ಬ್ರೇಕಿಂಗ್ ನ್ಯೂಸ್
29-12-23 09:20 pm Mangalore Correspondent ಕರಾವಳಿ
ಮಂಗಳೂರು, ಡಿ.29: ರಾಮ ಭಾರತೀಯರಿಗೆ ಎಲ್ಲರಿಗೂ ಸೇರಿದವನು. ರಾಮನ ಮಂದಿರಕ್ಕೆ ಯಾರಿಗೆ ಬರಬೇಕು ಅಂತ ಅಪೇಕ್ಷೆ ಇದೆಯೋ ಅವರೆಲ್ಲ ಬರಬಹುದು. ಆಹ್ವಾನ ಇಲ್ಲದೆಯೂ ರಾಮ ಮಂದಿರಕ್ಕೆ ಬರಬಹುದು. ಆಹ್ವಾನ ತಿರಸ್ಕಾರ ಮಾಡೋದು ಅವರವರಿಗೆ ಬಿಟ್ಟದ್ದು, ವ್ಯಕ್ತಿಗತವಾದ್ದು ಎಂದು ಎಡ ಪಕ್ಷಗಳ ಟೀಕೆಯ ಬಗ್ಗೆ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.
ಅವರನ್ನು ಕರೆದಿಲ್ಲ ಅಂತಾದ್ರೆ ಕರೆದಿಲ್ಲ ಎನ್ನೋದೇ ದೊಡ್ಡ ಆಕ್ಷೇಪ. ಕರೆದ ಮೇಲೆ ನಾವು ತಿರಸ್ಕರಿಸುತ್ತೇವೆ ಎನ್ನೋದೇ ದೊಡ್ಡ ಹೆಗ್ಗಳಿಕೆ ಅನ್ಕೊಂಡಿದ್ದಾರೆ. ಕಾಮಾಲೆ ಕಣ್ಣಿಗೆ ಕಾಣೋದೆಲ್ಲಾ ಹಳದಿ. ರಾಜಕೀಯ ಟೀಕೆಗಳಿಗೆ ಉತ್ತರ ಕೊಡೋದಿಲ್ಲ.
ಆಹ್ವಾನ ನೀಡುವಲ್ಲಿ ತಾರತಮ್ಯ ಎಂಬ ಟೀಕೆಗೆ ಉತ್ತರಿಸಿದ ಸ್ವಾಮೀಜಿ, ಅಲ್ಲಿರುವ ಸ್ಥಳಾವಕಾಶ ಅಲ್ಪವಾದದ್ದು. ಅಬ್ಬಬ್ಬಾ ಅಂದ್ರೆ ಏಳೆಂಟು ಸಾವಿರ ಜನ ಸೇರಬಹುದು. ಲೋಕದಲ್ಲಿ ಮಹಾತ್ಮರು, ಗೌರವಾನಿತ್ವರು ತುಂಬಾ ಮಂದಿ ಇದ್ದಾರೆ. ಯಾರನ್ನು ಕರೆದರೂ ಆಕ್ಷೇಪ ಇರುವಂತಹದ್ದೇ. ಅಲ್ಲಿನ ಪರಿಸ್ಥಿತಿ, ಅವಕಾಶವನ್ನು ಗಮನಿಸಿಕೊಂಡು ಸಮಾಧಾನಪಡಬೇಕು.
ಪ್ರಾತಿನಿಧ್ಯ ಆಧರಿಸಿ ಆಹ್ವಾನವನ್ನು ನೀಡಿದ್ದೇವೆ. ಆಹ್ವಾನ ನೀಡದಿರುವ ಬಗ್ಗೆ ಮಂದಿರ, ಟ್ರಸ್ಟ್, ವ್ಯಕ್ತಿಗೆ ಸ್ವಾರ್ಥ, ಲಾಭ ಯಾವುದೂ ಇಲ್ಲ. ಇದು ಮನುಷ್ಯ ಸಹಜವಾದ ಪ್ರಕ್ರಿಯೆ. ಎಲ್ಲರನ್ನೂ ಸಮಾಧಾನಪಡಿಸಲು ಸಾಧ್ಯವಿಲ್ಲ. ಎಲ್ಲರೂ ಈ ವಿಚಾರವನ್ನು ಗಮನದಲ್ಲಿಟ್ಟು ಶಾಂತರಾಗಬೇಕು ಎಂದರು.
ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾದ ಪ್ರಶ್ನೆಗೆ, ಒಬ್ಬರ ಕಡೆಯಿಂದ ಏನೂ ತಪ್ಪು ಆಗದಿದ್ದರೂ ತಪ್ಪು ಎಂದು ಭಾರೀ ಪ್ರತಿಭಟನೆ. ಇನ್ನೊಂದು ಕಡೆಯಿಂದ ಏನು ತಪ್ಪು ಆದರೂ ಕಣ್ಮುಚ್ಚಿ, ಬಾಯಿಮಚ್ಚಿ ಇರೋದು. ಇಂತಹ ನಡೆ ಸರಿಯಲ್ಲ. ಅವರ ಹೇಳಿಕೆ ವ್ಯಕ್ತಿಗತವಾಗಿರೋದು. ನಾನು ಆ ಬಗ್ಗೆ ಯಾವುದೇ ಅಭಿಪ್ರಾಯ ಕೊಡೋದು ಸರಿಯಲ್ಲ ಎಂದು ಹೇಳಿದರು. ಖಾಸಗಿ ಕಾರ್ಯಕ್ರಮಕ್ಕೆ ಮಂಗಳೂರಿಗೆ ಆಗಮಿಸಿದ್ದ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಾಧ್ಯಮದ ಪ್ರಶ್ನೆಗೆ ಉತ್ತರ ನೀಡಿದ್ದಾರೆ.
Lord Ram belongs to all Indians. Those who want to come to the Ram temple can come. You can come to ram temple even without an invitation. Pejawar Vishwaprasanna Theertha Swamiji reacted to the left's criticism that it was up to him to reject the invitation and it was personal.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
23-06-25 08:54 pm
HK News Desk
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
23-06-25 06:56 pm
Mangalore Correspondent
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
Dharmasthala Murder, SP Arun Kumar; ಧರ್ಮಸ್ಥಳ...
23-06-25 05:04 pm
Mining Officer Krishnaveni Suspended; ‘ಹೆಡ್ ಲ...
21-06-25 11:04 pm
Krishnaveni Mines Geology, Mangalore;18 ದಿನ ಜ...
21-06-25 03:56 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm