ಬ್ರೇಕಿಂಗ್ ನ್ಯೂಸ್
20-01-24 08:47 pm Mangalore Correspondent ಕರಾವಳಿ
ಮಂಗಳೂರು, ಜ.20: ತೆಂಕು ಬಡಗು ಕಲಾ ಸವ್ಯಸಾಚಿ ನಾಟ್ಯ ಮಯೂರ ರಕ್ಷಿತ್ ಶೆಟ್ಟಿ ಪಡ್ರೆ ಅವರು ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ ಸಂದರ್ಭ ಜ.21ರಂದು ರಾತ್ರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಾಸಕ ವಿ. ಸುನಿಲ್ ಕುಮಾರ್ ಹಾಗೂ ಚಲನಚಿತ್ರ ನಟ ವಿಘ್ನೇಶ್ ಎಂ. ಉಪಸ್ಥಿತರಿರಲಿದ್ದಾರೆ. ಈ ಸಂದರ್ಭ ರಕ್ಷಿತ್ ಪಡ್ರೆ ಅವರು ಅಭಿನಯಿಸುವ ಶ್ವೇತಕುಮಾರ ಚರಿತ್ರೆ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ ಎಂದು ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.
ಬಪ್ಪನಾಡು, ಸಸಿಹಿತ್ಲು, ಹೊಸನಗರ, ಎಡನೀರು ಮೇಳದಲ್ಲಿ ಕಲಾಸೇವೆ ಮಾಡಿ ಈಗ ಹನುಮಗಿರಿ ಮೇಳದಲ್ಲಿ ತಿರುಗಾಟ ಮಾಡುತ್ತಿರುವ ನಾಟ್ಯ ಮಯೂರ, ಯಕ್ಷ ಚೈತನ್ಯ ಬಿರುದಾಂಕಿತ ಪಡ್ರೆ ಅವರು, 20 ಕಡೆ ಮಕ್ಕಳಿಗಾಗಿ ಯಕ್ಷಗಾನ ತರಗತಿ ನಡೆಸುವ ಮೂಲಕ ಯಕ್ಷಗಾನ ಸೇವಾ ಕೈಂಕರ್ಯದಲ್ಲಿ ತೊಡಗಿಸಿದ್ದಾರೆ.
ಸುದರ್ಶನ, ಅಭಿಮನ್ಯು, ಮೇನಕೆ, ಭ್ರಮರ ಕುಂತಳೆ, ಸುಭದ್ರೆ, ಪ್ರಭಾವತಿ, ಕೃಷ್ಣ, ಶ್ರೀದೇವಿ, ಅಶ್ವತ್ಥಾಮ, ಸೀತೆ, ಮೋಹಿನಿ, ಮೀನಾಕ್ಷಿ ಇವರಿಗೆ ಪ್ರಸಿದ್ಧಿ ತಂದುಕೊಟ್ಟ ಪಾತ್ರಗಳು. ಎಂಎಸ್ಸಿ ಕಂಪ್ಯೂಟರ್ ಸೈನ್ಸ್ ಪದವೀಧರ ಪಡ್ರೆ ಅವರು ಭರತನಾಟ್ಯ ಪ್ರವೀಣ. ಗ್ಲಾಸ್ ಪೇಂಟಿಂಗ್, ರಂಗೋಲಿಯಲ್ಲೂ ನೈಪುಣ್ಯ ಸಾಧಿಸಿದ್ದಾರೆ.
ಜ.21 ರಂದು ರಾತ್ರಿ 7.30ರಿಂದ ಸಾಯಿಶಕ್ತಿ ಕಲಾ ಬಳಗ ಮಂಗಳೂರು ತಂಡದಿಂದ ಶ್ವೇತ ಕುಮಾರ ಚರಿತ್ರೆ ಎಂಬ ವಿಶಿಷ್ಟ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ. 22ರಂದು ಕುಂದೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ನಡೆಯಲಿದೆ.
Tenku Badagu Kala Savyasachi Natya Mayura Rakshit Shetty Padre has been selected for the prestigious Kundeshwar Samman award.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm