ಬ್ರೇಕಿಂಗ್ ನ್ಯೂಸ್
25-01-24 05:46 pm Mangalore Correspondent ಕರಾವಳಿ
ಪುತ್ತೂರು, ಜ.25: ಜಾಂಡಿಸ್ ರೋಗದಿಂದಾಗಿ ಲಿವರ್ ವೈಫಲ್ಯಕ್ಕೊಳಗಾಗಿದ್ದ ಅಕ್ಕನಿಗೆ ಸ್ವಂತ ತಂಗಿಯೇ ಲಿವರ್ ದಾನ ಮಾಡಿದರೂ ಅಕ್ಕನ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ನೆಹರು ನಗರದ ದಿ. ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಜ.24 ರಂದು ಲಿವರ್ ವೈಫಲ್ಯದಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಐಶ್ವರ್ಯ ಅವರಿಗೆ ಜಾಂಡೀಸ್ ಜ್ವರ ಬಾಧಿಸಿದ್ದು, ಮೊದಲು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆ ನಡೆಸಿದ ವೈದ್ಯರು ಅವರ ಲಿವರ್ ಹಾನಿಯಾಗಿದ್ದು, ಲಿವರ್ ಟ್ರಾನ್ಸ್ಪ್ಲಾಂಟ್ ಮಾಡಬೇಕೆಂದು ತಿಳಿಸಿದ್ದರು.

ಐಶ್ವರ್ಯ ಅವರ ತಾಯಿ ಮೊದಲು ಮಗಳಿಗಾಗಿ ಲಿವರ್ ದಾನ ಮಾಡಲು ಮುಂದಾಗಿದ್ದರು. ಆದರೆ ಅಕ್ಕನ ಮೇಲೆ ಅಪಾರ ಪ್ರೀತಿ ಹೊಂದಿದ್ದ ಬ್ಯಾಂಕ್ ಉದ್ಯೋಗಿಯಾಗಿರುವ ಅನುಷಾ ತಾನೇ ಲಿವರ್ ದಾನ ಮಾಡಲು ಮುಂದಾಗಿದ್ದರು. ಅಲ್ಲದೆ ಚಿಕಿತ್ಸೆಯ ಮುಂದುವರಿದ ಭಾಗವಾಗಿ ಐಶ್ವರ್ಯ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಕ್ಕನಿಗೋಸ್ಕರ ಅನುಷಾ ಕೂಡ ಅದೇ ಆಸ್ಪತ್ರೆಯಲ್ಲಿ ಲಿವರ್ ದಾನ ಮಾಡಿದ್ದರೂ ವಿಧಿಯಾಟಕ್ಕೆ ತುತ್ತಾದ ಐಶ್ವರ್ಯಾ ಚಿಕಿತ್ಸೆ ಪಡೆಯುತ್ತಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಲಿವರ್ ದಾನ ಮಾಡಿದ ತಂಗಿ ಅನುಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಂಜಿನಿಯರಿಂಗ್ ಪದವೀಧರೆಯಾಗಿದ್ದ ಐಶ್ವರ್ಯ ಚಿಕಿತ್ಸೆಗಾಗಿ 40 ಲಕ್ಷ ರೂ. ಖರ್ಚಾಗಿದ್ದು, ಜಾಲತಾಣಗಳಲ್ಲಿ ನೆರವು ಯಾಚಿಸಲಾಗಿತ್ತು. ಮೃತರು ತಾಯಿ, ಸಹೋದರಿಯನ್ನು ಅಗಲಿದ್ದಾರೆ.
In a tragic incident reported from Nehru Nagar, a young girl named Aishwarya (29) lost her life despite her younger sister, Anusha, selflessly donating her liver in an attempt to save Aishwarya from liver failure.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm