ಬ್ರೇಕಿಂಗ್ ನ್ಯೂಸ್
12-01-24 11:27 pm Mangalore Correspondent ಕರಾವಳಿ
ಮಂಗಳೂರು, ಜ.13 : ತಮ್ಮ ಮೇಲೆ ಮಾಹಿತಿ ಆಯೋಗ ದಂಡ ವಿಧಿಸಿದ ಪ್ರಕರಣವನ್ನು ರಾಜ್ಯ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿ ಪ್ರಶ್ನಿಸಿದ್ದ ವಾರ್ತಾಧಿಕಾರಿ ರೋಹಿಣಿ ಕೆ ಅವರಿಗೆ ರಾಜ್ಯ ಹೈಕೋರ್ಟ್ ದಂಡ ವಿಧಿಸುವ ಮೂಲಕ ಮಹತ್ವದ ತೀರ್ಪು ನೀಡಿದೆ.
2013ರಲ್ಲಿ ರೋಹಿಣಿ ಕೆ. ಅವರು ದ.ಕ. ಜಿಲ್ಲಾ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾಗಿದ್ದಾಗ ಪತ್ರಕರ್ತ ಇಕ್ಬಾಲ್ ಕುತ್ತಾರ್ ಅವರು ಇಲಾಖೆಯು ಏರ್ಪಡಿಸಿದ್ದ ಜಿಲ್ಲಾ ವ್ಯಾಪ್ತಿಯ ಪ್ರೌಢಶಾಲಾ ಗಿರಿಜನ ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದ ಖರ್ಚು ವೆಚ್ಚಗಳ ವಿವರ ಕೋರಿ ಅರ್ಜಿ ಸಲ್ಲಿಸಿದ್ದರು. ಸದ್ರಿ ಅರ್ಜಿಗೆ ಮಾಹಿತಿ ನೀಡದೆ ನಿರಾಕರಿಸಿದ್ದ ವಾರ್ತಾಧಿಕಾರಿ ರೋಹಿಣಿ ವಿರುದ್ಧ ಇಕ್ಬಾಲ್ ಕುತ್ತಾರ್ ರಾಜ್ಯ ಮಾಹಿತಿ ಆಯೋಗದಲ್ಲಿ ದೂರು ಸಲ್ಲಿಸಿದಾಗ, ತನಿಖೆ ನಡೆಸಿದ ಆಯೋಗ ಮಾಹಿತಿ ನಿರಾಕರಿಸಿರುವುದು ಸರಿಯಲ್ಲವೆಂದು ರೋಹಿಣಿ ಅವರಿಗೆ ಎರಡು ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿತ್ತು.
ಆದರೆ, ಮಾಹಿತಿ ಆಯೋಗದ ಈ ಆದೇಶವನ್ನು ಸಂವಿಧಾನದ ಕಲಂ 226 ಮತ್ತು 227ರ ಪ್ರಕಾರ ರದ್ದುಪಡಿಸುವಂತೆ ರೋಹಿಣಿ ಅವರು ರಾಜ್ಯ ಹೈಕೋರ್ಟ್ ಮೆಟ್ಟಿಲೇರಿ 2015ಕ್ಕೆ ರಿಟ್ ಅರ್ಜಿ ದಾಖಲಿಸಿದ್ದರು. ಪ್ರಕರಣದಲ್ಲಿ ರಾಜ್ಯ ಮಾಹಿತಿ ಆಯೋಗ ಹಾಗೂ ಇಕ್ಬಾಲ್ ಕುತ್ತಾರ್ ಅವರನ್ನು ಪ್ರತಿವಾದಿಗಳನ್ನಾಗಿಸಿದ್ದರು.
ಕಳೆದ ಎಂಟು ವರ್ಷಗಳಿಂದ ಫಿರ್ಯಾದುದಾರರು ಹಾಗೂ ಪ್ರತಿವಾದಿಗಳ ವಾದಗಳನ್ನು ಆಲಿಸಿದ ರಾಜ್ಯ ಹೈಕೋರ್ಟ್ ತೀರ್ಪು ನೀಡಿದೆ, ಪ್ರಕರಣದಲ್ಲಿ ಫಿರ್ಯಾದುದಾರರ ಅರ್ಹತೆಯ ಕೊರತೆಯಿದ್ದು, ರಾಜ್ಯ ಮಾಹಿತಿ ಆಯೋಗದ ಆದೇಶ ರದ್ದುಪಡಿಸಲು ಯೋಗ್ಯವಲ್ಲವೆಂದು ಮನಗಂಡಿದೆ. ಅಲ್ಲದೆ ವಾರ್ತಾಧಿಕಾರಿ ರೋಹಿಣಿ ಅವರ ರಿಟ್ ಅರ್ಜಿಯನ್ನು ವಜಾಗೊಳಿಸಿ, ಪ್ರಕರಣದಲ್ಲಿ ಮಾಹಿತಿ ನಿರಾಕರಿಸಲ್ಪಟ್ಟು ಆಯೋಗಕ್ಕೆ ದೂರು ಸಲ್ಲಿಸಿ ದಂಡನೆ ವಿಧಿಸಲು ಕಾರಣರಾದ ಇಕ್ಬಾಲ್ ಕುತ್ತಾರ್ ಅವರಿಗೆ ರೋಹಿಣಿ ಅವರು ಒಂದು ತಿಂಗಳೊಳಗಾಗಿ 25 ಸಾವಿರ ರೂ. ಜುಲ್ಮಾನೆ ನೀಡುವಂತೆ ನ್ಯಾಯಮೂರ್ತಿ ಆರ್. ನಟರಾಜ್ ತೀರ್ಪು ನೀಡಿದ್ದಾರೆ.
The Karnataka High Court has imposed a fine on Information Officer Rohini K for filing a writ petition in the State High Court challenging the imposition of penalty on her by the Information Commission.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm