ಬ್ರೇಕಿಂಗ್ ನ್ಯೂಸ್
16-01-24 09:36 pm Mangalore Correspondent ಕರಾವಳಿ
ಮಂಗಳೂರು, ಜ.16: ರೇಶನ್ ಕಾರ್ಡ್ ಸಿಕ್ಕಿಲ್ಲವೆಂದು ಆಕ್ರೋಶಗೊಂಡ ವ್ಯಕ್ತಿಯೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟ ಘಟನೆ ನಡೆದಿದೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿಯನ್ನು ಅವಾಚ್ಯವಾಗಿ ನಿಂದಿಸಿ ವಿಡಿಯೋ ಮಾಡಲಾಗಿತ್ತು. ರೇಶನ್ ಕಾರ್ಡ್ ಸಿಗುತ್ತಿಲ್ಲ. ಬಿಪಿಎಲ್ ರೇಶನ್ ಕಾರ್ಡ್ ಪಡೆಯಲು ವ್ಯವಸ್ಥೆ ಮಾಡಿ. ನಿಮ್ಮ ಹತ್ತು ಕೇಜಿ ಉಚಿತ ಅಕ್ಕಿ ಬೇಕಾಗಿಲ್ಲ. ನಮಗೆ ದುಡಿದು ತಿನ್ನಲು ಶರೀರ ಗಟ್ಟಿಯಿದೆ. ರೇಶನ್ ಕಾರ್ಡ್ ವ್ಯವಸ್ಥೆ ಮಾಡಲಾಗದ ನಿಮ್ಮ ಸರ್ಕಾರವೆಂದು ಇಬ್ಬರನ್ನೂ ಅವಾಚ್ಯವಾಗಿ ನಿಂದಿಸಿ ವಿಡಿಯೋ ಮಾಡಿದ್ದ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು.

ಸುರತ್ಕಲ್ ಠಾಣೆಯಲ್ಲಿ ದೂರು ಸ್ವೀಕರಿಸಿದ ಪೊಲೀಸರು ಆರೋಪಿ ಅನಿಲ್ ಕುಮಾರ್ (34)ನನ್ನು ಬಂಧಿಸಿದ್ದಾರೆ. ಅನಿಲ್ ಮೂಲತಃ ಶಿರಸಿ ನಿವಾಸಿಯಾಗಿದ್ದು, 12 ವರ್ಷಗಳಿಂದ ಸುರತ್ಕಲ್ ಬಳಿ ಬಾಡಿಗೆ ಮನೆಯೊಂದರಲ್ಲಿ ಕುಟುಂಬದ ಜೊತೆಗೆ ವಾಸವಿದ್ದಾನೆ. ಸರ್ಕಾರಿ ಸೌಲಭ್ಯ ಪಡೆಯಲು ರೇಶನ್ ಕಾರ್ಡ್ ಪಡೆಯುವುದಕ್ಕಾಗಿ ಅಲೆದಾಡಿದ್ದ. ಸರ್ವರ್ ಸಮಸ್ಯೆಯಿಂದ ರೇಶನ್ ಕಾರ್ಡ್ ಸಿಗದೆ ಹತಾಶೆಗೊಂಡು ವಿಡಿಯೋ ಮಾಡಿದ್ದ ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿ ವಿರುದ್ಧ 153ಎ, 505, 504 ಸೆಕ್ಷನ್ ಅಡಿ ಕೇಸು ದಾಖಲು ಮಾಡಲಾಗಿದೆ.
Mangalore Surathkal man arrested for talking derogatory words against cm Siddaramaiah and Dk Shivakumar. The arrested has been identified as Anil Kumar. The arrest was made after Suhan Alva from congress filed a police complaint.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm