ಬ್ರೇಕಿಂಗ್ ನ್ಯೂಸ್
29-12-23 04:25 pm Mangalore Correspondent ಕರಾವಳಿ
ಉಳ್ಳಾಲ, ಡಿ.29: ಸಮುದ್ರದಲ್ಲಿ ನೀರಾಟಕ್ಕಿಳಿದ ಮೂವರು ಯುವಕರನ್ನ ರಕ್ಕಸ ಅಲೆಗಳು ಕೊಚ್ಚಿಕೊಂಡು ಹೋದ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಓರ್ವ ಯುವಕ ಮೃತಪಟ್ಟರೆ, ಮತ್ತೋರ್ವ ಸಮುದ್ರ ಪಾಲಾಗಿದ್ದು , ಇನ್ನೋರ್ವನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ.
ಚಿಕ್ಕಮಗಳೂರು ನಿವಾಸಿ ಸಲ್ಮಾನ್(19) ಮೃತಪಟ್ಟ ಯುವಕನಾಗಿದ್ದು , ಆತನ ಸಂಬಂಧಿ ಬಶೀರ್(23) ನೀರು ಪಾಲಾಗಿದ್ದಾನೆ. ಮತ್ತೋರ್ವ ಯುವಕ ಸೈಫ್ ಆಲಿ(27) ಆಸ್ಪತ್ರೆಯಲ್ಲಿ ಚೇತರಿಸಿದ್ದಾನೆ.

ಸಾವಿನ ದವಡೆಯಿಂದ ಪಾರಾದ ಯುವಕ ಸೈಫ್ ಅಲಿ
ಚಿಕ್ಕಮಗಳೂರು ಮೂಲದ ಬಶೀರ್, ಸಲ್ಮಾನ್ ಮತ್ತು ಸೈಫ್ ಅಲಿ ಎಂಬವರು ತಮ್ಮ ಕುಟುಂಬಸ್ಥರೊಂದಿಗೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದರು. ಇಂದು ಮಧ್ಯಾಹ್ನದ ವೇಳೆ ಉಳ್ಳಾಲ ಕಡಲ ಕಿನಾರೆಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಬಶೀರ್, ಸಲ್ಮಾನ್, ಸೈಫ್ ಆಲಿ ನೀರಾಟಕ್ಕಿಳಿದಿದ್ದು ಸಮುದ್ರದ ರಕ್ಕಸ ಅಲೆಗಳು ಮೂವರನ್ನೂ ಎಳೆದೊಯ್ದಿದೆ.

ತಕ್ಷಣ ಸ್ಥಳೀಯ ಈಜುಗಾರರು ಸಲ್ಮಾನ್ ಮತ್ತು ಸೈಫ್ ಅಲಿಯನ್ನ ಎಳೆದು ದಡಕ್ಕೆ ಹಾಕಿದ್ದಾರೆ. ಸಲ್ಮಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಸೈಫ್ ಅಲಿ ಪ್ರಾಣಾಪಾಯದಿಂದ ಪಾರಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಶೀರ್ ನೀರು ಪಾಲಾಗಿದ್ದು ಉಳ್ಳಾಲ ಪೊಲೀಸರು, ಅಗ್ನಿಶಾಮಕ ದಳದವರು ಆತನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ವೇಳೆ ನೀರುಪಾಲಾಗಿರುವ ಬಶೀರ್ ಅವರ ತುಂಬು ಗರ್ಭಿಣಿ ಪತ್ನಿ ಮತ್ತು ಇತರ ಇಬ್ಬರು ಮಹಿಳೆಯರು ಇದ್ದರೆಂದು ಸ್ಥಳೀಯರು ತಿಳಿಸಿದ್ದಾರೆ.
Two drowned at Beach in Ullal at Mangalore, two dead, one saved. The two have said to come from Chikmagaluru.They had come to visit ullal dargah
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm