ಬ್ರೇಕಿಂಗ್ ನ್ಯೂಸ್
23-01-24 05:20 pm Mangalore Correspondent ಕರಾವಳಿ
ಉಳ್ಳಾಲ, ಜ.23: ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹತ್ತು ಹಾಸಿಗೆಗಳ ಸುಸಜ್ಜಿತ ಡಯಾಲಿಸಿಸ್ ಘಟಕ ನಿರ್ಮಾಣಗೊಳ್ಳುತ್ತಿದ್ದು ನೂತನ ಘಟಕದ ಕಾಮಗಾರಿಯನ್ನು ಕ್ಷೇತ್ರದ ಶಾಸಕರೂ ವಿಧಾನಸಭಾ ಸಭಾಧ್ಯಕ್ಷರಾಗಿರುವ ಯು.ಟಿ.ಖಾದರ್ ಪರಿಶೀಲನೆ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್ ಅವರು ಜಿಲ್ಲಾ ಆಸ್ಪತ್ರೆ, ಜಿಲ್ಲಾ ಕೇಂದ್ರದಿಂದ 8 ಕಿ.ಮೀ ಅಂತರದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳು ರಾಜ್ಯ ಅಥವಾ ರಾಷ್ಟ್ರದಲ್ಲೇ ಕಾಣಲು ಸಿಗೋದಿಲ್ಲ. ಹಾಗಾಗಿ ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರವು ರಾಷ್ಟ್ರಕ್ಕೆ ಮಾದರಿಯಾಗಿದೆ. ನಾನು ರಾಜ್ಯದ ಆರೋಗ್ಯ ಸಚಿವನಾಗಿದ್ದಾಗ ಕ್ಯಾಬಿನೆಟ್ಟಲ್ಲಿ ಅವಕಾಶ ಇಲ್ಲದಿದ್ದರೂ ಕೇಂದ್ರದ ವಿಶೇಷ ಅನುಮತಿಯಿಂದ ಉಳ್ಳಾಲ ಸಮುದಾಯ ಆಸ್ಪತ್ರೆಯನ್ನ ಕಟ್ಟಿಸಿದ್ದೆ. ಎಷ್ಟೇ ಉತ್ತಮ ಕಟ್ಟಡ ಮತ್ತು ಸೌಕರ್ಯ ಒದಗಿಸಿದರೂ ವೈದ್ಯರು, ಸಿಬ್ಬಂದಿ ಕೊರತೆಯಿಂದ ಆರೋಗ್ಯ ಕೇಂದ್ರದ ಸೇವೆಗಳಲ್ಲಿ ಕುಂಠಿತ ಕಂಡಿವೆ. ಕೆಲವೊಂದು ಉತ್ತಮ ಡಾಕ್ಟರ್ ಗಳು ಸ್ಥಳೀಯರ ಟೀಕೆ, ಟಿಪ್ಪಣಿಗಳಿಂದ ಕೆಲಸವೇ ಬೇಡವೆಂದು ಬಿಟ್ಟು ಹೋಗಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಯೆನಪೋಯ ಆಸ್ಪತ್ರೆ ಮತ್ತು ಸರಕಾರಿ ವೈದ್ಯರೂ ಜನರಿಗೆ ಉಚಿತ ಆರೋಗ್ಯ ಸೇವೆಯನ್ನ ನೀಡುತ್ತಿದ್ದಾರೆ.




ನನ್ನ ಶಾಸಕ ನಿಧಿಯಿಂದ ನೂತನ ಡಯಾಲಿಸಿಸ್ ಸೆಂಟರ್ ಕಟ್ಟಡ ನಿರ್ಮಾಣಗೊಳ್ಳುತ್ತಿದೆ. ದಾನಿಗಳ ನೆರವಿನಿಂದ ಅತಿ ಶೀಘ್ರವೇ ಡಯಾಲಿಸಿಸ್ ಯಂತ್ರಗಳನ್ನ ಅಳವಡಿಸಿ ಘಟಕವನ್ನ ಸಾರ್ವಜನಿಕರ ಉಪಯೋಗಕ್ಕೆ ತೆರೆಯಲಾಗುವುದು. ಕೋವಿಡ್ ಸಮಯದಲ್ಲಿ ನನೆಗುದಿಗೆ ಬಿದ್ದಿದ್ದ ಆಕ್ಸಿಜನ್ ಘಟಕವನ್ನೂ ಉಪಯೋಗಿಸಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಆಸ್ಪತ್ರೆ ಆವರಣದಲ್ಲಿರುವ ಶವಾಗಾರವನ್ನೂ ಸಾರ್ವಜನಿಕರು ಬಳಸುವಂತೆ ನವೀಕರಿಸುತ್ತಿರುವುದಾಗಿ ಖಾದರ್ ಹೇಳಿದರು.
ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದೊಳಗೆ ಆಯುಷ್, ಯುನಾನಿ, ಆಯುರ್ವೇದ, ಆಲೋಪತಿ, ಹೋಮಿಯೋಪಥಿಕ್, ಡೆಂಟಲ್ ಸರ್ವೀಸ್, ಯೋಗ, ಡಯಾಲಿಸಿಸ್ ಹೀಗೆ ಎಲ್ಲಾ ಸೇವೆಗಳೂ ಸಾರ್ವಜನಿಕರಿಗೆ ಲಭಿಸಲಿದೆ ಎಂದು ಖಾದರ್ ಹೇಳಿದರು.
Mangalore Ullal community health centre inspected by Speaker UT Khader. 10 beds to have special dialysis units for treatment.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm