ಬ್ರೇಕಿಂಗ್ ನ್ಯೂಸ್
06-01-24 03:40 pm Mangalore Correspondent ಕರಾವಳಿ
ಮಂಗಳೂರು, ಜ.6: ಕಾಂತಾರ ಚಿತ್ರದ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಗುರುಪುರ ವಜ್ರದೇಹಿ ಮಠದ ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ಆಗಮಿಸಿದ್ದು, ಮೈಸಂದಾಯ ಮತ್ತು ಅಣ್ಣಪ್ಪ ಪಂಜುರ್ಲಿ ದೈವದ ಕೋಲದಲ್ಲಿ ಕಾಣಿಸಿಕೊಂಡಿದ್ದಾರೆ.
ನಿನ್ನೆ ರಾತ್ರಿ 12 ವೇಳೆಗೆ ಮೈಸಂದಾಯ ದೈವದ ಕೋಲ ನಡೆದಿದ್ದು, ಆ ಸಂದರ್ಭದಲ್ಲಿ ಗುರುಪುರ ಮಠದ ವಜ್ರದೇಹಿ ಸ್ವಾಮೀಜಿ ಜೊತೆಗೆ ಕಾಂತಾರ ಎರಡನೇ ಭಾಗದ ಚಿತ್ರೀಕರಣದ ಸಲುವಾಗಿ ದೈವದ ಅನುವು ಕೇಳಿದ್ದಾರೆ. ದೈವವು ರಿಷಬ್ ಶೆಟ್ಟಿ ಕೇಳಿಕೊಂಡ ಮಾತಿಗೆ ಅನುವು ನೀಡಿದಂತೆ ಬೆನ್ನು ತಟ್ಟಿ ಆಶೀರ್ವದಿಸಿದ ವಿಡಿಯೋ ವೈರಲ್ ಆಗಿದೆ. ಹೀಗಾಗಿ ದೈವ ಕಾಂತಾರದ ಚಿತ್ರಕ್ಕಾಗಿ ಅಭಯ ನೀಡಿದೆಯೆಂದು ಹೇಳಲಾಗುತ್ತಿದೆ.


ಆನಂತರ, ನಸುಕಿನ ವೇಳೆಗೆ ಅಣ್ಣಪ್ಪ ಪಂಜುರ್ಲಿ ದೈವದ ಕೋಲದ ಸಂದರ್ಭದಲ್ಲಿಯೂ ರಿಷಬ್ ಶೆಟ್ಟಿ ಬಂದು ದೈವದಲ್ಲಿ ಕಾಂತಾರದ ಚಿತ್ರಕ್ಕಾಗಿ ಬೇಡಿಕೊಂಡಿದ್ದಾರೆ. ಕಾಂತಾರ ಚಿತ್ರದ ಎರಡನೇ ಭಾಗದ ಚಿತ್ರೀಕರಣದಲ್ಲಿ ಬಿಝಿಯಾಗಿರುವ ರಿಷಬ್ ಶೆಟ್ಟಿ ಅದರ ನಡುವಲ್ಲೇ ಕೋಲಕ್ಕೆ ಬಂದು ಬೇಡಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ರಿಷಬ್ ಶೆಟ್ಟಿಯವರ ಕಾಂತಾರ ಚಿತ್ರದ ಕಾರಣದಿಂದಲೇ ದೈವಾರಾಧನಗೆ ಅಪಚಾರ ಆಗಿದೆಯೆಂದು ಜಾಲತಾಣದಲ್ಲಿ ಟೀಕೆ ಬಂದಿತ್ತು. ಬೆಂಗಳೂರು, ಮಂಡ್ಯದಲ್ಲಿ ದೈವದ ಆವೇಶ, ಕೊರಗಜ್ಜನ ಕೋಲದಲ್ಲಿ ವಿಕೃತ ನಡವಳಿಕೆಯ ವಿಡಿಯೋ ವೈರಲ್ ಆಗಿದ್ದಕ್ಕೆ ದೈವಾರಾಧಕರು ಭಾರೀ ಟೀಕೆಯನ್ನೂ ಮಾಡಿದ್ದರು. ಇದೆಲ್ಲ ಕಾಂತಾರ ಚಿತ್ರದ ಬಳಿಕವೇ ಆಗಿರುವುದು ಎನ್ನುವ ಟೀಕೆ ವ್ಯಕ್ತವಾಗಿತ್ತು.
ಎರಡನೇ ಭಾಗದಲ್ಲಿ ದೈವದ ಕುರಿತಾಗಿ ಸಿನಿಮಾ ಮಾಡಬಾರದೆಂದು ರಿಷಬ್ ಶೆಟ್ಟಿ ಬಗ್ಗೆ ಟೀಕೆಯನ್ನೂ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸ್ವತಃ ರಿಷಬ್ ಶೆಟ್ಟಿ ಪಂಜುರ್ಲಿ ದೈವದ ಕೋಲದ ಸಂದರ್ಭದಲ್ಲಿ ಬಂದು ಸಿನಿಮಾ ಚಿತ್ರೀಕರಣಕ್ಕಾಗಿ ಬೇಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಯಾವ ರೀತಿಯ ಬೇಡಿಕೆಯನ್ನು ದೈವದ ಮುಂದಿರಿಸಿದ್ದರು, ದೈವ ಯಾವ ರೀತಿಯ ಆಶೀರ್ವಾದ ನೀಡಿದೆ ಎನ್ನುವ ಬಗ್ಗೆ ತಿಳಿಯಲು ಗುರುಪುರ ಸ್ವಾಮೀಜಿ ಸಂಪರ್ಕಕ್ಕೆ ಸಿಕ್ಕಿಲ್ಲ.
Kantara actor Rishab Shetty visits Gurupura Math Rajashekharananda swamiji in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm