ಬ್ರೇಕಿಂಗ್ ನ್ಯೂಸ್
16-01-24 03:09 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.16: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆಯೂ ಆತ್ಮಹತ್ಯೆಗೆ ಶರಣಾದ ಘಟನೆ ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೊಗೀಶ್ ಪೂಜಾರಿ (41) ಆತ್ಮಹತ್ಯೆ ಮಾಡಿಕೊಂಡವರು.
ಜ.4 ರಂದು ಎಂಟನೇ ತರಗತಿ ಓದುತ್ತಿದ್ದ ಮಗ ಯಕ್ಷಿತ್ (14) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಮಗನ ಉತ್ತರ ಕ್ರಿಯೆ ಜ.14ರಂದು ಭಾನುವಾರ ನಡೆದಿತ್ತು. ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿಯ ಪುತ್ರ ಯಕ್ಷಿತ್ (14) ಸಾವಿಗೆ ತಮ್ಮನ ಜೊತೆಗಿನ ಕ್ಷುಲ್ಲಕ ಜಗಳ ಕಾರಣ ಎನ್ನಲಾಗಿತ್ತು.
ಆರು ವರ್ಷದ ತಮ್ಮನ ಜೊತೆ ಪದೇ ಪದೇ ಗಲಾಟೆ ನಡೆದಿತ್ತು. ಈ ಸಲ ಗಲಾಟೆಯಲ್ಲಿ ತಮ್ಮ ಅಣ್ಣನ ಹೊಟ್ಟೆ ಮೇಲೆ ಕಚ್ಚಿ ಗಾಯ ಮಾಡಿದ್ದ. ಇದೇ ವಿಚಾರದಲ್ಲಿ ನೊಂದು ತಮ್ಮನ ಎದುರೇ ಯಕ್ಷಿತ್ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗುತ್ತಿದೆ. ಯಕ್ಷಿತ್ ಉಜಿರೆ ಖಾಸಗಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಕಲಿಯುತ್ತಿದ್ದ.
ಮನೆಯ ಕೊಠಡಿಯಲ್ಲೇ ತಾಯಿಯ ಸೀರೆಯನ್ನು ಬಿಗಿದುಕೊಂಡು ನೇಣಿಗೆ ಶರಣಾಗಿದ್ದ. ತಂದೆ -ತಾಯಿ ಕೆಲಸಕ್ಕೆ ಹೋದ ಬಳಿಕ ಬಾಲಕ ದುರಂತ ಸಾವಿಗೀಡಾಗಿದ್ದು ಉಜಿರೆಯ ಜನರ ಮನ ಕಲಕಿತ್ತು. ಬೆಳ್ತಂಗಡಿ ಪೊಲೀಸರು ಸ್ಥಳ ಪರಿಶೀಲಿಸಿ ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದರು. ಇದೀಗ ಮಗನ ಉತ್ತರ ಕ್ರಿಯೆ ನಡೆದು ಎರಡೇ ದಿನದಲ್ಲಿ ತಂದೆಯೂ ಸಾವಿಗೆ ಶರಣಾಗಿದ್ದಾರೆ.
41 year old father commits suicide after his 13 year old committed suicide at Belthangady.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm