ಬ್ರೇಕಿಂಗ್ ನ್ಯೂಸ್
09-01-24 10:19 pm Mangalore Correspondent ಕರಾವಳಿ
ಮಂಗಳೂರು, ಜ.9: ಸ್ಪೀಕರ್ ಯುಟಿ ಖಾದರ್ ಅವರಲ್ಲಿ ರಾಮ ಮಂದಿರ ಉದ್ಘಾಟನೆಗೆ ಹೋಗುತ್ತೀರಾ ಎಂದು ಪತ್ರಕರ್ತರು ಪ್ರಶ್ನೆ ಹಾಕಿದ್ದರು. ಬಹಳ ಜಾಣ್ಮೆಯಿಂದ ಉತ್ತರಿಸಲು ಮುಂದಾದ ಖಾದರ್ ಸಮಯ, ಸಂದರ್ಭ ಸಿಕ್ಕರೆ ಹೋಗುವುದರಲ್ಲಿ ತಪ್ಪಿಲ್ಲ ಎಂದು ಹೇಳಿಕೆ ಕೊಟ್ಟು ಜಾರಿಕೊಂಡಿದ್ದಾರೆ.
ರಾಮ ಮಂದಿರ ಬಗ್ಗೆ ಕೇಳಿದ ಪ್ರಶ್ನೆಗೆ, ನಾನು ಸ್ಪೀಕರ್ ಇದ್ದೇನೆ, ಹಾಗೆಲ್ಲ ಧರ್ಮ ಸೂಕ್ಷ್ಮಗಳ ಬಗ್ಗೆ ಮಾತಾಡಲ್ಲ ಎಂದ್ರು. ಮಂದಿರ ಉದ್ಘಾಟನೆ ಬಗ್ಗೆ ಎಂದು ಕೇಳಿದ್ದಕ್ಕೆ, ಸೌಹಾರ್ದತೆ ಪ್ರೀತಿ ವಿಶ್ವಾಸ ನೆಲೆಗೊಳಿಸುವ ಕಾರ್ಯಕ್ರಮ. ಎಲ್ಲರಿಗೂ ಪ್ರೇರಣೆ ಆಗುವ ಕೆಲಸ ಆಗುತ್ತಿದೆ. ಶುಭ ಹಾರೈಸುತ್ತೇನೆ ಎಂದರು.
ನೀವು ಕಾರ್ಯಕ್ರಮಕ್ಕೆ ಕರೆದರೆ ಹೋಗುತ್ತೀರಾ ಎಂದು ಕೇಳಿದ್ದಕ್ಕೆ, ನಮಗೆ ಸಮಯವಾಕಾಶ ಇದ್ದರೆ, ಅಂತಹ ಅವಕಾಶ, ಸಂದರ್ಭ ಬಂದಲ್ಲಿ ಹೋಗುವುದರಲ್ಲಿ ತಪ್ಪಿಲ್ಲ. ನಮ್ಮ ಪ್ರೋಗ್ರಾಮ್ ನೋಡಿಕೊಂಡು ಹೋಗಬೇಕಷ್ಟೆ. ಪ್ರತಿಯೊಂದು ಕೂಡ ಎಲ್ಲರನ್ನು ಒಗ್ಗೂಡಿಸುವ, ಸೌಹಾರ್ದತೆಯ ಕಾರ್ಯಕ್ರಮ ಆಗಬೇಕೆಂದು ಬಯಸುತ್ತೇನೆ ಎಂದು ಹೇಳಿದರು.
ಮಕ್ಕಳು ಶೌಚಾಲಯ ತೊಳೆಯುವ ಕುರಿತ ತಮ್ಮ ಮಾತಿನ ಬಗ್ಗೆ ಕೇಳಿದ್ದಕ್ಕೆ, ನಾವು ಸಣ್ಣದಿರುವಾಗ ನಮ್ಮ ಟಾಯ್ಲೆಟನ್ನು ನಾವೇ ತೊಳೆದಿದ್ದೇವೆ. ಹಾಗಂತ ಒತ್ತಾಯ ಮಾಡುವುದು ಸರಿಯಲ್ಲ. ಮಕ್ಕಳು ತಾವು ಬಳಸುವ ಟಾಯ್ಲೆಟನ್ನು ಕ್ಲೀನ್ ಮಾಡುವುದರಲ್ಲಿ ತಪ್ಪೇನಿದೆ. ತಾವಾಗಿಯೇ ಅಂತಹ ಕೆಲಸ ಮಾಡಿದರೆ, ಅರಿವು ಬರುತ್ತದೆ. ಹಾಗೆಂದು ನನ್ನ ಅಭಿಪ್ರಾಯ ಹೇಳಿದ್ದೇನೆ ಎಂದು ಸ್ಪಷ್ಟನೆ ನೀಡಿದರು. ಇತ್ತೀಚೆಗೆ ಮೂಡುಬಿದ್ರೆಯಲ್ಲಿ ಖಾದರ್ ಮಕ್ಕಳು ಟಾಯ್ಲೆಟ್ ತೊಳೆದರೆ ತಪ್ಪೇನು ಎಂದು ಹೇಳಿಕೆ ನೀಡಿದ್ದು ಚರ್ಚೆಗೆ ಗ್ರಾಸವಾಗಿತ್ತು.
A journalist asked Speaker UT Khader if he would go for the inauguration of ram temple. Khader, who tried to reply very tactfully, slipped away by saying that there was nothing wrong in going if the time and opportunity arose.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm