ಬ್ರೇಕಿಂಗ್ ನ್ಯೂಸ್
10-01-24 07:19 pm Mangalore Correspondent ಕರಾವಳಿ
ಮಂಗಳೂರು, ಜ.10: ನವಮಂಗಳೂರು ಬಂದರಿಗೆ ಹೊಸ ವರ್ಷದ ಮೊದಲ ಕ್ರೂಸ್ ಹಡಗು ಆಗಮಿಸಿದೆ. ಎಂ.ಎಸ್. ರಿವೀರಿಯ ಹೆಸರಿನ ಕ್ರೂಸ್ ಹಡಗು ಬುಧವಾರ ಎನ್ಎಂಪಿಟಿ ಬಂದರಿಗೆ ಆಗಮಿಸಿದ್ದು, ಹಡಗಿನಲ್ಲಿ ಬಂದ ವಿದೇಶಿ ಪ್ರವಾಸಿಗರು ಮಂಗಳೂರು ಸುತ್ತಾಡಿದ್ದಾರೆ. ಈ ಸಾಲಿನ ಸೀಸನ್ನಲ್ಲಿ ಬಂದ ನಾಲ್ಕನೇ ಪ್ರವಾಸಿ ಹಡಗು ಇದಾಗಿದೆ.
ಹಡಗಿನಲ್ಲಿ ಸಿಬಂದಿ ಸೇರಿ ಒಟ್ಟು 980 ಪ್ರವಾಸಿಗರಿದ್ದರು. ದುಬೈ, ಮುಂಬೈ, ಮರ್ಮಗೋವಾ ಬಂದರಿನ ಮೂಲಕ ಮಂಗಳೂರಿಗೆ ಆಗಮಿಸಿದ್ದು, ಐಷಾರಾಮಿ ಹಡಗು 239 ಮೀಟರ್ ಉದ್ದವಾಗಿದೆ. 66,172 ಟನ್ ಭಾರ ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಹಡಗಿನಲ್ಲಿ ಬಂದ ಪ್ರವಾಸಿಗರಿಗೆ ಮಂಗಳೂರಿನ ಬಂದರಿಗೆ ಕಾಲಿಡುತ್ತಿದ್ದಂತೆ ಕರಾವಳಿಯ ಸಾಂಪ್ರದಾಯಿಕ ಕಲೆ ಯಕ್ಷಗಾನ ಮೂಲಕ ಸ್ವಾಗತ ನೀಡಲಾಯಿತು. ವಿವಿಧ ರೀತಿಯ ಸಾಂಸ್ಕೃತಿಕ ಕಲಾ ಪ್ರಕಾರಗಳನ್ನು ಏರ್ಪಡಿಸಲಾಗಿತ್ತು.





ಪ್ರವಾಸಿಗರನ್ನು ಮಂಗಳೂರು ಸುತ್ತಮುತ್ತ ಸುತ್ತಾಡಿಸಲು ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಆಯುಷ್ ಇಲಾಖೆಯಿಂದ ಮೆಡಿಟೇಶನ್ ಸೆಂಟರ್, ಎನ್ಎಂಪಿಟಿ ಬಂದರಿನಲ್ಲಿ ಫ್ರೀ ವೈಫೈ, ಯಕ್ಷಗಾನ ಕಲಾವಿದರ ಜೊತೆಗೆ ಫೋಟೋ ಕ್ಲಿಕ್ಕಿಸಲು ಸೆಲ್ಫಿ ಸ್ಟಾಂಡ್ ಒದಗಿಸಲಾಗಿತ್ತು. ಹಡಗಿನ ಪ್ರಮುಖ ಅಧಿಕಾರಿಗಳನ್ನು ಎನ್ಎಂಪಿಎ ಬಂದರಿನ ಡೆಪ್ಯುಟಿ ಚೇರ್ಮನ್ ಕೆ.ಜಿ. ನಾಥ್, ಸೆಕ್ರಟರಿ ಜಿಜೋ ಥಾಮಸ್ ಗೌರವಿಸಿದರು. ಆಬಳಿಕ ಪ್ರವಾಸಿಗರಿಗೆಂದೇ ಮಂಗಳೂರಿನ ಸ್ಥಳೀಯ ಕಲಾವಿದರ ತಂಡದಿಂದ ಯಕ್ಷಗಾನ ಏರ್ಪಡಿಸಲಾಗಿತ್ತು.
ಮಂಗಳೂರಿನಲ್ಲಿ ಕಾರ್ಕಳ ಗೊಮ್ಮಟೇಶ್ವರ, ಮೂಡುಬಿದ್ರೆ ಸಾವಿರ ಕಂಬದ ಬಸದಿ, ಸೋನ್ಸ್ ಫಾರ್ಮ್, ಅಚಲ್ ಕ್ಯಾಶ್ಯು ಫ್ಯಾಕ್ಟರಿ, ಸೈಂಟ್ ಅಲೋಸಿಯಸ್ ಚರ್ಚ್, ಹಳೆ ಶೈಲಿಯ ಮನೆಗಳಿಗೆ ಪ್ರವಾಸಿಗರು ಭೇಟಿ ನೀಡಿದ್ದು, ಸಂಜೆಯ ವೇಳೆಗೆ ಹಡಗು ಕೊಚ್ಚಿ ಬಂದರಿನತ್ತ ತೆರಳಿತು.
Mangalore Cruise Ship Riviera arrives at NMPT Mangalore Port. A Total of 980 people including staffs and passengers have arrived.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm