ಬ್ರೇಕಿಂಗ್ ನ್ಯೂಸ್
03-01-24 09:48 pm Mangalore Correspondent ಕರಾವಳಿ
ಮಂಗಳೂರು, ಜ.3: ಶ್ರೀರಾಮ ಜನ್ಮಭೂಮಿ ಆಂದೋಲನ ಸಂದರ್ಭದಲ್ಲಿ ದಾಖಲಾದ ಸುಳ್ಳು ಪ್ರಕರಣಗಳ ನೆಪದಲ್ಲಿ ರಾಮನ ಭಕ್ತರನ್ನು ಬಂಧಿಸಿ ಹಿಂಸಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. 70-80 ವಯಸ್ಸಿನವರನ್ನು ಈಗ ಬಂಧಿಸಿ ಜೈಲಿಗಟ್ಟುವ ಅಗತ್ಯವೇನು ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಹಳೆ ಕೇಸುಗಳಿಗೆ ಜೀವ ಕೊಡುತ್ತಿದೆ. 30-35 ವರ್ಷಗಳಷ್ಟು ಹಳೆಯ ಪ್ರಕರಣಗಳು, ಅದರಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ. ಇದ್ದವರು 70 ರಿಂದ 80 ವರ್ಷದೊಳಗಿದ್ದಾರೆ. ಅಂಥವರನ್ನು ವಾರೆಂಟ್ ಇದೆಯೆಂದು ಹೇಳಿ ಪ್ರಕರಣವನ್ನು ಮರುತನಿಖೆ ನಡೆಸುತ್ತಿದ್ದು ಆಮೂಲಕ ರಾಮಭಕ್ತರನ್ನು ಹಿಂಸಿಸುತ್ತಿದ್ದಾರೆ.

ಶ್ರೀರಾಮ ಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ಹೆಚ್ಚಿನವು ಬೋಗಸ್ ಆಗಿದ್ದರಿಂದ ಹಿಂದಿನ ಕೆಲವು ಸರ್ಕಾರಗಳು ಅವುಗಳನ್ನು ರದ್ದುಗೊಳಿಸಿದ್ದವು. ಇಂದು, ಆ ಕೇಸನ್ನು ಮರುತನಿಖೆ ನಡೆಸಲು ಆದೇಶಿಸಿ ಬದುಕುಳಿದ ಆ ಕಾರ್ಯಕರ್ತರನ್ನು ಮತ್ತೆ ಬಂಧಿಸುತ್ತಿರುವುದು ಖಂಡನೀಯ. ಈ ಎಲ್ಲ ಕಾರ್ಯಕರ್ತರನ್ನು ಬಂಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ರಾಮ ವಿರೋಧಿ ಧೋರಣೆಯನ್ನು ತೋರಿಸುತ್ತಿದೆ.
ಶ್ರೀರಾಮ ಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ದಾಖಲಾದ ಸುಳ್ಳು ಪ್ರಕರಣಗಳನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ತಕ್ಷಣ ಕೈಬಿಡಬೇಕು ಮತ್ತು ಯಾವುದೇ ಕಾರಣಕ್ಕೂ ರಾಮಭಕ್ತರನ್ನು ಬಂಧಿಸಬಾರದು ಎಂದು ಆಗ್ರಹಿಸುತ್ತೇನೆ. ಮರು ತನಿಖೆ ಹೆಸರಿನಲ್ಲಿ ರಾಮ ಭಕ್ತರನ್ನು ಬಂಧಿಸಿದರೆ ಇದಕ್ಕೆ ಕರ್ನಾಟಕ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
Srikanath Poojari arrest, Vishwa Hindu parishad in Mangalore say Ram Bhakts have been targeted.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm