ಬ್ರೇಕಿಂಗ್ ನ್ಯೂಸ್
12-01-24 11:27 pm Mangalore Correspondent ಕರಾವಳಿ
ಮಂಗಳೂರು, ಜ.13 : ತಮ್ಮ ಮೇಲೆ ಮಾಹಿತಿ ಆಯೋಗ ದಂಡ ವಿಧಿಸಿದ ಪ್ರಕರಣವನ್ನು ರಾಜ್ಯ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿ ಪ್ರಶ್ನಿಸಿದ್ದ ವಾರ್ತಾಧಿಕಾರಿ ರೋಹಿಣಿ ಕೆ ಅವರಿಗೆ ರಾಜ್ಯ ಹೈಕೋರ್ಟ್ ದಂಡ ವಿಧಿಸುವ ಮೂಲಕ ಮಹತ್ವದ ತೀರ್ಪು ನೀಡಿದೆ.
2013ರಲ್ಲಿ ರೋಹಿಣಿ ಕೆ. ಅವರು ದ.ಕ. ಜಿಲ್ಲಾ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾಗಿದ್ದಾಗ ಪತ್ರಕರ್ತ ಇಕ್ಬಾಲ್ ಕುತ್ತಾರ್ ಅವರು ಇಲಾಖೆಯು ಏರ್ಪಡಿಸಿದ್ದ ಜಿಲ್ಲಾ ವ್ಯಾಪ್ತಿಯ ಪ್ರೌಢಶಾಲಾ ಗಿರಿಜನ ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದ ಖರ್ಚು ವೆಚ್ಚಗಳ ವಿವರ ಕೋರಿ ಅರ್ಜಿ ಸಲ್ಲಿಸಿದ್ದರು. ಸದ್ರಿ ಅರ್ಜಿಗೆ ಮಾಹಿತಿ ನೀಡದೆ ನಿರಾಕರಿಸಿದ್ದ ವಾರ್ತಾಧಿಕಾರಿ ರೋಹಿಣಿ ವಿರುದ್ಧ ಇಕ್ಬಾಲ್ ಕುತ್ತಾರ್ ರಾಜ್ಯ ಮಾಹಿತಿ ಆಯೋಗದಲ್ಲಿ ದೂರು ಸಲ್ಲಿಸಿದಾಗ, ತನಿಖೆ ನಡೆಸಿದ ಆಯೋಗ ಮಾಹಿತಿ ನಿರಾಕರಿಸಿರುವುದು ಸರಿಯಲ್ಲವೆಂದು ರೋಹಿಣಿ ಅವರಿಗೆ ಎರಡು ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿತ್ತು.
ಆದರೆ, ಮಾಹಿತಿ ಆಯೋಗದ ಈ ಆದೇಶವನ್ನು ಸಂವಿಧಾನದ ಕಲಂ 226 ಮತ್ತು 227ರ ಪ್ರಕಾರ ರದ್ದುಪಡಿಸುವಂತೆ ರೋಹಿಣಿ ಅವರು ರಾಜ್ಯ ಹೈಕೋರ್ಟ್ ಮೆಟ್ಟಿಲೇರಿ 2015ಕ್ಕೆ ರಿಟ್ ಅರ್ಜಿ ದಾಖಲಿಸಿದ್ದರು. ಪ್ರಕರಣದಲ್ಲಿ ರಾಜ್ಯ ಮಾಹಿತಿ ಆಯೋಗ ಹಾಗೂ ಇಕ್ಬಾಲ್ ಕುತ್ತಾರ್ ಅವರನ್ನು ಪ್ರತಿವಾದಿಗಳನ್ನಾಗಿಸಿದ್ದರು.
ಕಳೆದ ಎಂಟು ವರ್ಷಗಳಿಂದ ಫಿರ್ಯಾದುದಾರರು ಹಾಗೂ ಪ್ರತಿವಾದಿಗಳ ವಾದಗಳನ್ನು ಆಲಿಸಿದ ರಾಜ್ಯ ಹೈಕೋರ್ಟ್ ತೀರ್ಪು ನೀಡಿದೆ, ಪ್ರಕರಣದಲ್ಲಿ ಫಿರ್ಯಾದುದಾರರ ಅರ್ಹತೆಯ ಕೊರತೆಯಿದ್ದು, ರಾಜ್ಯ ಮಾಹಿತಿ ಆಯೋಗದ ಆದೇಶ ರದ್ದುಪಡಿಸಲು ಯೋಗ್ಯವಲ್ಲವೆಂದು ಮನಗಂಡಿದೆ. ಅಲ್ಲದೆ ವಾರ್ತಾಧಿಕಾರಿ ರೋಹಿಣಿ ಅವರ ರಿಟ್ ಅರ್ಜಿಯನ್ನು ವಜಾಗೊಳಿಸಿ, ಪ್ರಕರಣದಲ್ಲಿ ಮಾಹಿತಿ ನಿರಾಕರಿಸಲ್ಪಟ್ಟು ಆಯೋಗಕ್ಕೆ ದೂರು ಸಲ್ಲಿಸಿ ದಂಡನೆ ವಿಧಿಸಲು ಕಾರಣರಾದ ಇಕ್ಬಾಲ್ ಕುತ್ತಾರ್ ಅವರಿಗೆ ರೋಹಿಣಿ ಅವರು ಒಂದು ತಿಂಗಳೊಳಗಾಗಿ 25 ಸಾವಿರ ರೂ. ಜುಲ್ಮಾನೆ ನೀಡುವಂತೆ ನ್ಯಾಯಮೂರ್ತಿ ಆರ್. ನಟರಾಜ್ ತೀರ್ಪು ನೀಡಿದ್ದಾರೆ.
The Karnataka High Court has imposed a fine on Information Officer Rohini K for filing a writ petition in the State High Court challenging the imposition of penalty on her by the Information Commission.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm