ಬ್ರೇಕಿಂಗ್ ನ್ಯೂಸ್
14-01-24 10:46 pm Mangalore Correspondent ಕರಾವಳಿ
ಮಂಗಳೂರು, ಜ.15: ಬೈಕಂಪಾಡಿ ಕೈಗಾರಿಕಾ ಸಂಕೀರ್ಣದಲ್ಲಿ ಕೆಮಿಕಲ್ ಕಾರ್ಖಾನೆಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಸುಟ್ಟ ಗಾಯಗಳಿಂದ ಮೃತಪಟ್ಟ ಘಟನೆ ನಡೆದಿದೆ.
ಜೋನ್ಸ್ ಪೆಟ್ರೋ ಕೆಮಿಕಲ್ ಪ್ರೈವೇಟ್ ಲಿಮಿಟೆಡ್ ಎಂಬ ಕಾರ್ಖಾನೆಯಲ್ಲಿ ಶನಿವಾರ ಸಂಜೆ ನಾಲ್ಕು ಗಂಟೆ ವೇಳೆಗೆ ಬೆಂಕಿ ಅನಾಹುತ ಸಂಭವಿಸಿದೆ. ವೆಲ್ಡಿಂಗ್ ಕಾರ್ಮಿಕ ರೊನಾಲ್ಡ್ ಪೌಲ್ ಮೃತ ವ್ಯಕ್ತಿ. ಇವರು ಮತ್ತು ಇತರ ಆರು ಮಂದಿ ಖಾಲಿ ತೈಲ ಟ್ಯಾಂಕ್ನ ದುರಸ್ತಿ ಕೆಲಸ ಮಾಡುತ್ತಿದ್ದರು. ರೊನಾಲ್ಡ್ ಅವರು ಟ್ಯಾಂಕ್ ಮೇಲ್ಭಾಗದಲ್ಲಿ ನಿಂತು ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಕೆಳಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದೊಡ್ಡ ಶಬ್ದದೊಂದಿಗೆ ಬ್ಲಾಸ್ಟ್ ಆಗಿದೆ. ರೊನಾಲ್ಡ್ ಅವರು ಟ್ಯಾಂಕ್ ಮೇಲಿನಿಂದ 20 ಅಡಿ ಕೆಳಕ್ಕೆ ಎಸೆಯಲ್ಪಟ್ಟಿದ್ದು, ತಲೆ ಮತ್ತು ಹೊಟ್ಟೆ, ಎದೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಇತರರಿಗೂ ಸುಟ್ಟ ಗಾಯಗಳಾಗಿದ್ದು ಚಿಕಿತ್ಸೆಗೆ ಎಜೆ ಆಸ್ಪತ್ರೆಗೆ ಸಾಗಿಸಿದರೂ ರಾತ್ರಿ ವೇಳೆ ರೊನಾಲ್ಡ್ ಪೌಲ್ ಸಾವನ್ನಪ್ಪಿದ್ದಾರೆ.
ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಇತರ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ. ಕಾರ್ಖಾನೆಯಲ್ಲಿ ಕಾರ್ಮಿಕರ ಬಗ್ಗೆ ಮುಂಜಾಗ್ರತೆ ವಹಿಸದೆ ನಿರ್ಲಕ್ಷ್ಯ ವಹಿಸಿದ್ದಾರೆಂದು ಪಣಂಬೂರು ಠಾಣೆಯಲ್ಲಿ ಕಲಂ 304ಎ ಮತ್ತು 337 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
A man, who was working as a welding worker, died of burn injuries after a fire broke out at a chemical factory in Baikampady industrial complex here on Saturday.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm