ಬ್ರೇಕಿಂಗ್ ನ್ಯೂಸ್
24-01-24 01:53 pm Mangalore Correspondent ಕರಾವಳಿ
ಬಂಟ್ವಾಳ, ಜ.24: ಹೆಸರಾಂತ ಯಕ್ಷಗಾನ ಕಲಾವಿದ, ಕಂಚಿನ ಕಂಠದ ಮಾತುಗಾರಿಕೆಯಿಂದ ಹೆಸರುವಾಸಿಯಾಗಿದ್ದ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಿದ್ದ ನಾರಾಯಣ ಶೆಟ್ಟಿ ಕನ್ನಡ, ತುಳು ಭಾಷೆಯ ಪ್ರಸಂಗಗಳಲ್ಲಿ ಮಿಂಚು ಹರಿಸಿದ್ದರು. ಕಂಚಿನ ಕಂಠದ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಯಿಂದಾಗಿ ಪೆರುವಾಯಿ ಶೈಲಿಯೆಂದೇ ಹೆಸರಾಗಿದ್ದರು.
ಕಟೀಲು ಮೇಳದಲ್ಲಿ ಸುದೀರ್ಘ ಕಾಲ ಕಲಾವಿದರಾಗಿದ್ದ ಅವರು ರಕ್ತಬೀಜ, ಹಿರಣ್ಯಕಶಿಪು, ಕಂಸ, ಸುಂದರರಾವಣ, ಋತುಪರ್ಣ, ಹನುಮಂತ, ಜಾಬಾಲಿ, ಅರುಣಾಸುರ, ಹಿರಣ್ಯಾಕ್ಷ, ಶಿಶುಪಾಲ ಹೀಗೆ ಹೆಚ್ಚು ರಾಕ್ಷಸ ಪಾತ್ರಗಳನ್ನು ಮಾಡಿ ರಂಗದಲ್ಲಿ ಮಿಂಚಿದ್ದರು. ಕುಂಡಾವು ಮೇಳದ ಮೂಲಕ ರಂಗ ಪ್ರವೇಶ ಮಾಡಿದ್ದ ಅವರು, ಕರ್ನಾಟಕ ಮೇಳ, ಧರ್ಮಸ್ಥಳ, ಪೊಳಲಿ, ಕದ್ರಿ, ಕುಂಬಳೆ ಮೇಳಗಳಲ್ಲಿ ತಿರುಗಾಟ ಮಾಡಿದ್ದರು. 1942ರಲ್ಲಿ ಬಂಟ್ವಾಳ ತಾಲೂಕಿನ ಪೆರುವಾಯಿ ಎಂಬಲ್ಲಿ ಜನಿಸಿದ್ದ ನಾರಾಯಣ ಶೆಟ್ಟಿ ಸುದೀರ್ಘ 50 ವರ್ಷಗಳ ಕಾಲ ಯಕ್ಷಗಾನ ಸೇವೆ ಮಾಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅನಾರೋಗ್ಯ ಕಾರಣದಿಂದ ತಿರುಗಾಟ ನಿಲ್ಲಿಸಿದ್ದರು. ತಾಳಮದ್ದಳೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದರು.
ತುಳು ಪ್ರಸಂಗಗಳಲ್ಲಿ ಕೋಟಿ, ದೇವುಪೂಂಜ ಮುಂತಾದ ಪಾತ್ರಗಳಿಗೆ ಪ್ರಸಿದ್ಧಿ ಪಡೆದಿದ್ದರು. 2016ನೇ ಸಾಲಿನ ಚೊಚ್ಚಲ “ಯಕ್ಷಧ್ರುವ ಪಟ್ಲ ಪ್ರಶಸ್ತಿ” ಸೇರಿದಂತೆ ಹಲವು ಸನ್ಮಾನ ಇವರಿಗೆ ಸಂದಿದೆ.
Mangalore Peruvia Narayana Shetty yakshagana artist dies at 82.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm