ಬ್ರೇಕಿಂಗ್ ನ್ಯೂಸ್
25-01-24 05:46 pm Mangalore Correspondent ಕರಾವಳಿ
ಪುತ್ತೂರು, ಜ.25: ಜಾಂಡಿಸ್ ರೋಗದಿಂದಾಗಿ ಲಿವರ್ ವೈಫಲ್ಯಕ್ಕೊಳಗಾಗಿದ್ದ ಅಕ್ಕನಿಗೆ ಸ್ವಂತ ತಂಗಿಯೇ ಲಿವರ್ ದಾನ ಮಾಡಿದರೂ ಅಕ್ಕನ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ನೆಹರು ನಗರದ ದಿ. ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಜ.24 ರಂದು ಲಿವರ್ ವೈಫಲ್ಯದಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಐಶ್ವರ್ಯ ಅವರಿಗೆ ಜಾಂಡೀಸ್ ಜ್ವರ ಬಾಧಿಸಿದ್ದು, ಮೊದಲು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆ ನಡೆಸಿದ ವೈದ್ಯರು ಅವರ ಲಿವರ್ ಹಾನಿಯಾಗಿದ್ದು, ಲಿವರ್ ಟ್ರಾನ್ಸ್ಪ್ಲಾಂಟ್ ಮಾಡಬೇಕೆಂದು ತಿಳಿಸಿದ್ದರು.

ಐಶ್ವರ್ಯ ಅವರ ತಾಯಿ ಮೊದಲು ಮಗಳಿಗಾಗಿ ಲಿವರ್ ದಾನ ಮಾಡಲು ಮುಂದಾಗಿದ್ದರು. ಆದರೆ ಅಕ್ಕನ ಮೇಲೆ ಅಪಾರ ಪ್ರೀತಿ ಹೊಂದಿದ್ದ ಬ್ಯಾಂಕ್ ಉದ್ಯೋಗಿಯಾಗಿರುವ ಅನುಷಾ ತಾನೇ ಲಿವರ್ ದಾನ ಮಾಡಲು ಮುಂದಾಗಿದ್ದರು. ಅಲ್ಲದೆ ಚಿಕಿತ್ಸೆಯ ಮುಂದುವರಿದ ಭಾಗವಾಗಿ ಐಶ್ವರ್ಯ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಕ್ಕನಿಗೋಸ್ಕರ ಅನುಷಾ ಕೂಡ ಅದೇ ಆಸ್ಪತ್ರೆಯಲ್ಲಿ ಲಿವರ್ ದಾನ ಮಾಡಿದ್ದರೂ ವಿಧಿಯಾಟಕ್ಕೆ ತುತ್ತಾದ ಐಶ್ವರ್ಯಾ ಚಿಕಿತ್ಸೆ ಪಡೆಯುತ್ತಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಲಿವರ್ ದಾನ ಮಾಡಿದ ತಂಗಿ ಅನುಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಂಜಿನಿಯರಿಂಗ್ ಪದವೀಧರೆಯಾಗಿದ್ದ ಐಶ್ವರ್ಯ ಚಿಕಿತ್ಸೆಗಾಗಿ 40 ಲಕ್ಷ ರೂ. ಖರ್ಚಾಗಿದ್ದು, ಜಾಲತಾಣಗಳಲ್ಲಿ ನೆರವು ಯಾಚಿಸಲಾಗಿತ್ತು. ಮೃತರು ತಾಯಿ, ಸಹೋದರಿಯನ್ನು ಅಗಲಿದ್ದಾರೆ.
In a tragic incident reported from Nehru Nagar, a young girl named Aishwarya (29) lost her life despite her younger sister, Anusha, selflessly donating her liver in an attempt to save Aishwarya from liver failure.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm