ಬ್ರೇಕಿಂಗ್ ನ್ಯೂಸ್
14-01-24 08:58 pm Mangalore Correspondent ಕರಾವಳಿ
ಮಂಗಳೂರು, ಜ.14: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ರಸ್ತೆ ದಾಟುತ್ತಿದ್ದಾಗ ಅಪರಿಚಿತ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ಬಜ್ಪೆ ಠಾಣೆ ವ್ಯಾಪ್ತಿಯ ತೆಂಕ ಎಡಪದವಿನಲ್ಲಿ ನಡೆದಿದೆ.
ಶಾಸಕ ರಾಜೇಶ್ ನಾಯ್ಕ್ ಅವರು ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಮಧ್ಯಾಹ್ನ ತೆಂಕ ಎಡಪದವು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆಗೆ ತೆರಳಿದ್ದು ಮಧ್ಯಾಹ್ನ 1.30ರ ಸುಮಾರಿಗೆ ಪೂಜೆ ಮುಗಿಸಿ ರಸ್ತೆ ದಾಟಲು ನಿಂತಿದ್ದಾಗ ಎದುರಿನಿಂದ ಬಂದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ.

ಮೂಡುಬಿದ್ರೆಯಿಂದ ಮಂಗಳೂರು ಸಾಗುತ್ತಿದ್ದ ಸ್ವಿಫ್ಟ್ ಕಾರು ಚಾಲಕ ಶಾಸಕರಿಗೆ ಡಿಕ್ಕಿಯಾದರೂ ನಿಲ್ಲಿಸದೆ ಎಸ್ಕೇಪ್ ಆಗಿದ್ದಾನೆ. ಸ್ಥಳೀಯರು ಕೂಡಲೇ ಗಾಡಿ ನಂಬರ್ ನೋಟ್ ಮಾಡಿ ಬಜ್ಪೆ ಪೊಲೀಸರಿಗೆ ತಿಳಿಸಿದ್ದರು. ನಿಲ್ಲಿಸದೆ ಪರಾರಿಯಾದ ಕಾರನ್ನು ಬಳಿಕ ಗುರುಪುರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಿಟ್ ಅಂಡ್ ರನ್ ಮಾಡಿದ ಆರೋಪಿ ಮೊಹಮ್ಮದ್ ಸುಫೈಲನ್ನು ಪೊಲೀಸರು ಬಂಧಿಸಿದ್ದಾರೆ.
ಶಾಸಕ ರಾಜೇಶ್ ನಾಯ್ಕ್ ಅವರ ಎರಡೂ ಕಾಲಿಗೆ ಗಾಯಗೊಂಡಿದ್ದು, ಮಂಗಳೂರಿನ ಎಜೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದ್ದಾರೆ. ಘಟನೆ ಬಗ್ಗೆ ಬಜ್ಪೆ ಠಾಣೆಯಲ್ಲಿ ಶಾಸಕರ ಪಿಎ ಪವನ್ ಕುಮಾರ್ ಶೆಟ್ಟಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಕಾರು ಚಾಲಕ ರೈಲ್ವೇ ನಿಲ್ದಾಣಕ್ಕೆಂದು ವೇಗವಾಗಿ ಬರುತ್ತಿದ್ದ. ತೆಂಕ ಎಡಪದವಿನಲ್ಲಿ ಒಂದು ಕಡೆ ಲಾರಿ ಇದ್ದುದರಿಂದ ಅದನ್ನು ಓವರ್ ಟೇಕ್ ಮಾಡಿ ಬರುವಾಗ ಶಾಸಕರ ಮೇಲೆ ಡಿಕ್ಕಿಯಾಗಿದ್ದಾನೆ. ಸ್ಥಳದಲ್ಲಿ ಜನರು ಇದ್ದುದರಿಂದ ನಿಲ್ಲಿಸದೆ ಪರಾರಿಯಾಗಿದ್ದ. ಲುಂಗಿ ಉಟ್ಟಿದ್ದ ಶಾಸಕರು ಕಾರಿನ ಹೊಡೆತಕ್ಕೆ ಸಿಲುಕಿದ್ದರು. ಆದರೆ ಅದೃಷ್ಟದಿಂದ ಯಾವುದೇ ಅಪಾಯ ಇಲ್ಲದೆ ಪಾರಾಗಿದ್ದಾರೆ ಎಂದು ಪವನ್ ಕುಮಾರ್ ತಿಳಿಸಿದ್ದಾರೆ.
Bantwal MLA Rajesh Naik has escaped a near fatal road accident in Bajpe police station limits on Sunday, January 14, in the afternoon. The legislator has suffered injuries in both of his knees and is undergoing treatment.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm