ಬ್ರೇಕಿಂಗ್ ನ್ಯೂಸ್
29-12-23 04:25 pm Mangalore Correspondent ಕರಾವಳಿ
ಉಳ್ಳಾಲ, ಡಿ.29: ಸಮುದ್ರದಲ್ಲಿ ನೀರಾಟಕ್ಕಿಳಿದ ಮೂವರು ಯುವಕರನ್ನ ರಕ್ಕಸ ಅಲೆಗಳು ಕೊಚ್ಚಿಕೊಂಡು ಹೋದ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಓರ್ವ ಯುವಕ ಮೃತಪಟ್ಟರೆ, ಮತ್ತೋರ್ವ ಸಮುದ್ರ ಪಾಲಾಗಿದ್ದು , ಇನ್ನೋರ್ವನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ.
ಚಿಕ್ಕಮಗಳೂರು ನಿವಾಸಿ ಸಲ್ಮಾನ್(19) ಮೃತಪಟ್ಟ ಯುವಕನಾಗಿದ್ದು , ಆತನ ಸಂಬಂಧಿ ಬಶೀರ್(23) ನೀರು ಪಾಲಾಗಿದ್ದಾನೆ. ಮತ್ತೋರ್ವ ಯುವಕ ಸೈಫ್ ಆಲಿ(27) ಆಸ್ಪತ್ರೆಯಲ್ಲಿ ಚೇತರಿಸಿದ್ದಾನೆ.

ಸಾವಿನ ದವಡೆಯಿಂದ ಪಾರಾದ ಯುವಕ ಸೈಫ್ ಅಲಿ
ಚಿಕ್ಕಮಗಳೂರು ಮೂಲದ ಬಶೀರ್, ಸಲ್ಮಾನ್ ಮತ್ತು ಸೈಫ್ ಅಲಿ ಎಂಬವರು ತಮ್ಮ ಕುಟುಂಬಸ್ಥರೊಂದಿಗೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದರು. ಇಂದು ಮಧ್ಯಾಹ್ನದ ವೇಳೆ ಉಳ್ಳಾಲ ಕಡಲ ಕಿನಾರೆಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಬಶೀರ್, ಸಲ್ಮಾನ್, ಸೈಫ್ ಆಲಿ ನೀರಾಟಕ್ಕಿಳಿದಿದ್ದು ಸಮುದ್ರದ ರಕ್ಕಸ ಅಲೆಗಳು ಮೂವರನ್ನೂ ಎಳೆದೊಯ್ದಿದೆ.

ತಕ್ಷಣ ಸ್ಥಳೀಯ ಈಜುಗಾರರು ಸಲ್ಮಾನ್ ಮತ್ತು ಸೈಫ್ ಅಲಿಯನ್ನ ಎಳೆದು ದಡಕ್ಕೆ ಹಾಕಿದ್ದಾರೆ. ಸಲ್ಮಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಸೈಫ್ ಅಲಿ ಪ್ರಾಣಾಪಾಯದಿಂದ ಪಾರಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಶೀರ್ ನೀರು ಪಾಲಾಗಿದ್ದು ಉಳ್ಳಾಲ ಪೊಲೀಸರು, ಅಗ್ನಿಶಾಮಕ ದಳದವರು ಆತನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ವೇಳೆ ನೀರುಪಾಲಾಗಿರುವ ಬಶೀರ್ ಅವರ ತುಂಬು ಗರ್ಭಿಣಿ ಪತ್ನಿ ಮತ್ತು ಇತರ ಇಬ್ಬರು ಮಹಿಳೆಯರು ಇದ್ದರೆಂದು ಸ್ಥಳೀಯರು ತಿಳಿಸಿದ್ದಾರೆ.
Two drowned at Beach in Ullal at Mangalore, two dead, one saved. The two have said to come from Chikmagaluru.They had come to visit ullal dargah
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm