ಬ್ರೇಕಿಂಗ್ ನ್ಯೂಸ್
17-01-24 06:56 pm Mangalore Correspondent ಕರಾವಳಿ
ಪುತ್ತೂರು, ಜ.17: ಬಿಜೆಪಿ ಮುಖಂಡ, ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿ ಶುಭಲಕ್ಷ್ಮಿ(50) ಅಸಹಜ ರೀತಿಯಲ್ಲಿ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಒಳಮೊಗ್ರು ಗ್ರಾಮದ ಕೈಕಾರದಲ್ಲಿ ಇವರ ಮನೆಯಿದ್ದು ಬುಧವಾರ ಮಧ್ಯಾಹ್ನ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮನೆಯ ಗುಡ್ಡದ ಮೇಲೆ ಮಣ್ಣಿನ ಟ್ಯಾಂಕಿ ನಿರ್ಮಿಸಿದ್ದು ಅದಕ್ಕೆ ಟಾರ್ಪಾಲು ಹಾಕಿ ನೀರು ನಿಲ್ಲಿಸಲಾಗಿತ್ತು. ಬೆಳಗ್ಗೆ ಹನ್ನೊಂದು ಗಂಟೆ ವರೆಗೆ ಪ್ರಕಾಶ್ಚಂದ್ರ ರೈ ಮನೆಯಲ್ಲಿದ್ದು ಆನಂತರ ಹೊರಗೆ ತೆರಳಿದ್ದರು. ಮಧ್ಯಾಹ್ನ ಒಂದೂವರೆ ಗಂಟೆ ವೇಳೆಗೆ ಹೋಗಿ ನೋಡಿದಾಗ ಪತ್ನಿ ಇರಲಿಲ್ಲ. ಹುಡುಕಾಟದ ವೇಳೆ ತೊಟ್ಟಿಯಲ್ಲಿ ಶವ ಪತ್ತೆಯಾಗಿದೆ. ಮಗಳು ಕಾಲೇಜಿಗೆ ಹೋಗಿದ್ದು ಮನೆಯಲ್ಲಿ ಕೆಲಸದವರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾಲುಜಾರಿ ನೀರಿನ ತೊಟ್ಟಿಗೆ ಬಿದ್ದಿದ್ದು, ಆ ಸಂದರ್ಭದಲ್ಲಿ ಯಾರೂ ಇಲ್ಲದ ಕಾರಣ ಅಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪತಿ ಪ್ರಕಾಶ್ಚಂದ್ರ ರೈ ಗ್ರಾಮಾಂತರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಆತ್ಮಹತ್ಯೆಯೋ, ಘಟನೆ ಹೇಗಾಗಿದೆ ಎನ್ನುವ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಸಂಪ್ಯ ಎಸ್ಐ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಗೋಪಾಲಕೃಷ್ಣ ಹೇರಳೆ, ಸಾಜ ರಾಧಾಕೃಷ್ಣ ಆಳ್ವ, ಶಶಿಕುಮಾರ್ ರೈ ಬಾಲ್ಯೊಟ್ಟು ಮತ್ತಿತರರು ಭೇಟಿ ನೀಡಿದ್ದರು.
Mangalore Kumbra society president wife Shublakshmi (50) dies after falling to pond in Puttur.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm