ಬ್ರೇಕಿಂಗ್ ನ್ಯೂಸ್
10-01-24 07:19 pm Mangalore Correspondent ಕರಾವಳಿ
ಮಂಗಳೂರು, ಜ.10: ನವಮಂಗಳೂರು ಬಂದರಿಗೆ ಹೊಸ ವರ್ಷದ ಮೊದಲ ಕ್ರೂಸ್ ಹಡಗು ಆಗಮಿಸಿದೆ. ಎಂ.ಎಸ್. ರಿವೀರಿಯ ಹೆಸರಿನ ಕ್ರೂಸ್ ಹಡಗು ಬುಧವಾರ ಎನ್ಎಂಪಿಟಿ ಬಂದರಿಗೆ ಆಗಮಿಸಿದ್ದು, ಹಡಗಿನಲ್ಲಿ ಬಂದ ವಿದೇಶಿ ಪ್ರವಾಸಿಗರು ಮಂಗಳೂರು ಸುತ್ತಾಡಿದ್ದಾರೆ. ಈ ಸಾಲಿನ ಸೀಸನ್ನಲ್ಲಿ ಬಂದ ನಾಲ್ಕನೇ ಪ್ರವಾಸಿ ಹಡಗು ಇದಾಗಿದೆ.
ಹಡಗಿನಲ್ಲಿ ಸಿಬಂದಿ ಸೇರಿ ಒಟ್ಟು 980 ಪ್ರವಾಸಿಗರಿದ್ದರು. ದುಬೈ, ಮುಂಬೈ, ಮರ್ಮಗೋವಾ ಬಂದರಿನ ಮೂಲಕ ಮಂಗಳೂರಿಗೆ ಆಗಮಿಸಿದ್ದು, ಐಷಾರಾಮಿ ಹಡಗು 239 ಮೀಟರ್ ಉದ್ದವಾಗಿದೆ. 66,172 ಟನ್ ಭಾರ ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಹಡಗಿನಲ್ಲಿ ಬಂದ ಪ್ರವಾಸಿಗರಿಗೆ ಮಂಗಳೂರಿನ ಬಂದರಿಗೆ ಕಾಲಿಡುತ್ತಿದ್ದಂತೆ ಕರಾವಳಿಯ ಸಾಂಪ್ರದಾಯಿಕ ಕಲೆ ಯಕ್ಷಗಾನ ಮೂಲಕ ಸ್ವಾಗತ ನೀಡಲಾಯಿತು. ವಿವಿಧ ರೀತಿಯ ಸಾಂಸ್ಕೃತಿಕ ಕಲಾ ಪ್ರಕಾರಗಳನ್ನು ಏರ್ಪಡಿಸಲಾಗಿತ್ತು.





ಪ್ರವಾಸಿಗರನ್ನು ಮಂಗಳೂರು ಸುತ್ತಮುತ್ತ ಸುತ್ತಾಡಿಸಲು ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಆಯುಷ್ ಇಲಾಖೆಯಿಂದ ಮೆಡಿಟೇಶನ್ ಸೆಂಟರ್, ಎನ್ಎಂಪಿಟಿ ಬಂದರಿನಲ್ಲಿ ಫ್ರೀ ವೈಫೈ, ಯಕ್ಷಗಾನ ಕಲಾವಿದರ ಜೊತೆಗೆ ಫೋಟೋ ಕ್ಲಿಕ್ಕಿಸಲು ಸೆಲ್ಫಿ ಸ್ಟಾಂಡ್ ಒದಗಿಸಲಾಗಿತ್ತು. ಹಡಗಿನ ಪ್ರಮುಖ ಅಧಿಕಾರಿಗಳನ್ನು ಎನ್ಎಂಪಿಎ ಬಂದರಿನ ಡೆಪ್ಯುಟಿ ಚೇರ್ಮನ್ ಕೆ.ಜಿ. ನಾಥ್, ಸೆಕ್ರಟರಿ ಜಿಜೋ ಥಾಮಸ್ ಗೌರವಿಸಿದರು. ಆಬಳಿಕ ಪ್ರವಾಸಿಗರಿಗೆಂದೇ ಮಂಗಳೂರಿನ ಸ್ಥಳೀಯ ಕಲಾವಿದರ ತಂಡದಿಂದ ಯಕ್ಷಗಾನ ಏರ್ಪಡಿಸಲಾಗಿತ್ತು.
ಮಂಗಳೂರಿನಲ್ಲಿ ಕಾರ್ಕಳ ಗೊಮ್ಮಟೇಶ್ವರ, ಮೂಡುಬಿದ್ರೆ ಸಾವಿರ ಕಂಬದ ಬಸದಿ, ಸೋನ್ಸ್ ಫಾರ್ಮ್, ಅಚಲ್ ಕ್ಯಾಶ್ಯು ಫ್ಯಾಕ್ಟರಿ, ಸೈಂಟ್ ಅಲೋಸಿಯಸ್ ಚರ್ಚ್, ಹಳೆ ಶೈಲಿಯ ಮನೆಗಳಿಗೆ ಪ್ರವಾಸಿಗರು ಭೇಟಿ ನೀಡಿದ್ದು, ಸಂಜೆಯ ವೇಳೆಗೆ ಹಡಗು ಕೊಚ್ಚಿ ಬಂದರಿನತ್ತ ತೆರಳಿತು.
Mangalore Cruise Ship Riviera arrives at NMPT Mangalore Port. A Total of 980 people including staffs and passengers have arrived.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm