ಬ್ರೇಕಿಂಗ್ ನ್ಯೂಸ್
13-01-24 08:46 pm Mangalore Correspondent ಕರಾವಳಿ
ಮಂಗಳೂರು, ಜ.13: ಮಂಗಳೂರು ವಿಶ್ವವಿದ್ಯಾನಿಲಯವು ಮಂಗಳಗಂಗೋತ್ರಿಯ ಕೊಣಾಜೆ ಕ್ಯಾಂಪಸ್ಸಿನಲ್ಲಿ ಈ ಸಾಲಿನ ಪದವಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಡೆಸಲು ಮುಂದಾಗಿದೆ. ಮೌಲ್ಯಮಾಪನ ನಡೆಸುವ ಅಧ್ಯಾಪಕರು ತಮಗೆ ಸಮಯ ಸಿಕ್ಕಾಗ ಕೊಣಾಜೆಗೆ ಬಂದು ಮೌಲ್ಯಮಾಪನ ಕಾರ್ಯ ಕೈಗೊಳ್ಳಬೇಕು ಎಂದು ಹೇಳಿರುವುದು ಗಮನಕ್ಕೆ ಬಂದಿದೆ. ಮೌಲ್ಯಮಾಪನ ಕಾರ್ಯವನ್ನು ಈ ರೀತಿ ಮಾಡುವುದರಿಂದ ಅಧ್ಯಾಪಕರಿಗೆ ದೊಡ್ಡ ಸಮಸ್ಯೆ ಆಗಲಿದೆ. ಹಾಗಾಗಿ ಮಂಗಳೂರು ನಗರ ವ್ಯಾಪ್ತಿಯ ಕಾಲೇಜಿನಲ್ಲಿಯೇ ಮೌಲ್ಯಮಾಪನ ಕಾರ್ಯವನ್ನು ಕೈಗೊಳ್ಳಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೆಟ್ ಸದಸ್ಯ ಎಸ್.ಆರ್ ಹರೀಶ್ ಆಚಾರ್ಯ ಒತ್ತಾಯಿಸಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯವು ಪದವಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯದಲ್ಲಿ ಈವರೆಗೂ ನಿಯಮ ತಪ್ಪಿರಲಿಲ್ಲ. ಪರೀಕ್ಷಾ ಮಂಡಳಿಯ ಅಧ್ಯಕ್ಷರ ಕಡ್ಡಾಯ ಉಪಸ್ಥಿತಿಯಲ್ಲಿ ಹಾಗೂ ವಿಷಯವಾರು ಮುಖ್ಯಸ್ಥರು ಮತ್ತು ಉಪ ಮುಖ್ಯಸ್ಥರ ನೇರ ಉಸ್ತುವಾರಿಯಲ್ಲಿ ನಡೆಯಬೇಕು ಎಂಬುದು ಮೌಲ್ಯಮಾಪನ ನೀತಿ. ಅಲ್ಲದೆ ಈ ಮೌಲ್ಯಮಾಪನ ಕಾರ್ಯವು ಪಾರದರ್ಶಕ ಆಗಿರಬೇಕು. ಅಧ್ಯಾಪಕರು ತಮ್ಮ ಸಮಯದಲ್ಲಿ ಬಂದು
ಮೌಲ್ಯಮಾಪನ ಕಾರ್ಯ ನಡೆಸುವಂತೆ ಹೇಳಿದರೆ ಈ ನಿಯಮ ಪಾಲನೆ ಹೇಗೆ ಸಾಧ್ಯ? ಪರೀಕ್ಷೆ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಮಹತ್ತರ ಜವಾಬ್ದಾರಿ ಹೊಂದಿರುವಂಥದ್ದು. ಆದರೆ ತಮ್ಮ ಮೂಗಿನ ನೇರಕ್ಕೆ ಮೌಲ್ಯಮಾಪನ ನೀತಿಯನ್ನು ಬದಲಾಯಿಸುವುದರಿಂದ ವಿಶ್ವವಿದ್ಯಾನಿಲಯದ ಮಹತ್ವ ಮತ್ತು ಘನತೆಗೆ ಕುಂದುಂಟಾಗುತ್ತದೆ ಎಂದು ಎಸ್.ಆರ್ ಹರೀಶ್ ಆಚಾರ್ಯ ಹೇಳಿದ್ದಾರೆ.
ಪರೀಕ್ಷಾ ಮೌಲ್ಯಮಾಪನ ನಿಯಮಗಳ ಪ್ರಕಾರ ಪರೀಕ್ಷಾ ಮಂಡಳಿಯ ಅಧ್ಯಕ್ಷರ ಉಪಸ್ಥಿತಿಯಲ್ಲೇ ವಿಷಯವಾರು ಮುಖ್ಯಸ್ಥರು ಮತ್ತು ಉಪ ಮುಖ್ಯಸ್ಥರ ನೇರ ಹೊಣೆಗಾರಿಕೆಯ ನಿಯಂತ್ರಣದಲ್ಲಿ ಮೌಲ್ಯಮಾಪನ ಕಾರ್ಯವನ್ನು ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಮೌಲ್ಯಮಾಪನವನ್ನು ವಿವಿಯ ಕೊಣಾಜೆ ಕ್ಯಾಂಪಸ್ ಕೇಂದ್ರೀಕೃತವಾಗಿ ನಡೆಸಿದರೆ ಆರ್ಥಿಕವಾಗಿ ಮತ್ತು ಪ್ರಾಯೋಗಿಕವಾಗಿ ಸಾಧುವಲ್ಲ. ದೂರದ ಪ್ರದೇಶಗಳಿಂದ ಬರುವ ಅಧ್ಯಾಪಕರು ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಮಂಗಳೂರು ನಗರ ಹೊರಭಾಗದ ಕೊಣಾಜೆಗೆ ಬಂದು ಮೌಲ್ಯಮಾಪನ ನಡೆಸುವುದು ಅನವಶ್ಯಕ ತೊಂದರೆ ಉಂಟು ಮಾಡಿದಂತೆ. ಇದು ವಿಶ್ವವಿದ್ಯಾನಿಲಯಕ್ಕೆ ಪ್ರಯಾಣ ಭತ್ಯೆ ಮತ್ತು ದಿನಭತ್ಯೆ ರೂಪದಲ್ಲಿ ಆರ್ಥಿಕ ಹೊರೆಯನ್ನೂ ಉಂಟು ಮಾಡುತ್ತದೆ. ತಕ್ಷಣವೇ ಮಂಗಳೂರು ವಿವಿಯು ಉದ್ದೇಶಿತ ಪ್ರಸ್ತಾಪ ಕೈಬಿಟ್ಟು ಮಂಗಳೂರು ನಗರದ ಯಾವುದಾದರೂ ಕಾಲೇಜಿನಲ್ಲಿ ಈ ಸಾಲಿನ ಪದವಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೈಗೊಳ್ಳಬೇಕೆಂದು ಹರೀಶ್ ಆಚಾರ್ಯ ಮಂಗಳೂರು ವಿಶ್ವವಿದ್ಯಾನಿಲಯದ ಆಡಳಿತವನ್ನು ಒತ್ತಾಯಿಸಿದ್ದಾರೆ.
Evaluation of degree examination; Lecturers asked to work at Konaje campus, object to violation of rules, demand drop of proposal
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm