ಬ್ರೇಕಿಂಗ್ ನ್ಯೂಸ್
20-01-24 08:47 pm Mangalore Correspondent ಕರಾವಳಿ
ಮಂಗಳೂರು, ಜ.20: ತೆಂಕು ಬಡಗು ಕಲಾ ಸವ್ಯಸಾಚಿ ನಾಟ್ಯ ಮಯೂರ ರಕ್ಷಿತ್ ಶೆಟ್ಟಿ ಪಡ್ರೆ ಅವರು ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ ಸಂದರ್ಭ ಜ.21ರಂದು ರಾತ್ರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಾಸಕ ವಿ. ಸುನಿಲ್ ಕುಮಾರ್ ಹಾಗೂ ಚಲನಚಿತ್ರ ನಟ ವಿಘ್ನೇಶ್ ಎಂ. ಉಪಸ್ಥಿತರಿರಲಿದ್ದಾರೆ. ಈ ಸಂದರ್ಭ ರಕ್ಷಿತ್ ಪಡ್ರೆ ಅವರು ಅಭಿನಯಿಸುವ ಶ್ವೇತಕುಮಾರ ಚರಿತ್ರೆ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ ಎಂದು ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.
ಬಪ್ಪನಾಡು, ಸಸಿಹಿತ್ಲು, ಹೊಸನಗರ, ಎಡನೀರು ಮೇಳದಲ್ಲಿ ಕಲಾಸೇವೆ ಮಾಡಿ ಈಗ ಹನುಮಗಿರಿ ಮೇಳದಲ್ಲಿ ತಿರುಗಾಟ ಮಾಡುತ್ತಿರುವ ನಾಟ್ಯ ಮಯೂರ, ಯಕ್ಷ ಚೈತನ್ಯ ಬಿರುದಾಂಕಿತ ಪಡ್ರೆ ಅವರು, 20 ಕಡೆ ಮಕ್ಕಳಿಗಾಗಿ ಯಕ್ಷಗಾನ ತರಗತಿ ನಡೆಸುವ ಮೂಲಕ ಯಕ್ಷಗಾನ ಸೇವಾ ಕೈಂಕರ್ಯದಲ್ಲಿ ತೊಡಗಿಸಿದ್ದಾರೆ.
ಸುದರ್ಶನ, ಅಭಿಮನ್ಯು, ಮೇನಕೆ, ಭ್ರಮರ ಕುಂತಳೆ, ಸುಭದ್ರೆ, ಪ್ರಭಾವತಿ, ಕೃಷ್ಣ, ಶ್ರೀದೇವಿ, ಅಶ್ವತ್ಥಾಮ, ಸೀತೆ, ಮೋಹಿನಿ, ಮೀನಾಕ್ಷಿ ಇವರಿಗೆ ಪ್ರಸಿದ್ಧಿ ತಂದುಕೊಟ್ಟ ಪಾತ್ರಗಳು. ಎಂಎಸ್ಸಿ ಕಂಪ್ಯೂಟರ್ ಸೈನ್ಸ್ ಪದವೀಧರ ಪಡ್ರೆ ಅವರು ಭರತನಾಟ್ಯ ಪ್ರವೀಣ. ಗ್ಲಾಸ್ ಪೇಂಟಿಂಗ್, ರಂಗೋಲಿಯಲ್ಲೂ ನೈಪುಣ್ಯ ಸಾಧಿಸಿದ್ದಾರೆ.
ಜ.21 ರಂದು ರಾತ್ರಿ 7.30ರಿಂದ ಸಾಯಿಶಕ್ತಿ ಕಲಾ ಬಳಗ ಮಂಗಳೂರು ತಂಡದಿಂದ ಶ್ವೇತ ಕುಮಾರ ಚರಿತ್ರೆ ಎಂಬ ವಿಶಿಷ್ಟ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ. 22ರಂದು ಕುಂದೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ನಡೆಯಲಿದೆ.
Tenku Badagu Kala Savyasachi Natya Mayura Rakshit Shetty Padre has been selected for the prestigious Kundeshwar Samman award.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm