ಬ್ರೇಕಿಂಗ್ ನ್ಯೂಸ್
10-01-24 07:19 pm Mangalore Correspondent ಕರಾವಳಿ
ಮಂಗಳೂರು, ಜ.10: ನವಮಂಗಳೂರು ಬಂದರಿಗೆ ಹೊಸ ವರ್ಷದ ಮೊದಲ ಕ್ರೂಸ್ ಹಡಗು ಆಗಮಿಸಿದೆ. ಎಂ.ಎಸ್. ರಿವೀರಿಯ ಹೆಸರಿನ ಕ್ರೂಸ್ ಹಡಗು ಬುಧವಾರ ಎನ್ಎಂಪಿಟಿ ಬಂದರಿಗೆ ಆಗಮಿಸಿದ್ದು, ಹಡಗಿನಲ್ಲಿ ಬಂದ ವಿದೇಶಿ ಪ್ರವಾಸಿಗರು ಮಂಗಳೂರು ಸುತ್ತಾಡಿದ್ದಾರೆ. ಈ ಸಾಲಿನ ಸೀಸನ್ನಲ್ಲಿ ಬಂದ ನಾಲ್ಕನೇ ಪ್ರವಾಸಿ ಹಡಗು ಇದಾಗಿದೆ.
ಹಡಗಿನಲ್ಲಿ ಸಿಬಂದಿ ಸೇರಿ ಒಟ್ಟು 980 ಪ್ರವಾಸಿಗರಿದ್ದರು. ದುಬೈ, ಮುಂಬೈ, ಮರ್ಮಗೋವಾ ಬಂದರಿನ ಮೂಲಕ ಮಂಗಳೂರಿಗೆ ಆಗಮಿಸಿದ್ದು, ಐಷಾರಾಮಿ ಹಡಗು 239 ಮೀಟರ್ ಉದ್ದವಾಗಿದೆ. 66,172 ಟನ್ ಭಾರ ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಹಡಗಿನಲ್ಲಿ ಬಂದ ಪ್ರವಾಸಿಗರಿಗೆ ಮಂಗಳೂರಿನ ಬಂದರಿಗೆ ಕಾಲಿಡುತ್ತಿದ್ದಂತೆ ಕರಾವಳಿಯ ಸಾಂಪ್ರದಾಯಿಕ ಕಲೆ ಯಕ್ಷಗಾನ ಮೂಲಕ ಸ್ವಾಗತ ನೀಡಲಾಯಿತು. ವಿವಿಧ ರೀತಿಯ ಸಾಂಸ್ಕೃತಿಕ ಕಲಾ ಪ್ರಕಾರಗಳನ್ನು ಏರ್ಪಡಿಸಲಾಗಿತ್ತು.





ಪ್ರವಾಸಿಗರನ್ನು ಮಂಗಳೂರು ಸುತ್ತಮುತ್ತ ಸುತ್ತಾಡಿಸಲು ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಆಯುಷ್ ಇಲಾಖೆಯಿಂದ ಮೆಡಿಟೇಶನ್ ಸೆಂಟರ್, ಎನ್ಎಂಪಿಟಿ ಬಂದರಿನಲ್ಲಿ ಫ್ರೀ ವೈಫೈ, ಯಕ್ಷಗಾನ ಕಲಾವಿದರ ಜೊತೆಗೆ ಫೋಟೋ ಕ್ಲಿಕ್ಕಿಸಲು ಸೆಲ್ಫಿ ಸ್ಟಾಂಡ್ ಒದಗಿಸಲಾಗಿತ್ತು. ಹಡಗಿನ ಪ್ರಮುಖ ಅಧಿಕಾರಿಗಳನ್ನು ಎನ್ಎಂಪಿಎ ಬಂದರಿನ ಡೆಪ್ಯುಟಿ ಚೇರ್ಮನ್ ಕೆ.ಜಿ. ನಾಥ್, ಸೆಕ್ರಟರಿ ಜಿಜೋ ಥಾಮಸ್ ಗೌರವಿಸಿದರು. ಆಬಳಿಕ ಪ್ರವಾಸಿಗರಿಗೆಂದೇ ಮಂಗಳೂರಿನ ಸ್ಥಳೀಯ ಕಲಾವಿದರ ತಂಡದಿಂದ ಯಕ್ಷಗಾನ ಏರ್ಪಡಿಸಲಾಗಿತ್ತು.
ಮಂಗಳೂರಿನಲ್ಲಿ ಕಾರ್ಕಳ ಗೊಮ್ಮಟೇಶ್ವರ, ಮೂಡುಬಿದ್ರೆ ಸಾವಿರ ಕಂಬದ ಬಸದಿ, ಸೋನ್ಸ್ ಫಾರ್ಮ್, ಅಚಲ್ ಕ್ಯಾಶ್ಯು ಫ್ಯಾಕ್ಟರಿ, ಸೈಂಟ್ ಅಲೋಸಿಯಸ್ ಚರ್ಚ್, ಹಳೆ ಶೈಲಿಯ ಮನೆಗಳಿಗೆ ಪ್ರವಾಸಿಗರು ಭೇಟಿ ನೀಡಿದ್ದು, ಸಂಜೆಯ ವೇಳೆಗೆ ಹಡಗು ಕೊಚ್ಚಿ ಬಂದರಿನತ್ತ ತೆರಳಿತು.
Mangalore Cruise Ship Riviera arrives at NMPT Mangalore Port. A Total of 980 people including staffs and passengers have arrived.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm