ಬ್ರೇಕಿಂಗ್ ನ್ಯೂಸ್
24-01-24 01:53 pm Mangalore Correspondent ಕರಾವಳಿ
ಬಂಟ್ವಾಳ, ಜ.24: ಹೆಸರಾಂತ ಯಕ್ಷಗಾನ ಕಲಾವಿದ, ಕಂಚಿನ ಕಂಠದ ಮಾತುಗಾರಿಕೆಯಿಂದ ಹೆಸರುವಾಸಿಯಾಗಿದ್ದ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಿದ್ದ ನಾರಾಯಣ ಶೆಟ್ಟಿ ಕನ್ನಡ, ತುಳು ಭಾಷೆಯ ಪ್ರಸಂಗಗಳಲ್ಲಿ ಮಿಂಚು ಹರಿಸಿದ್ದರು. ಕಂಚಿನ ಕಂಠದ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಯಿಂದಾಗಿ ಪೆರುವಾಯಿ ಶೈಲಿಯೆಂದೇ ಹೆಸರಾಗಿದ್ದರು.
ಕಟೀಲು ಮೇಳದಲ್ಲಿ ಸುದೀರ್ಘ ಕಾಲ ಕಲಾವಿದರಾಗಿದ್ದ ಅವರು ರಕ್ತಬೀಜ, ಹಿರಣ್ಯಕಶಿಪು, ಕಂಸ, ಸುಂದರರಾವಣ, ಋತುಪರ್ಣ, ಹನುಮಂತ, ಜಾಬಾಲಿ, ಅರುಣಾಸುರ, ಹಿರಣ್ಯಾಕ್ಷ, ಶಿಶುಪಾಲ ಹೀಗೆ ಹೆಚ್ಚು ರಾಕ್ಷಸ ಪಾತ್ರಗಳನ್ನು ಮಾಡಿ ರಂಗದಲ್ಲಿ ಮಿಂಚಿದ್ದರು. ಕುಂಡಾವು ಮೇಳದ ಮೂಲಕ ರಂಗ ಪ್ರವೇಶ ಮಾಡಿದ್ದ ಅವರು, ಕರ್ನಾಟಕ ಮೇಳ, ಧರ್ಮಸ್ಥಳ, ಪೊಳಲಿ, ಕದ್ರಿ, ಕುಂಬಳೆ ಮೇಳಗಳಲ್ಲಿ ತಿರುಗಾಟ ಮಾಡಿದ್ದರು. 1942ರಲ್ಲಿ ಬಂಟ್ವಾಳ ತಾಲೂಕಿನ ಪೆರುವಾಯಿ ಎಂಬಲ್ಲಿ ಜನಿಸಿದ್ದ ನಾರಾಯಣ ಶೆಟ್ಟಿ ಸುದೀರ್ಘ 50 ವರ್ಷಗಳ ಕಾಲ ಯಕ್ಷಗಾನ ಸೇವೆ ಮಾಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅನಾರೋಗ್ಯ ಕಾರಣದಿಂದ ತಿರುಗಾಟ ನಿಲ್ಲಿಸಿದ್ದರು. ತಾಳಮದ್ದಳೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದರು.
ತುಳು ಪ್ರಸಂಗಗಳಲ್ಲಿ ಕೋಟಿ, ದೇವುಪೂಂಜ ಮುಂತಾದ ಪಾತ್ರಗಳಿಗೆ ಪ್ರಸಿದ್ಧಿ ಪಡೆದಿದ್ದರು. 2016ನೇ ಸಾಲಿನ ಚೊಚ್ಚಲ “ಯಕ್ಷಧ್ರುವ ಪಟ್ಲ ಪ್ರಶಸ್ತಿ” ಸೇರಿದಂತೆ ಹಲವು ಸನ್ಮಾನ ಇವರಿಗೆ ಸಂದಿದೆ.
Mangalore Peruvia Narayana Shetty yakshagana artist dies at 82.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm