ಬ್ರೇಕಿಂಗ್ ನ್ಯೂಸ್
25-01-24 05:37 pm Udupi Correspondent ಕರಾವಳಿ
ಉಡುಪಿ, ಜ.25: ಶೆಟ್ಟರ್ ಬಿಜೆಪಿಗೆ ಮರಳುತ್ತಾರೆಂಬ ನಿರೀಕ್ಷೆ ಇತ್ತು. ನಮ್ಮ ಸಿದ್ದಾಂತದ ಜೊತೆ ಸುದೀರ್ಘ ಕಾಲ ಗುರುತಿಸಿಕೊಂಡಿದ್ದವರು. ಶೆಟ್ಟರ್ ಅವರಂತಹ ಸೈದ್ಧಾಂತಿಕ ಹಿನ್ನೆಲೆಯವರಿಗೆ ಬೇರೆ ಪಕ್ಷ ಒಗ್ಗುವುದಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಅವರು ಮರಳಿರುವುದರಿಂದ ಪಕ್ಷದ ಶಕ್ತಿ ವೃದ್ಧಿಯಾಗುತ್ತದೆ, ನಮ್ಮ ವಿಶ್ವಾಸ ಹೆಚ್ಚಾಗಿದೆ. ಶೆಟ್ಟರ್ ಮರು ಸೇರ್ಪಡೆಯಿಂದ ಮತ್ತಷ್ಟು ನಾಯಕರು ಬಿಜೆಪಿಗೆ ಮರಳುತ್ತಾರೆಂಬ ವಿಶ್ವಾಸ ಇದೆ ಎಂದು ಹೇಳಿದ ಕೋಟ, ಶೆಟ್ಟರ್ ಅವರು ಸುಧೀರ್ಘ ರಾಜಕೀಯ ಅನುಭವಿ ಮತ್ತು ಮುತ್ಸದ್ದಿ. ಜನಸಂಘ ಕಾಲದಿಂದ ಬಿಜೆಪಿ ಕಟ್ಟಿದವರು. ಅವರ ಮರು ಆಗಮನದಿಂದ ಖುಷಿ, ಸಮಾಧಾನ, ಸಂತೋಷವಾಗಿದೆ ಎಂದರು. ಶೆಟ್ಟರ್ ಬಿಜೆಪಿಯ ಪರಮೋಚ್ಚ ಮುಖಂಡರನ್ನು ಎಂದೂ ಟೀಕಿಸಿಲ್ಲ. ಆರೋಗ್ಯಕರ ಟೀಕೆಗಳನ್ನು ಮಾತ್ರ ಮಾಡುತ್ತಿದ್ದರು. ಶೆಟ್ಟರ್ ಪಕ್ಷಕ್ಕೆ ಮರಳಿದ ಕ್ರೆಡಿಟ್ ಪಕ್ಷಕ್ಕೆ ಸಲ್ಲುತ್ತದೆ. ಯಾರಿಗೂ ಒಬ್ಬರಿಗೆ ಅಲ್ಲ ಎಂದರು.
ಕಾಂಗ್ರೆಸ್ ಎಷ್ಟೇ ಅವಕಾಶ ಕೊಟ್ಟರೂ ಶೆಟ್ಟರ್ ರನ್ನು ಮುಖ್ಯಮಂತ್ರಿ ಮಾಡಿದ್ದು ಬಿಜೆಪಿ. ಅಧಿಕಾರಕ್ಕಿಂತ ಹೆಚ್ಚಾಗಿ ಸಮಾಧಾನ ಬೇಕು ಎಂದು ಬಿಜೆಪಿಗೆ ಮರಳಿದ್ದಾರೆ. ಎಂ ಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದಾರೆ. ಸಣ್ಣಪುಟ್ಟ ಮುನಿಸಿದ್ದರೂ ಸಿದ್ಧಾಂತಕ್ಕೆ ಬದ್ಧತೆ ಇದೆ ಎಂಬುದಕ್ಕೆ ಶೆಟರ್ ಸಾಕ್ಷಿ. ಲಕ್ಷ್ಮಣ ಸವದಿಯೂ ಮರು ಸೇರ್ಪಡೆ ಬಗ್ಗೆ ಚರ್ಚೆಯಾಗುತ್ತಿದೆ. ಸವದಿ ಕೂಡ ಶೆಟ್ಟರ್ ಹಾದಿ ತುಳಿಯುತ್ತಾರೆ ಎಂಬ ವಿಶ್ವಾಸವಿದೆ. ಮೋದಿ ನಾಯಕತ್ವವನ್ನು ರಾಷ್ಟ್ರವೇ ಪ್ರೀತಿಸುತ್ತಿದೆ. ರಾಮ ಪ್ರತಿಷ್ಠಾಪನೆ ನಂತರ ಕಾಂಗ್ರೆಸ್ ನಲ್ಲಿರುವ ಹಿಂದುಗಳು ಕೂಡ ಬಿಜೆಪಿಯ ವೈಚಾರಿಕತೆಯನ್ನು ಮೆಚ್ಚಿದ್ದಾರೆ. ರಾಷ್ಟ್ರವನ್ನು ಮುನ್ನಡೆಸುತ್ತಿರುವ ಮೋದಿಯವರನ್ನು ಒಪ್ಪಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
Shettar was expected to return to the BJP. He was associated with our ideology for a long time. Leader of Opposition in the Legislative Council Kota Srinivas Poojary said that no other party is suitable for people with ideological backgrounds like Shettar.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm