ಬ್ರೇಕಿಂಗ್ ನ್ಯೂಸ್
29-12-23 04:25 pm Mangalore Correspondent ಕರಾವಳಿ
ಉಳ್ಳಾಲ, ಡಿ.29: ಸಮುದ್ರದಲ್ಲಿ ನೀರಾಟಕ್ಕಿಳಿದ ಮೂವರು ಯುವಕರನ್ನ ರಕ್ಕಸ ಅಲೆಗಳು ಕೊಚ್ಚಿಕೊಂಡು ಹೋದ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಓರ್ವ ಯುವಕ ಮೃತಪಟ್ಟರೆ, ಮತ್ತೋರ್ವ ಸಮುದ್ರ ಪಾಲಾಗಿದ್ದು , ಇನ್ನೋರ್ವನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ.
ಚಿಕ್ಕಮಗಳೂರು ನಿವಾಸಿ ಸಲ್ಮಾನ್(19) ಮೃತಪಟ್ಟ ಯುವಕನಾಗಿದ್ದು , ಆತನ ಸಂಬಂಧಿ ಬಶೀರ್(23) ನೀರು ಪಾಲಾಗಿದ್ದಾನೆ. ಮತ್ತೋರ್ವ ಯುವಕ ಸೈಫ್ ಆಲಿ(27) ಆಸ್ಪತ್ರೆಯಲ್ಲಿ ಚೇತರಿಸಿದ್ದಾನೆ.

ಸಾವಿನ ದವಡೆಯಿಂದ ಪಾರಾದ ಯುವಕ ಸೈಫ್ ಅಲಿ
ಚಿಕ್ಕಮಗಳೂರು ಮೂಲದ ಬಶೀರ್, ಸಲ್ಮಾನ್ ಮತ್ತು ಸೈಫ್ ಅಲಿ ಎಂಬವರು ತಮ್ಮ ಕುಟುಂಬಸ್ಥರೊಂದಿಗೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದರು. ಇಂದು ಮಧ್ಯಾಹ್ನದ ವೇಳೆ ಉಳ್ಳಾಲ ಕಡಲ ಕಿನಾರೆಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಬಶೀರ್, ಸಲ್ಮಾನ್, ಸೈಫ್ ಆಲಿ ನೀರಾಟಕ್ಕಿಳಿದಿದ್ದು ಸಮುದ್ರದ ರಕ್ಕಸ ಅಲೆಗಳು ಮೂವರನ್ನೂ ಎಳೆದೊಯ್ದಿದೆ.

ತಕ್ಷಣ ಸ್ಥಳೀಯ ಈಜುಗಾರರು ಸಲ್ಮಾನ್ ಮತ್ತು ಸೈಫ್ ಅಲಿಯನ್ನ ಎಳೆದು ದಡಕ್ಕೆ ಹಾಕಿದ್ದಾರೆ. ಸಲ್ಮಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಸೈಫ್ ಅಲಿ ಪ್ರಾಣಾಪಾಯದಿಂದ ಪಾರಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಶೀರ್ ನೀರು ಪಾಲಾಗಿದ್ದು ಉಳ್ಳಾಲ ಪೊಲೀಸರು, ಅಗ್ನಿಶಾಮಕ ದಳದವರು ಆತನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ವೇಳೆ ನೀರುಪಾಲಾಗಿರುವ ಬಶೀರ್ ಅವರ ತುಂಬು ಗರ್ಭಿಣಿ ಪತ್ನಿ ಮತ್ತು ಇತರ ಇಬ್ಬರು ಮಹಿಳೆಯರು ಇದ್ದರೆಂದು ಸ್ಥಳೀಯರು ತಿಳಿಸಿದ್ದಾರೆ.
Two drowned at Beach in Ullal at Mangalore, two dead, one saved. The two have said to come from Chikmagaluru.They had come to visit ullal dargah
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm