ಬ್ರೇಕಿಂಗ್ ನ್ಯೂಸ್
02-01-24 04:47 pm Mangalore Correspondent ಕರಾವಳಿ
ಮಂಗಳೂರು, ಜ.2: ಸಿದ್ದರಾಮಯ್ಯ ಅವರೇ ನಮ್ಮ ರಾಮ, ಅಯೋಧ್ಯೆಯದ್ದು ಬಿಜೆಪಿ ರಾಮ ಎಂಬ ಮಾಜಿ ಸಚಿವ ಆಂಜನೇಯ ವಿವಾದಾತ್ಮಕ ಹೇಳಿಕೆ ಬಗ್ಗೆ ಕೆಪಿಸಿಸಿ ಉಪಾಧ್ಯಕ್ಷ ಕೆ.ಆರ್ ಸುದರ್ಶನ್ ಪ್ರತಿಕ್ರಿಯಿಸಿದ್ದು ಆಂಜನೇಯರದ್ದು ವೈಯಕ್ತಿಕ ಹೇಳಿಕೆ. ಅದು ಪಕ್ಷದ ನಿಲುವಲ್ಲ. ಸಿದ್ದರಾಮಯ್ಯ ಮೇಲಿನ ಅಭಿಮಾನದಿಂದ ಹಾಗೆ ಹೇಳಿರಬಹುದು ಎಂದಿದ್ದಾರೆ.
ಅವರ ಅಭಿಪ್ರಾಯ ಪಕ್ಷದ ಅಭಿಪ್ರಾಯ ಆಗಲ್ಲ. ಆದರೆ ಸಿದ್ದರಾಮಯ್ಯ ಒಬ್ಬ ಜನನಾಯಕ. ಕೆಲವರು ಅವರನ್ನು ನೋಡುವ ದೃಷ್ಟಿಕೋನ ಬೇರೆ ಇರುತ್ತೆ. ಆ ಕಾರಣದಿಂದ ಆಂಜನೇಯ, ಸಿದ್ದರಾಮಯ್ಯರನ್ನೇ ರಾಮ ಎಂದು ಹೇಳಿರಬಹುದು ಎಂದು ಹೇಳಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.
ಅಯೋಧ್ಯೆ ಹೋರಾಟದ ಕೇಸ್ ರೀ ಓಪನ್ ಕುರಿತಾಗಿ ಆರ್. ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದ ಸುದರ್ಶನ್, ಅಶೋಕ ಅವರು ಹೋಮ್ ಮಿನಿಸ್ಟರ್ ಆಗಿದ್ದಾಗ ಕಡ್ಲೆಕಾಯಿ ತಿಂತಿದ್ರಾ? ಇವರ್ಯಾಕೆ ಅಧಿಕಾರದಲ್ಲಿದ್ದಾಗ ಆ ಕೇಸ್ ಗಳನ್ನ ವಾಪಸ್ ತಗೊಂಡಿಲ್ಲ. ಬಿಜೆಪಿ ನಾಯಕರಿಗೆ ಜವಾಬ್ದಾರಿ ಇರಲಿಲ್ವಾ? ಎರಡು ಸಲ ರಾಜ್ಯದಲ್ಲಿ ಸರ್ಕಾರ ಮಾಡಿಲ್ವಾ? ರಾಜಕಾರಣಕ್ಕೆ ಮಾತ್ರ ಅಯೋಧ್ಯೆ ವಿಚಾರ ಬೇಕು ಇವರಿಗೆ. ಈ ಘಟನೆಯನ್ನು ರಾಜಕೀಯವಾಗಿ ನೋಡುವ ಅಗತ್ಯವಿಲ್ಲ ಎಂದರು.
ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸದ ಬಗ್ಗೆ ಮುಸ್ಲಿಮರ ಆಕ್ರೋಶದ ಕುರಿತ ಪ್ರಶ್ನೆಗೆ, ಸರ್ಕಾರ ನಿಯಮಾನುಸಾರ ಕೆಲಸ ಮಾಡ ಬೇಕಾಗುತ್ತದೆ. ರಾಜಕೀಯ ದುರುದ್ದೇಶಕ್ಕಾಗಿ ಕೆಲಸ ಮಾಡಲ್ಲ. ಕಾನೂನು ಪ್ರಕಾರ ಏನು ಆಗಬೇಕು ಅದನ್ನು ಸರಕಾರ ಮಾಡಿದೆ. ಬಂಧಿಸಬೇಕು ಎನ್ನುವ ಕಾರಣಕ್ಕೆ ಬಂಧಿಸಲೇಬೇಕು ಅನ್ನುವುದಲ್ಲ. ಹಿಂದಿನ ಬಿಜೆಪಿ ಸರಕಾರದ ದುರಾಡಳಿತದಿಂದ ಜನ ಬದಲಾವಣೆ ಬಯಸಿ ಈ ಬಾರಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದಿದ್ದಾರೆ. ಹಿಂದಿನ ಸರಕಾರದ ಆಡಳಿತದಲ್ಲಿ ಅಭಿವೃದ್ಧಿ ಕುಸಿದಿತ್ತು. ದುರಾಡಳಿತದ ವಿರುದ್ಧ ಕಾಂಗ್ರೆಸಿನ ನಿರಂತರ ಹೋರಾಟದ ಪರಿಣಾಮ ಕೈ ಬಗ್ಗೆ ಜನರ ನಿರೀಕ್ಷೆಯಿಂದಾಗಿ ಹೆಚ್ಚಿನ ಸ್ಥಾನ ನೀಡಿದ್ದಾರೆ.
ಅಧಿಕಾರಕ್ಕೆ ಬಂದ ಕೂಡಲೇ ಗ್ಯಾರಂಟಿ ಅನುಷ್ಠಾನ ಮಾಡಲಾಗಿದೆ. ಪ್ರಾಮಾಣಿಕವಾಗಿ ಅನುಷ್ಠಾನ ಮಾಡಿದ್ದೇವೆ, ಜಾತಿ ಧರ್ಮ ಸೀಮಿತವಾಗಿ ಮಾಡಿಲ್ಲ. ಈ ಬಾರಿ ಬರಗಾಲದಿಂದ ಜನರು ತತ್ತರಿಸಿದ್ದಾರೆ. ಬರಗಾಲ ಪರಿಣಾಮ ಬೀರಿದ ಸಂದರ್ಭ ಗ್ಯಾರಂಟಿ ಬಡವರ ಬದುಕಿಗೆ ಆಸರೆಯಾಗಿತ್ತು. ಗ್ಯಾರಂಟಿಯಿಂದಾಗಿ ಹಾಹಾಕಾರ ಕಡಿಮೆ ಆಗಿದೆ ಎಂದು ಹೇಳಿದರು.
Reacting to former minister Anjaneya's controversial statement that Siddaramaiah is our Ram and Ayodhya is BJP's Rama, KPCC vice-president K R Sudarshan said, "Anjaneya's statement is a personal statement.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm