ಬ್ರೇಕಿಂಗ್ ನ್ಯೂಸ್
17-01-24 06:56 pm Mangalore Correspondent ಕರಾವಳಿ
ಪುತ್ತೂರು, ಜ.17: ಬಿಜೆಪಿ ಮುಖಂಡ, ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿ ಶುಭಲಕ್ಷ್ಮಿ(50) ಅಸಹಜ ರೀತಿಯಲ್ಲಿ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಒಳಮೊಗ್ರು ಗ್ರಾಮದ ಕೈಕಾರದಲ್ಲಿ ಇವರ ಮನೆಯಿದ್ದು ಬುಧವಾರ ಮಧ್ಯಾಹ್ನ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮನೆಯ ಗುಡ್ಡದ ಮೇಲೆ ಮಣ್ಣಿನ ಟ್ಯಾಂಕಿ ನಿರ್ಮಿಸಿದ್ದು ಅದಕ್ಕೆ ಟಾರ್ಪಾಲು ಹಾಕಿ ನೀರು ನಿಲ್ಲಿಸಲಾಗಿತ್ತು. ಬೆಳಗ್ಗೆ ಹನ್ನೊಂದು ಗಂಟೆ ವರೆಗೆ ಪ್ರಕಾಶ್ಚಂದ್ರ ರೈ ಮನೆಯಲ್ಲಿದ್ದು ಆನಂತರ ಹೊರಗೆ ತೆರಳಿದ್ದರು. ಮಧ್ಯಾಹ್ನ ಒಂದೂವರೆ ಗಂಟೆ ವೇಳೆಗೆ ಹೋಗಿ ನೋಡಿದಾಗ ಪತ್ನಿ ಇರಲಿಲ್ಲ. ಹುಡುಕಾಟದ ವೇಳೆ ತೊಟ್ಟಿಯಲ್ಲಿ ಶವ ಪತ್ತೆಯಾಗಿದೆ. ಮಗಳು ಕಾಲೇಜಿಗೆ ಹೋಗಿದ್ದು ಮನೆಯಲ್ಲಿ ಕೆಲಸದವರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾಲುಜಾರಿ ನೀರಿನ ತೊಟ್ಟಿಗೆ ಬಿದ್ದಿದ್ದು, ಆ ಸಂದರ್ಭದಲ್ಲಿ ಯಾರೂ ಇಲ್ಲದ ಕಾರಣ ಅಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪತಿ ಪ್ರಕಾಶ್ಚಂದ್ರ ರೈ ಗ್ರಾಮಾಂತರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಆತ್ಮಹತ್ಯೆಯೋ, ಘಟನೆ ಹೇಗಾಗಿದೆ ಎನ್ನುವ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಸಂಪ್ಯ ಎಸ್ಐ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಗೋಪಾಲಕೃಷ್ಣ ಹೇರಳೆ, ಸಾಜ ರಾಧಾಕೃಷ್ಣ ಆಳ್ವ, ಶಶಿಕುಮಾರ್ ರೈ ಬಾಲ್ಯೊಟ್ಟು ಮತ್ತಿತರರು ಭೇಟಿ ನೀಡಿದ್ದರು.
Mangalore Kumbra society president wife Shublakshmi (50) dies after falling to pond in Puttur.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm