ಬ್ರೇಕಿಂಗ್ ನ್ಯೂಸ್
13-01-24 08:46 pm Mangalore Correspondent ಕರಾವಳಿ
ಮಂಗಳೂರು, ಜ.13: ಮಂಗಳೂರು ವಿಶ್ವವಿದ್ಯಾನಿಲಯವು ಮಂಗಳಗಂಗೋತ್ರಿಯ ಕೊಣಾಜೆ ಕ್ಯಾಂಪಸ್ಸಿನಲ್ಲಿ ಈ ಸಾಲಿನ ಪದವಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಡೆಸಲು ಮುಂದಾಗಿದೆ. ಮೌಲ್ಯಮಾಪನ ನಡೆಸುವ ಅಧ್ಯಾಪಕರು ತಮಗೆ ಸಮಯ ಸಿಕ್ಕಾಗ ಕೊಣಾಜೆಗೆ ಬಂದು ಮೌಲ್ಯಮಾಪನ ಕಾರ್ಯ ಕೈಗೊಳ್ಳಬೇಕು ಎಂದು ಹೇಳಿರುವುದು ಗಮನಕ್ಕೆ ಬಂದಿದೆ. ಮೌಲ್ಯಮಾಪನ ಕಾರ್ಯವನ್ನು ಈ ರೀತಿ ಮಾಡುವುದರಿಂದ ಅಧ್ಯಾಪಕರಿಗೆ ದೊಡ್ಡ ಸಮಸ್ಯೆ ಆಗಲಿದೆ. ಹಾಗಾಗಿ ಮಂಗಳೂರು ನಗರ ವ್ಯಾಪ್ತಿಯ ಕಾಲೇಜಿನಲ್ಲಿಯೇ ಮೌಲ್ಯಮಾಪನ ಕಾರ್ಯವನ್ನು ಕೈಗೊಳ್ಳಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೆಟ್ ಸದಸ್ಯ ಎಸ್.ಆರ್ ಹರೀಶ್ ಆಚಾರ್ಯ ಒತ್ತಾಯಿಸಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯವು ಪದವಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯದಲ್ಲಿ ಈವರೆಗೂ ನಿಯಮ ತಪ್ಪಿರಲಿಲ್ಲ. ಪರೀಕ್ಷಾ ಮಂಡಳಿಯ ಅಧ್ಯಕ್ಷರ ಕಡ್ಡಾಯ ಉಪಸ್ಥಿತಿಯಲ್ಲಿ ಹಾಗೂ ವಿಷಯವಾರು ಮುಖ್ಯಸ್ಥರು ಮತ್ತು ಉಪ ಮುಖ್ಯಸ್ಥರ ನೇರ ಉಸ್ತುವಾರಿಯಲ್ಲಿ ನಡೆಯಬೇಕು ಎಂಬುದು ಮೌಲ್ಯಮಾಪನ ನೀತಿ. ಅಲ್ಲದೆ ಈ ಮೌಲ್ಯಮಾಪನ ಕಾರ್ಯವು ಪಾರದರ್ಶಕ ಆಗಿರಬೇಕು. ಅಧ್ಯಾಪಕರು ತಮ್ಮ ಸಮಯದಲ್ಲಿ ಬಂದು
ಮೌಲ್ಯಮಾಪನ ಕಾರ್ಯ ನಡೆಸುವಂತೆ ಹೇಳಿದರೆ ಈ ನಿಯಮ ಪಾಲನೆ ಹೇಗೆ ಸಾಧ್ಯ? ಪರೀಕ್ಷೆ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಮಹತ್ತರ ಜವಾಬ್ದಾರಿ ಹೊಂದಿರುವಂಥದ್ದು. ಆದರೆ ತಮ್ಮ ಮೂಗಿನ ನೇರಕ್ಕೆ ಮೌಲ್ಯಮಾಪನ ನೀತಿಯನ್ನು ಬದಲಾಯಿಸುವುದರಿಂದ ವಿಶ್ವವಿದ್ಯಾನಿಲಯದ ಮಹತ್ವ ಮತ್ತು ಘನತೆಗೆ ಕುಂದುಂಟಾಗುತ್ತದೆ ಎಂದು ಎಸ್.ಆರ್ ಹರೀಶ್ ಆಚಾರ್ಯ ಹೇಳಿದ್ದಾರೆ.
ಪರೀಕ್ಷಾ ಮೌಲ್ಯಮಾಪನ ನಿಯಮಗಳ ಪ್ರಕಾರ ಪರೀಕ್ಷಾ ಮಂಡಳಿಯ ಅಧ್ಯಕ್ಷರ ಉಪಸ್ಥಿತಿಯಲ್ಲೇ ವಿಷಯವಾರು ಮುಖ್ಯಸ್ಥರು ಮತ್ತು ಉಪ ಮುಖ್ಯಸ್ಥರ ನೇರ ಹೊಣೆಗಾರಿಕೆಯ ನಿಯಂತ್ರಣದಲ್ಲಿ ಮೌಲ್ಯಮಾಪನ ಕಾರ್ಯವನ್ನು ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಮೌಲ್ಯಮಾಪನವನ್ನು ವಿವಿಯ ಕೊಣಾಜೆ ಕ್ಯಾಂಪಸ್ ಕೇಂದ್ರೀಕೃತವಾಗಿ ನಡೆಸಿದರೆ ಆರ್ಥಿಕವಾಗಿ ಮತ್ತು ಪ್ರಾಯೋಗಿಕವಾಗಿ ಸಾಧುವಲ್ಲ. ದೂರದ ಪ್ರದೇಶಗಳಿಂದ ಬರುವ ಅಧ್ಯಾಪಕರು ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಮಂಗಳೂರು ನಗರ ಹೊರಭಾಗದ ಕೊಣಾಜೆಗೆ ಬಂದು ಮೌಲ್ಯಮಾಪನ ನಡೆಸುವುದು ಅನವಶ್ಯಕ ತೊಂದರೆ ಉಂಟು ಮಾಡಿದಂತೆ. ಇದು ವಿಶ್ವವಿದ್ಯಾನಿಲಯಕ್ಕೆ ಪ್ರಯಾಣ ಭತ್ಯೆ ಮತ್ತು ದಿನಭತ್ಯೆ ರೂಪದಲ್ಲಿ ಆರ್ಥಿಕ ಹೊರೆಯನ್ನೂ ಉಂಟು ಮಾಡುತ್ತದೆ. ತಕ್ಷಣವೇ ಮಂಗಳೂರು ವಿವಿಯು ಉದ್ದೇಶಿತ ಪ್ರಸ್ತಾಪ ಕೈಬಿಟ್ಟು ಮಂಗಳೂರು ನಗರದ ಯಾವುದಾದರೂ ಕಾಲೇಜಿನಲ್ಲಿ ಈ ಸಾಲಿನ ಪದವಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೈಗೊಳ್ಳಬೇಕೆಂದು ಹರೀಶ್ ಆಚಾರ್ಯ ಮಂಗಳೂರು ವಿಶ್ವವಿದ್ಯಾನಿಲಯದ ಆಡಳಿತವನ್ನು ಒತ್ತಾಯಿಸಿದ್ದಾರೆ.
Evaluation of degree examination; Lecturers asked to work at Konaje campus, object to violation of rules, demand drop of proposal
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm