ಬ್ರೇಕಿಂಗ್ ನ್ಯೂಸ್
14-01-24 10:46 pm Mangalore Correspondent ಕರಾವಳಿ
ಮಂಗಳೂರು, ಜ.15: ಬೈಕಂಪಾಡಿ ಕೈಗಾರಿಕಾ ಸಂಕೀರ್ಣದಲ್ಲಿ ಕೆಮಿಕಲ್ ಕಾರ್ಖಾನೆಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಸುಟ್ಟ ಗಾಯಗಳಿಂದ ಮೃತಪಟ್ಟ ಘಟನೆ ನಡೆದಿದೆ.
ಜೋನ್ಸ್ ಪೆಟ್ರೋ ಕೆಮಿಕಲ್ ಪ್ರೈವೇಟ್ ಲಿಮಿಟೆಡ್ ಎಂಬ ಕಾರ್ಖಾನೆಯಲ್ಲಿ ಶನಿವಾರ ಸಂಜೆ ನಾಲ್ಕು ಗಂಟೆ ವೇಳೆಗೆ ಬೆಂಕಿ ಅನಾಹುತ ಸಂಭವಿಸಿದೆ. ವೆಲ್ಡಿಂಗ್ ಕಾರ್ಮಿಕ ರೊನಾಲ್ಡ್ ಪೌಲ್ ಮೃತ ವ್ಯಕ್ತಿ. ಇವರು ಮತ್ತು ಇತರ ಆರು ಮಂದಿ ಖಾಲಿ ತೈಲ ಟ್ಯಾಂಕ್ನ ದುರಸ್ತಿ ಕೆಲಸ ಮಾಡುತ್ತಿದ್ದರು. ರೊನಾಲ್ಡ್ ಅವರು ಟ್ಯಾಂಕ್ ಮೇಲ್ಭಾಗದಲ್ಲಿ ನಿಂತು ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಕೆಳಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದೊಡ್ಡ ಶಬ್ದದೊಂದಿಗೆ ಬ್ಲಾಸ್ಟ್ ಆಗಿದೆ. ರೊನಾಲ್ಡ್ ಅವರು ಟ್ಯಾಂಕ್ ಮೇಲಿನಿಂದ 20 ಅಡಿ ಕೆಳಕ್ಕೆ ಎಸೆಯಲ್ಪಟ್ಟಿದ್ದು, ತಲೆ ಮತ್ತು ಹೊಟ್ಟೆ, ಎದೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಇತರರಿಗೂ ಸುಟ್ಟ ಗಾಯಗಳಾಗಿದ್ದು ಚಿಕಿತ್ಸೆಗೆ ಎಜೆ ಆಸ್ಪತ್ರೆಗೆ ಸಾಗಿಸಿದರೂ ರಾತ್ರಿ ವೇಳೆ ರೊನಾಲ್ಡ್ ಪೌಲ್ ಸಾವನ್ನಪ್ಪಿದ್ದಾರೆ.
ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಇತರ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ. ಕಾರ್ಖಾನೆಯಲ್ಲಿ ಕಾರ್ಮಿಕರ ಬಗ್ಗೆ ಮುಂಜಾಗ್ರತೆ ವಹಿಸದೆ ನಿರ್ಲಕ್ಷ್ಯ ವಹಿಸಿದ್ದಾರೆಂದು ಪಣಂಬೂರು ಠಾಣೆಯಲ್ಲಿ ಕಲಂ 304ಎ ಮತ್ತು 337 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
A man, who was working as a welding worker, died of burn injuries after a fire broke out at a chemical factory in Baikampady industrial complex here on Saturday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm