ಬ್ರೇಕಿಂಗ್ ನ್ಯೂಸ್
24-01-24 01:53 pm Mangalore Correspondent ಕರಾವಳಿ
ಬಂಟ್ವಾಳ, ಜ.24: ಹೆಸರಾಂತ ಯಕ್ಷಗಾನ ಕಲಾವಿದ, ಕಂಚಿನ ಕಂಠದ ಮಾತುಗಾರಿಕೆಯಿಂದ ಹೆಸರುವಾಸಿಯಾಗಿದ್ದ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಿದ್ದ ನಾರಾಯಣ ಶೆಟ್ಟಿ ಕನ್ನಡ, ತುಳು ಭಾಷೆಯ ಪ್ರಸಂಗಗಳಲ್ಲಿ ಮಿಂಚು ಹರಿಸಿದ್ದರು. ಕಂಚಿನ ಕಂಠದ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಯಿಂದಾಗಿ ಪೆರುವಾಯಿ ಶೈಲಿಯೆಂದೇ ಹೆಸರಾಗಿದ್ದರು.
ಕಟೀಲು ಮೇಳದಲ್ಲಿ ಸುದೀರ್ಘ ಕಾಲ ಕಲಾವಿದರಾಗಿದ್ದ ಅವರು ರಕ್ತಬೀಜ, ಹಿರಣ್ಯಕಶಿಪು, ಕಂಸ, ಸುಂದರರಾವಣ, ಋತುಪರ್ಣ, ಹನುಮಂತ, ಜಾಬಾಲಿ, ಅರುಣಾಸುರ, ಹಿರಣ್ಯಾಕ್ಷ, ಶಿಶುಪಾಲ ಹೀಗೆ ಹೆಚ್ಚು ರಾಕ್ಷಸ ಪಾತ್ರಗಳನ್ನು ಮಾಡಿ ರಂಗದಲ್ಲಿ ಮಿಂಚಿದ್ದರು. ಕುಂಡಾವು ಮೇಳದ ಮೂಲಕ ರಂಗ ಪ್ರವೇಶ ಮಾಡಿದ್ದ ಅವರು, ಕರ್ನಾಟಕ ಮೇಳ, ಧರ್ಮಸ್ಥಳ, ಪೊಳಲಿ, ಕದ್ರಿ, ಕುಂಬಳೆ ಮೇಳಗಳಲ್ಲಿ ತಿರುಗಾಟ ಮಾಡಿದ್ದರು. 1942ರಲ್ಲಿ ಬಂಟ್ವಾಳ ತಾಲೂಕಿನ ಪೆರುವಾಯಿ ಎಂಬಲ್ಲಿ ಜನಿಸಿದ್ದ ನಾರಾಯಣ ಶೆಟ್ಟಿ ಸುದೀರ್ಘ 50 ವರ್ಷಗಳ ಕಾಲ ಯಕ್ಷಗಾನ ಸೇವೆ ಮಾಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅನಾರೋಗ್ಯ ಕಾರಣದಿಂದ ತಿರುಗಾಟ ನಿಲ್ಲಿಸಿದ್ದರು. ತಾಳಮದ್ದಳೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದರು.
ತುಳು ಪ್ರಸಂಗಗಳಲ್ಲಿ ಕೋಟಿ, ದೇವುಪೂಂಜ ಮುಂತಾದ ಪಾತ್ರಗಳಿಗೆ ಪ್ರಸಿದ್ಧಿ ಪಡೆದಿದ್ದರು. 2016ನೇ ಸಾಲಿನ ಚೊಚ್ಚಲ “ಯಕ್ಷಧ್ರುವ ಪಟ್ಲ ಪ್ರಶಸ್ತಿ” ಸೇರಿದಂತೆ ಹಲವು ಸನ್ಮಾನ ಇವರಿಗೆ ಸಂದಿದೆ.
Mangalore Peruvia Narayana Shetty yakshagana artist dies at 82.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm