ಬ್ರೇಕಿಂಗ್ ನ್ಯೂಸ್
10-01-24 07:19 pm Mangalore Correspondent ಕರಾವಳಿ
ಮಂಗಳೂರು, ಜ.10: ನವಮಂಗಳೂರು ಬಂದರಿಗೆ ಹೊಸ ವರ್ಷದ ಮೊದಲ ಕ್ರೂಸ್ ಹಡಗು ಆಗಮಿಸಿದೆ. ಎಂ.ಎಸ್. ರಿವೀರಿಯ ಹೆಸರಿನ ಕ್ರೂಸ್ ಹಡಗು ಬುಧವಾರ ಎನ್ಎಂಪಿಟಿ ಬಂದರಿಗೆ ಆಗಮಿಸಿದ್ದು, ಹಡಗಿನಲ್ಲಿ ಬಂದ ವಿದೇಶಿ ಪ್ರವಾಸಿಗರು ಮಂಗಳೂರು ಸುತ್ತಾಡಿದ್ದಾರೆ. ಈ ಸಾಲಿನ ಸೀಸನ್ನಲ್ಲಿ ಬಂದ ನಾಲ್ಕನೇ ಪ್ರವಾಸಿ ಹಡಗು ಇದಾಗಿದೆ.
ಹಡಗಿನಲ್ಲಿ ಸಿಬಂದಿ ಸೇರಿ ಒಟ್ಟು 980 ಪ್ರವಾಸಿಗರಿದ್ದರು. ದುಬೈ, ಮುಂಬೈ, ಮರ್ಮಗೋವಾ ಬಂದರಿನ ಮೂಲಕ ಮಂಗಳೂರಿಗೆ ಆಗಮಿಸಿದ್ದು, ಐಷಾರಾಮಿ ಹಡಗು 239 ಮೀಟರ್ ಉದ್ದವಾಗಿದೆ. 66,172 ಟನ್ ಭಾರ ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಹಡಗಿನಲ್ಲಿ ಬಂದ ಪ್ರವಾಸಿಗರಿಗೆ ಮಂಗಳೂರಿನ ಬಂದರಿಗೆ ಕಾಲಿಡುತ್ತಿದ್ದಂತೆ ಕರಾವಳಿಯ ಸಾಂಪ್ರದಾಯಿಕ ಕಲೆ ಯಕ್ಷಗಾನ ಮೂಲಕ ಸ್ವಾಗತ ನೀಡಲಾಯಿತು. ವಿವಿಧ ರೀತಿಯ ಸಾಂಸ್ಕೃತಿಕ ಕಲಾ ಪ್ರಕಾರಗಳನ್ನು ಏರ್ಪಡಿಸಲಾಗಿತ್ತು.





ಪ್ರವಾಸಿಗರನ್ನು ಮಂಗಳೂರು ಸುತ್ತಮುತ್ತ ಸುತ್ತಾಡಿಸಲು ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಆಯುಷ್ ಇಲಾಖೆಯಿಂದ ಮೆಡಿಟೇಶನ್ ಸೆಂಟರ್, ಎನ್ಎಂಪಿಟಿ ಬಂದರಿನಲ್ಲಿ ಫ್ರೀ ವೈಫೈ, ಯಕ್ಷಗಾನ ಕಲಾವಿದರ ಜೊತೆಗೆ ಫೋಟೋ ಕ್ಲಿಕ್ಕಿಸಲು ಸೆಲ್ಫಿ ಸ್ಟಾಂಡ್ ಒದಗಿಸಲಾಗಿತ್ತು. ಹಡಗಿನ ಪ್ರಮುಖ ಅಧಿಕಾರಿಗಳನ್ನು ಎನ್ಎಂಪಿಎ ಬಂದರಿನ ಡೆಪ್ಯುಟಿ ಚೇರ್ಮನ್ ಕೆ.ಜಿ. ನಾಥ್, ಸೆಕ್ರಟರಿ ಜಿಜೋ ಥಾಮಸ್ ಗೌರವಿಸಿದರು. ಆಬಳಿಕ ಪ್ರವಾಸಿಗರಿಗೆಂದೇ ಮಂಗಳೂರಿನ ಸ್ಥಳೀಯ ಕಲಾವಿದರ ತಂಡದಿಂದ ಯಕ್ಷಗಾನ ಏರ್ಪಡಿಸಲಾಗಿತ್ತು.
ಮಂಗಳೂರಿನಲ್ಲಿ ಕಾರ್ಕಳ ಗೊಮ್ಮಟೇಶ್ವರ, ಮೂಡುಬಿದ್ರೆ ಸಾವಿರ ಕಂಬದ ಬಸದಿ, ಸೋನ್ಸ್ ಫಾರ್ಮ್, ಅಚಲ್ ಕ್ಯಾಶ್ಯು ಫ್ಯಾಕ್ಟರಿ, ಸೈಂಟ್ ಅಲೋಸಿಯಸ್ ಚರ್ಚ್, ಹಳೆ ಶೈಲಿಯ ಮನೆಗಳಿಗೆ ಪ್ರವಾಸಿಗರು ಭೇಟಿ ನೀಡಿದ್ದು, ಸಂಜೆಯ ವೇಳೆಗೆ ಹಡಗು ಕೊಚ್ಚಿ ಬಂದರಿನತ್ತ ತೆರಳಿತು.
Mangalore Cruise Ship Riviera arrives at NMPT Mangalore Port. A Total of 980 people including staffs and passengers have arrived.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm