ಬ್ರೇಕಿಂಗ್ ನ್ಯೂಸ್
23-01-24 05:20 pm Mangalore Correspondent ಕರಾವಳಿ
ಉಳ್ಳಾಲ, ಜ.23: ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹತ್ತು ಹಾಸಿಗೆಗಳ ಸುಸಜ್ಜಿತ ಡಯಾಲಿಸಿಸ್ ಘಟಕ ನಿರ್ಮಾಣಗೊಳ್ಳುತ್ತಿದ್ದು ನೂತನ ಘಟಕದ ಕಾಮಗಾರಿಯನ್ನು ಕ್ಷೇತ್ರದ ಶಾಸಕರೂ ವಿಧಾನಸಭಾ ಸಭಾಧ್ಯಕ್ಷರಾಗಿರುವ ಯು.ಟಿ.ಖಾದರ್ ಪರಿಶೀಲನೆ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್ ಅವರು ಜಿಲ್ಲಾ ಆಸ್ಪತ್ರೆ, ಜಿಲ್ಲಾ ಕೇಂದ್ರದಿಂದ 8 ಕಿ.ಮೀ ಅಂತರದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳು ರಾಜ್ಯ ಅಥವಾ ರಾಷ್ಟ್ರದಲ್ಲೇ ಕಾಣಲು ಸಿಗೋದಿಲ್ಲ. ಹಾಗಾಗಿ ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರವು ರಾಷ್ಟ್ರಕ್ಕೆ ಮಾದರಿಯಾಗಿದೆ. ನಾನು ರಾಜ್ಯದ ಆರೋಗ್ಯ ಸಚಿವನಾಗಿದ್ದಾಗ ಕ್ಯಾಬಿನೆಟ್ಟಲ್ಲಿ ಅವಕಾಶ ಇಲ್ಲದಿದ್ದರೂ ಕೇಂದ್ರದ ವಿಶೇಷ ಅನುಮತಿಯಿಂದ ಉಳ್ಳಾಲ ಸಮುದಾಯ ಆಸ್ಪತ್ರೆಯನ್ನ ಕಟ್ಟಿಸಿದ್ದೆ. ಎಷ್ಟೇ ಉತ್ತಮ ಕಟ್ಟಡ ಮತ್ತು ಸೌಕರ್ಯ ಒದಗಿಸಿದರೂ ವೈದ್ಯರು, ಸಿಬ್ಬಂದಿ ಕೊರತೆಯಿಂದ ಆರೋಗ್ಯ ಕೇಂದ್ರದ ಸೇವೆಗಳಲ್ಲಿ ಕುಂಠಿತ ಕಂಡಿವೆ. ಕೆಲವೊಂದು ಉತ್ತಮ ಡಾಕ್ಟರ್ ಗಳು ಸ್ಥಳೀಯರ ಟೀಕೆ, ಟಿಪ್ಪಣಿಗಳಿಂದ ಕೆಲಸವೇ ಬೇಡವೆಂದು ಬಿಟ್ಟು ಹೋಗಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಯೆನಪೋಯ ಆಸ್ಪತ್ರೆ ಮತ್ತು ಸರಕಾರಿ ವೈದ್ಯರೂ ಜನರಿಗೆ ಉಚಿತ ಆರೋಗ್ಯ ಸೇವೆಯನ್ನ ನೀಡುತ್ತಿದ್ದಾರೆ.




ನನ್ನ ಶಾಸಕ ನಿಧಿಯಿಂದ ನೂತನ ಡಯಾಲಿಸಿಸ್ ಸೆಂಟರ್ ಕಟ್ಟಡ ನಿರ್ಮಾಣಗೊಳ್ಳುತ್ತಿದೆ. ದಾನಿಗಳ ನೆರವಿನಿಂದ ಅತಿ ಶೀಘ್ರವೇ ಡಯಾಲಿಸಿಸ್ ಯಂತ್ರಗಳನ್ನ ಅಳವಡಿಸಿ ಘಟಕವನ್ನ ಸಾರ್ವಜನಿಕರ ಉಪಯೋಗಕ್ಕೆ ತೆರೆಯಲಾಗುವುದು. ಕೋವಿಡ್ ಸಮಯದಲ್ಲಿ ನನೆಗುದಿಗೆ ಬಿದ್ದಿದ್ದ ಆಕ್ಸಿಜನ್ ಘಟಕವನ್ನೂ ಉಪಯೋಗಿಸಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಆಸ್ಪತ್ರೆ ಆವರಣದಲ್ಲಿರುವ ಶವಾಗಾರವನ್ನೂ ಸಾರ್ವಜನಿಕರು ಬಳಸುವಂತೆ ನವೀಕರಿಸುತ್ತಿರುವುದಾಗಿ ಖಾದರ್ ಹೇಳಿದರು.
ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದೊಳಗೆ ಆಯುಷ್, ಯುನಾನಿ, ಆಯುರ್ವೇದ, ಆಲೋಪತಿ, ಹೋಮಿಯೋಪಥಿಕ್, ಡೆಂಟಲ್ ಸರ್ವೀಸ್, ಯೋಗ, ಡಯಾಲಿಸಿಸ್ ಹೀಗೆ ಎಲ್ಲಾ ಸೇವೆಗಳೂ ಸಾರ್ವಜನಿಕರಿಗೆ ಲಭಿಸಲಿದೆ ಎಂದು ಖಾದರ್ ಹೇಳಿದರು.
Mangalore Ullal community health centre inspected by Speaker UT Khader. 10 beds to have special dialysis units for treatment.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm