ಬ್ರೇಕಿಂಗ್ ನ್ಯೂಸ್
16-01-24 09:36 pm Mangalore Correspondent ಕರಾವಳಿ
ಮಂಗಳೂರು, ಜ.16: ರೇಶನ್ ಕಾರ್ಡ್ ಸಿಕ್ಕಿಲ್ಲವೆಂದು ಆಕ್ರೋಶಗೊಂಡ ವ್ಯಕ್ತಿಯೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟ ಘಟನೆ ನಡೆದಿದೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿಯನ್ನು ಅವಾಚ್ಯವಾಗಿ ನಿಂದಿಸಿ ವಿಡಿಯೋ ಮಾಡಲಾಗಿತ್ತು. ರೇಶನ್ ಕಾರ್ಡ್ ಸಿಗುತ್ತಿಲ್ಲ. ಬಿಪಿಎಲ್ ರೇಶನ್ ಕಾರ್ಡ್ ಪಡೆಯಲು ವ್ಯವಸ್ಥೆ ಮಾಡಿ. ನಿಮ್ಮ ಹತ್ತು ಕೇಜಿ ಉಚಿತ ಅಕ್ಕಿ ಬೇಕಾಗಿಲ್ಲ. ನಮಗೆ ದುಡಿದು ತಿನ್ನಲು ಶರೀರ ಗಟ್ಟಿಯಿದೆ. ರೇಶನ್ ಕಾರ್ಡ್ ವ್ಯವಸ್ಥೆ ಮಾಡಲಾಗದ ನಿಮ್ಮ ಸರ್ಕಾರವೆಂದು ಇಬ್ಬರನ್ನೂ ಅವಾಚ್ಯವಾಗಿ ನಿಂದಿಸಿ ವಿಡಿಯೋ ಮಾಡಿದ್ದ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು.

ಸುರತ್ಕಲ್ ಠಾಣೆಯಲ್ಲಿ ದೂರು ಸ್ವೀಕರಿಸಿದ ಪೊಲೀಸರು ಆರೋಪಿ ಅನಿಲ್ ಕುಮಾರ್ (34)ನನ್ನು ಬಂಧಿಸಿದ್ದಾರೆ. ಅನಿಲ್ ಮೂಲತಃ ಶಿರಸಿ ನಿವಾಸಿಯಾಗಿದ್ದು, 12 ವರ್ಷಗಳಿಂದ ಸುರತ್ಕಲ್ ಬಳಿ ಬಾಡಿಗೆ ಮನೆಯೊಂದರಲ್ಲಿ ಕುಟುಂಬದ ಜೊತೆಗೆ ವಾಸವಿದ್ದಾನೆ. ಸರ್ಕಾರಿ ಸೌಲಭ್ಯ ಪಡೆಯಲು ರೇಶನ್ ಕಾರ್ಡ್ ಪಡೆಯುವುದಕ್ಕಾಗಿ ಅಲೆದಾಡಿದ್ದ. ಸರ್ವರ್ ಸಮಸ್ಯೆಯಿಂದ ರೇಶನ್ ಕಾರ್ಡ್ ಸಿಗದೆ ಹತಾಶೆಗೊಂಡು ವಿಡಿಯೋ ಮಾಡಿದ್ದ ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿ ವಿರುದ್ಧ 153ಎ, 505, 504 ಸೆಕ್ಷನ್ ಅಡಿ ಕೇಸು ದಾಖಲು ಮಾಡಲಾಗಿದೆ.
Mangalore Surathkal man arrested for talking derogatory words against cm Siddaramaiah and Dk Shivakumar. The arrested has been identified as Anil Kumar. The arrest was made after Suhan Alva from congress filed a police complaint.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm