ಬ್ರೇಕಿಂಗ್ ನ್ಯೂಸ್
27-01-24 07:01 pm Mangalore Correspondent ಕರಾವಳಿ
ಮಂಗಳೂರು, ಜ.27: ದೈವ ನರ್ತನ ಮಾಡುತ್ತಿದ್ದಾಗಲೇ ಎದೆನೋವು ಕಾಣಿಸಿಕೊಂಡಿದ್ದ ಮಂಗಳೂರಿನ ಪ್ರಸಿದ್ಧ ದೈವ ನರ್ತಕರೊಬ್ಬರು ಆಸ್ಪತ್ರೆಗೆ ತೆರಳುವಷ್ಟರಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪದವಿನಂಗಡಿ ಗಂಧಕಾಡು ನಿವಾಸಿ ಅಶೋಕ್ ಬಂಗೇರ(47) ಸಾವನ್ನಪ್ಪಿದವರು.
ನಿನ್ನೆ ರಾತ್ರಿ ಹಳೆಯಂಗಡಿ ಸಮೀಪ ರಕ್ತೇಶ್ವರಿ ದೈವದ ವಾರ್ಷಿಕ ಉತ್ಸವದಲ್ಲಿ ದೈವಕ್ಕೆ ಕಟ್ಟಿದ್ದ ಅಶೋಕ್ ಬಂಗೇರ ಅವರಿಗೆ ರಾತ್ರಿ 10.30ರ ವೇಳೆಗೆ ಸಣ್ಣಮಟ್ಟಿನ ಎದೆನೋವು ಕಾಣಿಸಿಕೊಂಡಿತ್ತು. ಹಾಗಾಗಿ, ದೈವದ ವೇಷ ಕಳಚಿಟ್ಟು ಅರ್ಧದಲ್ಲೇ ನಿಲ್ಲಿಸಿದ್ದರು. ನೇಮ ಕೊನೆಯ ಘಟ್ಟದಲ್ಲಿದ್ದಾಗ ಸುಸ್ತು ಉಂಟಾಗಿದ್ದರಿಂದ ಉತ್ಸವದ ಕೊನೆಯ ಘಟ್ಟವನ್ನು ತಮ್ಮ ನಿರ್ವಹಿಸುತ್ತಾನೆಂದು ಹೇಳಿ ತುರ್ತಾಗಿ ಅಶೋಕ್ ಬಂಗೇರ ಅಲ್ಲಿಂದ ತೆರಳಿದ್ದರು. ನೇರವಾಗಿ ಆಸ್ಪತ್ರೆಗೆ ತೆರಳುವ ಬದಲು ಬಂಗೇರ ಅವರು ಪದವಿನಂಗಡಿಯ ಮನೆಗೆ ಆಗಮಿಸಿ ರಾತ್ರಿ ಮಲಗಿದ್ದರು. ಶನಿವಾರ ಬೆಳಗ್ಗೆ ಐದು ಗಂಟೆಯ ವೇಳೆಗೆ ಮತ್ತೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಹಳೆಯಂಗಡಿ ಕೊಳುವೈಲು ರೆಂಜದಡಿ ಕುಟುಂಬಸ್ಥರ ದೈವಸ್ಥಾನದಲ್ಲಿ ನಿನ್ನೆ ರಾತ್ರಿ ರಕ್ತೇಶ್ವರಿ ದೈವದ ವಾರ್ಷಿಕ ಉತ್ಸವ ನಡೆದಿತ್ತು. ಅರ್ಧಕ್ಕೆ ನಿಲ್ಲಿಸಿದ್ದರಿಂದ ದೈವದ ಕೋಲವನ್ನು ಅಶೋಕ್ ಬಂಗೇರ ಅವರ ತಮ್ಮ ಪೂರ್ಣಗೊಳಿಸಿದ್ದರು. ಅಶೋಕ್ ಬಂಗೇರ ಅವರು ರಾಜನ್ ದೈವಗಳಿಗೆ ಕಟ್ಟುವವರಾಗಿದ್ದು ಮಂಗಳೂರಿನಲ್ಲಿ ಪ್ರಸಿದ್ಧಿ ಹೊಂದಿದ್ದಾರೆ. ಅಶೋಕ್ ಬಂಗೇರ ಅವರು ಪದವಿನಂಗಡಿ ಕೊರಗಜ್ಜ ಕ್ಷೇತ್ರದ ಪಾತ್ರಿಯಾಗಿದ್ದರು. ಇವರ ಸೋದರ ಭಾಸ್ಕರ ಬಂಗೇರ ಗಂಧಕಾಡುವಿನಲ್ಲಿ ಕೊರಗಜ್ಜ ಕ್ಷೇತ್ರ ನಡೆಸುತ್ತಿದ್ದಾರೆ.
#DaivaNartaka Ashok Bangera Dies While Performing due to #heartattack at Kola Haleyangadi in #Mangalore #BREAKINGNEWS pic.twitter.com/sH2GMuNsOj
— Headline Karnataka (@hknewsonline) January 27, 2024
Daiva Nartaka Ashok Bangera Dies While Performing due to heart attack at Kola Haleyangadi in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm