ಬ್ರೇಕಿಂಗ್ ನ್ಯೂಸ್
20-01-24 08:47 pm Mangalore Correspondent ಕರಾವಳಿ
ಮಂಗಳೂರು, ಜ.20: ತೆಂಕು ಬಡಗು ಕಲಾ ಸವ್ಯಸಾಚಿ ನಾಟ್ಯ ಮಯೂರ ರಕ್ಷಿತ್ ಶೆಟ್ಟಿ ಪಡ್ರೆ ಅವರು ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ ಸಂದರ್ಭ ಜ.21ರಂದು ರಾತ್ರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಾಸಕ ವಿ. ಸುನಿಲ್ ಕುಮಾರ್ ಹಾಗೂ ಚಲನಚಿತ್ರ ನಟ ವಿಘ್ನೇಶ್ ಎಂ. ಉಪಸ್ಥಿತರಿರಲಿದ್ದಾರೆ. ಈ ಸಂದರ್ಭ ರಕ್ಷಿತ್ ಪಡ್ರೆ ಅವರು ಅಭಿನಯಿಸುವ ಶ್ವೇತಕುಮಾರ ಚರಿತ್ರೆ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ ಎಂದು ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.
ಬಪ್ಪನಾಡು, ಸಸಿಹಿತ್ಲು, ಹೊಸನಗರ, ಎಡನೀರು ಮೇಳದಲ್ಲಿ ಕಲಾಸೇವೆ ಮಾಡಿ ಈಗ ಹನುಮಗಿರಿ ಮೇಳದಲ್ಲಿ ತಿರುಗಾಟ ಮಾಡುತ್ತಿರುವ ನಾಟ್ಯ ಮಯೂರ, ಯಕ್ಷ ಚೈತನ್ಯ ಬಿರುದಾಂಕಿತ ಪಡ್ರೆ ಅವರು, 20 ಕಡೆ ಮಕ್ಕಳಿಗಾಗಿ ಯಕ್ಷಗಾನ ತರಗತಿ ನಡೆಸುವ ಮೂಲಕ ಯಕ್ಷಗಾನ ಸೇವಾ ಕೈಂಕರ್ಯದಲ್ಲಿ ತೊಡಗಿಸಿದ್ದಾರೆ.
ಸುದರ್ಶನ, ಅಭಿಮನ್ಯು, ಮೇನಕೆ, ಭ್ರಮರ ಕುಂತಳೆ, ಸುಭದ್ರೆ, ಪ್ರಭಾವತಿ, ಕೃಷ್ಣ, ಶ್ರೀದೇವಿ, ಅಶ್ವತ್ಥಾಮ, ಸೀತೆ, ಮೋಹಿನಿ, ಮೀನಾಕ್ಷಿ ಇವರಿಗೆ ಪ್ರಸಿದ್ಧಿ ತಂದುಕೊಟ್ಟ ಪಾತ್ರಗಳು. ಎಂಎಸ್ಸಿ ಕಂಪ್ಯೂಟರ್ ಸೈನ್ಸ್ ಪದವೀಧರ ಪಡ್ರೆ ಅವರು ಭರತನಾಟ್ಯ ಪ್ರವೀಣ. ಗ್ಲಾಸ್ ಪೇಂಟಿಂಗ್, ರಂಗೋಲಿಯಲ್ಲೂ ನೈಪುಣ್ಯ ಸಾಧಿಸಿದ್ದಾರೆ.
ಜ.21 ರಂದು ರಾತ್ರಿ 7.30ರಿಂದ ಸಾಯಿಶಕ್ತಿ ಕಲಾ ಬಳಗ ಮಂಗಳೂರು ತಂಡದಿಂದ ಶ್ವೇತ ಕುಮಾರ ಚರಿತ್ರೆ ಎಂಬ ವಿಶಿಷ್ಟ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ. 22ರಂದು ಕುಂದೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ನಡೆಯಲಿದೆ.
Tenku Badagu Kala Savyasachi Natya Mayura Rakshit Shetty Padre has been selected for the prestigious Kundeshwar Samman award.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm