ಬ್ರೇಕಿಂಗ್ ನ್ಯೂಸ್
02-01-24 06:37 pm Mangalore Correspondent ಕರಾವಳಿ
ಮಂಗಳೂರು, ಜ.2: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಸನ್ನಿಹಿತವಾಗಿರುವಂತೆಯೇ 1992ರಲ್ಲಿ ರಾಜ್ಯದಿಂದ ಕರಸೇವೆಯಲ್ಲಿ ಪಾಲ್ಗೊಂಡಿದ್ದವರ ಮೇಲಿನ ದುರುದ್ದೇಶಪೂರಿತ ಪ್ರಕರಣಗಳನ್ನು ಮತ್ತೆ ಮುನ್ನಲೆಗೆ ತಂದು ಕಾಂಗ್ರೆಸ್ ಸರ್ಕಾರ ತನ್ನ ಹಿಂದೂ ವಿರೋಧಿ ನೀತಿಯನ್ನು ಹಾಗೂ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವನ್ನು ಮುಂದುವರಿಸಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಆಕ್ರೋಶ ವ್ಯಕ್ತಪಡಿಸಿದರು.
"ಕೋರ್ಟ್ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ, ಇದರಲ್ಲಿ ಸರ್ಕಾರದ ಯಾವುದೇ ಒತ್ತಡ ಇಲ್ಲ" ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಹೇಳಿಕೆ ನೀಡಿದರೆ, ಸ್ವತಃ ಗೃಹ ಸಚಿವರೇ "ಹಳೆಯ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಸೂಚನೆ ನೀಡಿದ್ದೆ, ಅದರಂತೆ ಈ ಕ್ರಮ ಕೈಗೊಳ್ಳಲಾಗಿದೆ" ಎಂದು ಹೇಳಿಕೆ ನೀಡಿದ್ದಾರೆ. ಇಲ್ಲಿ ಯಾರ ಮಾತು ನಿಜ? ಏನೇ ಇದ್ದರೂ ಕಾಂಗ್ರೆಸ್ ಸರ್ಕಾರ ಈ ಮೂಲಕ ಹಿಂದೂ ವಿರೋಧಿಯಾಗಿ ನಡೆದುಕೊಳ್ಳುತ್ತಿರುವುದಂತೂ ಸ್ಪಷ್ಟ. ಅದರಲ್ಲಿ ಯಾವುದೇ ಸಂಶಯವೂ ಇಲ್ಲ. ರಾಮಭಕ್ತರ ಮೇಲೆ ಇಷ್ಟೊಂದು ಹಗೆ ಸಾಧಿಸುವ ಕಾಂಗ್ರೆಸ್ಸಿನವರು ರಾಮಭಕ್ತರ ಮತವೇ ನಮಗೆ ಬೇಡ ಎಂದು ಹೇಳಲಿ ನೋಡೋಣ ಎಂದು ಸವಾಲು ಹಾಕಿದರು.
ಇಡೀ ದೇಶದ ಜನತೆ ರಾಮ ಮಂದಿರದ ಸಂಭ್ರಮದಲ್ಲಿರುವಾಗ ನಮ್ಮ ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಸರ್ಕಾರ ರಾಮಭಕ್ತರ ಮೇಲೆ ಆಕ್ರೋಶದಲ್ಲಿದೆ. ಹಾಗಾಗಿಯೇ ಕರಸೇವಕರು ಹಾಗೂ ಹಿಂದೂ ಪರ ಕಾರ್ಯಕರ್ತರಿಗೆ ಉದ್ದೇಶಪೂರ್ವಕವಾಗಿ ಕಿರುಕುಳ ನೀಡಲು ಮುಂದಾಗಿದೆ. 31 ವರ್ಷಗಳ ಹಿಂದಿನ ಪ್ರಕರಣಗಳಿಗೆ ಮರು ಜೀವ ನೀಡಿ ಹಿಂದೂ ಕಾರ್ಯಕರ್ತರನ್ನು ಬೆದರಿಸುವ ತಂತ್ರ ಇದಾಗಿದೆ. ಈಗಾಗಲೇ ಜಿಲ್ಲೆಯಲ್ಲೂ ಹಲವು ಹಿಂದೂ ಕಾರ್ಯಕರ್ತರನ್ನು ಗಡಿಪಾರು ಮಾಡಲಾಗಿದ್ದು ಇನ್ನಷ್ಟು ಹೋರಾಟಗಾರರನ್ನು ಗಡಿಪಾರು ಮಾಡಲು ಸಿದ್ಧತೆ ನಡೆಸಿರುವುದು ಕಾಂಗ್ರೆಸ್ ಹಿಂದೂಗಳನ್ನು ಧಮನಿಸುವ ನೀತಿಗೆ ಸಾಕ್ಷಿ. ಇದಕ್ಕೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ಶಾಸಕರು ಹೇಳಿದರು.
Mangaluru South MLA Vedavyas said that the Congress government is continuing its anti-Hindu policy and minority appeasement politics by bringing back to the fore the malicious cases against those who participated in kar seva from the state in 1992.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm