ಬ್ರೇಕಿಂಗ್ ನ್ಯೂಸ್
06-01-24 03:40 pm Mangalore Correspondent ಕರಾವಳಿ
ಮಂಗಳೂರು, ಜ.6: ಕಾಂತಾರ ಚಿತ್ರದ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಗುರುಪುರ ವಜ್ರದೇಹಿ ಮಠದ ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ಆಗಮಿಸಿದ್ದು, ಮೈಸಂದಾಯ ಮತ್ತು ಅಣ್ಣಪ್ಪ ಪಂಜುರ್ಲಿ ದೈವದ ಕೋಲದಲ್ಲಿ ಕಾಣಿಸಿಕೊಂಡಿದ್ದಾರೆ.
ನಿನ್ನೆ ರಾತ್ರಿ 12 ವೇಳೆಗೆ ಮೈಸಂದಾಯ ದೈವದ ಕೋಲ ನಡೆದಿದ್ದು, ಆ ಸಂದರ್ಭದಲ್ಲಿ ಗುರುಪುರ ಮಠದ ವಜ್ರದೇಹಿ ಸ್ವಾಮೀಜಿ ಜೊತೆಗೆ ಕಾಂತಾರ ಎರಡನೇ ಭಾಗದ ಚಿತ್ರೀಕರಣದ ಸಲುವಾಗಿ ದೈವದ ಅನುವು ಕೇಳಿದ್ದಾರೆ. ದೈವವು ರಿಷಬ್ ಶೆಟ್ಟಿ ಕೇಳಿಕೊಂಡ ಮಾತಿಗೆ ಅನುವು ನೀಡಿದಂತೆ ಬೆನ್ನು ತಟ್ಟಿ ಆಶೀರ್ವದಿಸಿದ ವಿಡಿಯೋ ವೈರಲ್ ಆಗಿದೆ. ಹೀಗಾಗಿ ದೈವ ಕಾಂತಾರದ ಚಿತ್ರಕ್ಕಾಗಿ ಅಭಯ ನೀಡಿದೆಯೆಂದು ಹೇಳಲಾಗುತ್ತಿದೆ.


ಆನಂತರ, ನಸುಕಿನ ವೇಳೆಗೆ ಅಣ್ಣಪ್ಪ ಪಂಜುರ್ಲಿ ದೈವದ ಕೋಲದ ಸಂದರ್ಭದಲ್ಲಿಯೂ ರಿಷಬ್ ಶೆಟ್ಟಿ ಬಂದು ದೈವದಲ್ಲಿ ಕಾಂತಾರದ ಚಿತ್ರಕ್ಕಾಗಿ ಬೇಡಿಕೊಂಡಿದ್ದಾರೆ. ಕಾಂತಾರ ಚಿತ್ರದ ಎರಡನೇ ಭಾಗದ ಚಿತ್ರೀಕರಣದಲ್ಲಿ ಬಿಝಿಯಾಗಿರುವ ರಿಷಬ್ ಶೆಟ್ಟಿ ಅದರ ನಡುವಲ್ಲೇ ಕೋಲಕ್ಕೆ ಬಂದು ಬೇಡಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ರಿಷಬ್ ಶೆಟ್ಟಿಯವರ ಕಾಂತಾರ ಚಿತ್ರದ ಕಾರಣದಿಂದಲೇ ದೈವಾರಾಧನಗೆ ಅಪಚಾರ ಆಗಿದೆಯೆಂದು ಜಾಲತಾಣದಲ್ಲಿ ಟೀಕೆ ಬಂದಿತ್ತು. ಬೆಂಗಳೂರು, ಮಂಡ್ಯದಲ್ಲಿ ದೈವದ ಆವೇಶ, ಕೊರಗಜ್ಜನ ಕೋಲದಲ್ಲಿ ವಿಕೃತ ನಡವಳಿಕೆಯ ವಿಡಿಯೋ ವೈರಲ್ ಆಗಿದ್ದಕ್ಕೆ ದೈವಾರಾಧಕರು ಭಾರೀ ಟೀಕೆಯನ್ನೂ ಮಾಡಿದ್ದರು. ಇದೆಲ್ಲ ಕಾಂತಾರ ಚಿತ್ರದ ಬಳಿಕವೇ ಆಗಿರುವುದು ಎನ್ನುವ ಟೀಕೆ ವ್ಯಕ್ತವಾಗಿತ್ತು.
ಎರಡನೇ ಭಾಗದಲ್ಲಿ ದೈವದ ಕುರಿತಾಗಿ ಸಿನಿಮಾ ಮಾಡಬಾರದೆಂದು ರಿಷಬ್ ಶೆಟ್ಟಿ ಬಗ್ಗೆ ಟೀಕೆಯನ್ನೂ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸ್ವತಃ ರಿಷಬ್ ಶೆಟ್ಟಿ ಪಂಜುರ್ಲಿ ದೈವದ ಕೋಲದ ಸಂದರ್ಭದಲ್ಲಿ ಬಂದು ಸಿನಿಮಾ ಚಿತ್ರೀಕರಣಕ್ಕಾಗಿ ಬೇಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಯಾವ ರೀತಿಯ ಬೇಡಿಕೆಯನ್ನು ದೈವದ ಮುಂದಿರಿಸಿದ್ದರು, ದೈವ ಯಾವ ರೀತಿಯ ಆಶೀರ್ವಾದ ನೀಡಿದೆ ಎನ್ನುವ ಬಗ್ಗೆ ತಿಳಿಯಲು ಗುರುಪುರ ಸ್ವಾಮೀಜಿ ಸಂಪರ್ಕಕ್ಕೆ ಸಿಕ್ಕಿಲ್ಲ.
Kantara actor Rishab Shetty visits Gurupura Math Rajashekharananda swamiji in Mangalore.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm