವಾಸಿ ಚೈತ್ರಾ (22 ) ಮೃತಪಟ್ಟ ಯುವತಿ. ಮಂಗಳೂರಿನ ಬಟ್ಟೆ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಚೈತ್ರಾ ಸಂಜೆ ವೇಳೆ ಬಸ್ಸಿನಲ್ಲಿ ಬಿಸಿ ರೋಡ್ ಬಂದಿದ್ದು ಬಳಿಕ ತಾಯಿ ಜೊತೆಗೆ ಸ್ನೇಹಿತೆಯ ಮನೆ ಕಡೆಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ.
ಸ್ನೇಹಿತೆಯ ರೋಸ್ ಕಾರ್ಯಕ್ರಮಕ್ಕೆಂದು ತಾಯಿ ಜೊತೆ ರಸ್ತೆ ಬದಿ ನಡೆದು ಹೋಗುತ್ತಿದ್ದರು ಎನ್ನಲಾಗಿದ್ದು ಕಾರಿನ ಅತೀ ವೇಗ ಮತ್ತು ಅಜಾಗರೂಕತೆಯಿಂದ ಅಪಘಾತ ಉಂಟಾಗಿದೆ. ಯುವತಿ ಗಂಭೀರ ಗಾಯಗೊಂಡಿದ್ದರು. ಇದೇ ವೇಳೆ, ಖಾಸಗಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಟ್ರಾಫಿಕ್ ಎ.ಎಸ್.ಐ.ಸುರೇಶ್ ಪಡಾರ್ ಹಾಗೂ ಹೆಚ್.ಸಿ.ರಮೇಶ್ ತಮ್ಮ ವಾಹನದಲ್ಲಿ ಯುವತಿಯನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಮಧ್ಯರಾತ್ರಿ ಸುಮಾರು 1 ಗಂಟೆಗೆ ಈಕೆ ಮೃತಪಟ್ಟ ಬಗ್ಗೆ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಯುವತಿಗೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರು ಬಳಿಕ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಲ್ಲದೆ, ಮನೆಯ ಕಾಂಪೌಂಡ್ ಗೋಡೆಗೆ ಡಿಕ್ಕಿಯಾಗಿ ನಿಂತಿತ್ತು. ಘಟನೆ ಬೆನ್ನಲ್ಲೇ ಕಾರನ್ನು ಬಿಟ್ಟು ಅದರಲ್ಲಿದ್ದ ಮೂವರು ಯುವಕರು ಪರಾರಿಯಾಗಿದ್ದಾರೆ. ಮೆಲ್ಕಾರ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕಾರನ್ನು ವಶಕ್ಕೆ ಪಡೆದಿದ್ದಾರೆ.
ಯುವತಿಗೆ ಮದುವೆ ನಿಶ್ಚಿತಾರ್ಥ
ಚೈತ್ರಾ ಮೇಕಪ್ ಕಲಾವಿದರಾಗಿದ್ದ ದಿ. ಭಾಸ್ಕರ್ ಆಚಾರ್ಯ ಅವರ ಮಗಳಾಗಿದ್ದು ಮಂಗಳೂರಿನ ಪ್ರಸಿದ್ದ ಬಟ್ಟೆ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದಳು. ಚೈತ್ರಾಗೆ ಮದುವೆ ನಿಶ್ಚಿತಾರ್ಥ ನಡೆದಿದ್ದು ಮುಂದಿನ ಮಾರ್ಚ್ 3ರಂದು ಕೊಡ್ಯಡ್ಕದ ಯುವಕನ ಜೊತೆ ಮದುವೆ ನಿಗದಿಯಾಗಿತ್ತು. ಯುವಕರು ಕಾರನ್ನು ಅತಿ ವೇಗ ಮತ್ತು ನಿರ್ಲಕ್ಷ್ಯದಿಂದ ಚಲಾಯಿಸಿದ್ದು ಅಪಘಾತಕ್ಕೆ ಕಾರಣವಾಗಿತ್ತು. ಮಾದಕ ದ್ರವ್ಯ ಸೇವಿಸಿದ್ದರಿಂದ ಈ ರೀತಿ ಘಟನೆ ಆಗಿತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Bantwal car Accident, 22 year old girl dies after car rams her. The deceased has been identified as Chitra. She was just engaged and was getting redy for the marriage.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm