ಬ್ರೇಕಿಂಗ್ ನ್ಯೂಸ್
23-01-24 03:09 pm Mangalore Correspondent ಕರಾವಳಿ
ಮಂಗಳೂರು, ಜ.23: ಮ್ಯೂಚ್ವಲ್ ಫಂಡ್ ವ್ಯವಹಾರದ ಜೊತೆಗೆ ಸಿಎ ಓದುತ್ತಿದ್ದ ಯುವಕನೊಬ್ಬ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕರಂಗಲ್ಪಾಡಿಯಲ್ಲಿ ನಡೆದಿದೆ.
ಕರಂಗಲ್ಪಾಡಿ ನಿವಾಸಿ ಕಾರ್ಲ್ ಲಾರೆನ್ಸ್ ಅರಾನ್ಹ (23) ಸಾವಿಗೆ ಶರಣಾದ ಯುವಕ. ಸೋಮವಾರ ಷೇರ್ ಮಾರ್ಕೆಟ್ ರಜೆ ಇದ್ದುದರಿಂದ ಮನೆಯಲ್ಲೇ ಇದ್ದ ಕಾರ್ಲ್ ಲಾರೆನ್ಸ್ ಮಧ್ಯಾಹ್ನ ಊಟ ಮಾಡಿ ಕೊಠಡಿ ಸೇರಿದ್ದ. ಸಂಜೆ ನಾಲ್ಕು ಗಂಟೆ ವೇಳೆಗೆ ಬಾಗಿಲು ಬಡಿದರೂ ಹೊರ ಬಂದಿರಲಿಲ್ಲ. ಫೋನ್ ಮಾಡಿದರೆ ಸ್ವಿಚ್ ಆಫ್ ಆಗಿತ್ತು. ರಾತ್ರಿ 7 ಗಂಟೆಯಾದರೂ ಕೊಠಡಿಯಿಂದ ಹೊರ ಬಂದಿಲ್ಲ ಎಂದು ಕದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪೊಲೀಸರು ರಾತ್ರಿ ಬಾಗಿಲು ಒಡೆದು ನೋಡಿದಾಗ, ಲಾರೆನ್ಸ್ ಬೆಟ್ ಶೀಟನ್ನೇ ಕಿಟಕಿಗೆ ಕಟ್ಟಿ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಲಾರೆನ್ಸ್ ತನ್ನ ತಂದೆಯ ಜೊತೆಗೆ ಸೇರಿ ಮ್ಯೂಚುವಲ್ ಫಂಡ್ ಸೇರಿದಂತೆ ಷೇರು ಮಾರ್ಕೆಟ್ ಬಿಸಿನೆಸ್ ನಲ್ಲಿ ತೊಡಗಿಸಿದ್ದ. ಸಾವಿಗೇನು ಕಾರಣ ಎಂದು ತಿಳಿದುಬಂದಿಲ್ಲ. ಡೆತ್ ನೋಟ್ ಸಿಕ್ಕಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಮನೆ ಮತ್ತು ಪರಿಸರದಲ್ಲಿ ಒಳ್ಳೆಯ ಯುವಕನಾಗಿದ್ದ ಲಾರೆನ್ಸ್ ದಿಢೀರ್ ಸಾವಿಗೀಡಾಗಿದ್ದು ಕುಟುಂಬಸ್ಥರಲ್ಲಿ ಗಾಬರಿ ಹುಟ್ಟಿಸಿದೆ.
23 year old CA Student Carl Aranha commits suicide at house in Mangalore. It is said he was helping his father in Share market and mutual fund business. Case has been registered at Kadri Police Station.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm